AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!

ಅನ್ನಭಾಗ್ಯ ಅಕ್ಕಿ ತುಂಬಿದ್ದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಎಪಿಎಂಸಿ ಯಾರ್ಡ್​​ನಲ್ಲಿ ನಡೆದಿದೆ.

Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!
ಕಳವಾಗಿರುವ ಲಾರಿ
ಗಣಪತಿ ಶರ್ಮಾ
|

Updated on:May 31, 2023 | 8:09 PM

Share

ಯಾದಗಿರಿ: ಅನ್ನಭಾಗ್ಯ ಅಕ್ಕಿ (Anna Bhagya Yojana) ತುಂಬಿದ್ದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಎಪಿಎಂಸಿ ಯಾರ್ಡ್​​ನಲ್ಲಿ (APMC Market Shahapur Complex) ನಡೆದಿದೆ. ನ್ಯಾಯ ಬೆಲೆ ಅಂಗಡಿಗೆ ಸಾಗಿಸಲು ಎಪಿಎಂಸಿ ಯಾರ್ಡ್​​ನಲ್ಲಿ ಅಕ್ಕಿ ತುಂಬಿದ್ದ ಲಾರಿಯನ್ನು ನಿಲ್ಲಿಸಲಾಗಿತ್ತು. ಲಾರಿಯಲ್ಲಿ 20 ಟನ್ ಅಕ್ಕಿಯ 420 ಚೀಲಗಳಿದ್ದವು. ಲಾರಿ ಕಳವಿಗೆ ಅಧಿಕಾರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಪರಿಣಾಮವಾಗಿ ಬಡವರ ಹೊಟ್ಟೆ ತುಂಬಲು ಬಳಕೆಯಾಗಬೇಕಿದ್ದ ಅಕ್ಕಿ ಕಳ್ಳರ ಪಾಲಾಗಿದೆ.

ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಹಾಪುರ ಠಾಣೆಯ ಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಕಳ್ಳತನವಾಗಿದ್ದ 16 ವಶಪಡಿಸಿದ ಪೊಲೀಸರು

ಇತ್ತೀಚೆಗೆ ಕಳವಾಗಿದ್ದ 16 ಮೊಬೈಲ್ ಫೋನ್​​ಗಳನ್ನು ಪೊಲೀಸರು ಹುಡುಕಿಕೊಟ್ಟಿದ್ದಾರೆ. ಮೊಬೈಲ್ ಕಳ್ಳತನ ಬಗ್ಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಕೇಸ್ ದಾಖಲಿಸಿಕೊಂಡ ಬಳಿಕ ಮೊಬೈಲ್ ಫೋನ್​​ಗಳನ್ನ ಪತ್ತೆ ಹಚ್ಚಿದ ಪೊಲೀಸರು ಬುಧವಾರ ಎಸ್​​ಪಿ ಕಚೇರಿಗೆ ಕರೆದು ವಾರಸುದಾರರಿಗೆ ಫೋನ್ ವಾಪಸ್ ನೀಡಿದರು. ಯಾದಗಿರಿ ಎಸ್​​ಪಿ ಡಾ ಸಿಬಿ ವೇದಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಇನ್ನೂ ಸಾಕಷ್ಟು ಮೊಬೈಲ್ ಕಳ್ಳತನದ ಬಗ್ಗೆ ಕೇಸ್ ದಾಖಲಾಗಿದ್ದು ಹುಡುಕಿಕೊಡುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಯಾದಗಿರಿ ತಾಲೂಕಿನಲ್ಲಿ ಧಾರಾಕಾರ ಮಳೆ

ಯಾದಗಿರಿ ತಾಲೂಕಿನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, 4 ಮನೆಗಳ ಮೇಲ್ಚಾವಣಿ ಹಾರಿಹೋಗಿದೆ. ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಮನೆಯಲ್ಲಿದ್ದ ದಿನಬಳಕೆ ವಸ್ತುಗಳು, ದವಸ ಧಾನ್ಯ ನೀರುಪಾಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Wed, 31 May 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು