AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ದೈಹಿಕ ಸಂಪರ್ಕಕ್ಕೆ ಒಲ್ಲೆ ಎಂದ ಪತ್ನಿಯ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಪತಿ

ಯಾದಗಿರಿಯ ಸುರಪುರದ ಡೊಣ್ಣಿಗೇರದಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಕೌಂಟುಂಬಿಕ ಹಿಂಸೆಯಿಂದಾಗಿ ತವರು ಮನೆ ಸೇರಿದ್ದ ಮಹಿಳೆಯನ್ನು ಹುಡುಕಿಕೊಂಡು ಬಂದಿದ್ದ ಆಕೆಯ ಪತಿಯೇ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇಷ್ಟಕ್ಕೂ ಈ ಕೊಲೆ ನಡೆದಿದ್ದು, ಮಹಿಳೆ ಪತಿಯ ಜತೆ ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ್ದಕ್ಕೆ ಎನ್ನಲಾಗಿದೆ.

ಯಾದಗಿರಿ: ದೈಹಿಕ ಸಂಪರ್ಕಕ್ಕೆ ಒಲ್ಲೆ ಎಂದ ಪತ್ನಿಯ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಪತಿ
ಮರೆಮ್ಮ ಮತ್ತು ಸಂಗಪ್ಪ
ಅಮೀನ್​ ಸಾಬ್​
| Edited By: |

Updated on: Oct 06, 2025 | 12:27 PM

Share

ಯಾದಗಿರಿ, ಅಕ್ಟೋಬರ್ 6: ದೈಹಿಕ ಸಂಪರ್ಕಕ್ಕೆ ಒಪ್ಪದ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ದಾರುಣ ಘಟನೆ ಯಾದಗಿರಿ (Yadgir) ಜಿಲ್ಲೆಯ ಸುರಪುರದ ನಗರದ ಡೊಣ್ಣಿಗೇರ ಬಡಾವಣೆಯಲ್ಲಿ ನಡೆದಿದೆ. 40 ವರ್ಷ ವಯಸ್ಸಿನ ಸಂಗಪ್ಪ ಪತ್ನಿ ಮರೆಮ್ಮ (35) ಕೊಲೆ ಮಾಡಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಸುರಪುರ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಸಂಗಪ್ಪನನ್ನು ಬಂಧಿಸಲಾಗಿದೆ.

ಗಂಡ ಹೆಂಡತಿ ಮಧ್ಯೆ ಭಾನುವಾರ ರಾತ್ರಿ ದೈಹಿಕ ಸಂಪರ್ಕ ವಿಚಾರವಾಗಿ ಜಗಳವಾಗಿತ್ತು. ಪತ್ನಿ ದೈಹಿಕ ಸಂಪರ್ಕಕ್ಕೆ ಒಪ್ಪಿರಲಿಲ್ಲ. ಈ ವೇಳೆ, ಜಗಳ ವಿಕೋಪಕ್ಕೆ ತಿರುಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.

ಕೊಲೆಗಾರ ಸಂಗಪ್ಪ ಕಳೆದ ಎರಡು ದಿನಗಳ ಹಿಂದ ತನ್ನ ಊರಾದ ಕಕ್ಕೇರದಿಂದ ಸುರಪುರಕ್ಕೆ ಬಂದಿದ್ದ. ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಒಂದು ವರ್ಷದಿಂದ ಮರೆಮ್ಮ ತವರು ಮನೆಯಲ್ಲಿದ್ದರು. ಭಾನುವಾರ ಸುರಪುರಕ್ಕೆ ಬಂದ ಸಂಗಪ್ಪ ಪತ್ನಿಯನ್ನು ದೈಹಿಕ ಸಂಪರ್ಕಕ್ಕೆ ಆಗ್ರಹಿಸಿದ್ದಾನೆ. ಒಪ್ಪದೇ ಇರುವುದಕ್ಕೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: ನೀರು ಕೊಡದಿದ್ದಕ್ಕೆ ಪತಿಯಿಂದ ಹಲ್ಲೆ: ಕೋಮಾಗೆ ಜಾರಿದ್ದ ಮಹಿಳೆ ಸಾವು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

(ಮಾಹಿತಿ ಅಪ್​ಡೇಟ್ ಆಗಲಿದೆ)

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ