AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ನಗರಸಭೆ ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ

ಹಿಂದಿನ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ 18 ಕೋಟಿ ರೂ. ನಷ್ಟ ಎಸಗಿದ್ದ ಪ್ರಕರಣವನ್ನು ಬಯಲಿಗೆಳೆದ ಯಾದಗಿರಿ ನಗರಸಭೆ ಪೌರಾಯುಕ್ತರಿಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಕಚೇರಿ ಬಳಿ ಪ್ರತಿದಿನ ಅನಾಮಿಕ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂದು ಆರೋಪಿಸಿ ರಕ್ಷಣೆ ನೀಡುವಂತೆ ಪೌರಾಯುಕ್ತ ಸಂಗಪ್ಪ ಉಪಾಸೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಯಾದಗಿರಿ ನಗರಸಭೆ ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ
ಯಾದಗಿರಿ ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ
ಅಮೀನ್​ ಸಾಬ್​
| Updated By: Rakesh Nayak Manchi|

Updated on: Aug 22, 2023 | 12:12 PM

Share

ಯಾದಗಿರಿ, ಆಗಸ್ಟ್ 22: ನಗರಸಭೆ (Yadgir Municipal Corporation) ಅಕ್ರಮ ಬಯಲಿಗೆಳೆದ ಪೌರಾಯುಕ್ತ ಸಂಗಪ್ಪ ಉಪಾಸೆ ಅವರಿಗೆ ಜೀವ ಬೆದರಿಕೆ ಕರೆಗಳು ಬರುಲಾರಂಭಿಸಿದ್ದು, ರಕ್ಷಣೆ ಕೋರಿ ಉಪಾಸೆ ಅವರು ಪೊಲೀಸರ ಮೊರೆ ಹೋಗಿದ್ದಾರೆ. ಹಿಂದಿನ ಅಧಿಕಾರಿಗಳ ಅಕ್ರಮ ಬಯಲಿಗೆಳೆದಿದ ನಂತರ ಸಂಗಪ್ಪ ಅವರಿಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿದ್ದು, ಕಚೇರಿ ಬಳಿ ಪ್ರತಿನಿತ್ಯ ಅನಾಮಿಕ ವ್ಯಕ್ತಿಗಳು ಓಡಾಡಲು ಆರಂಭಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನಕಲಿ‌ ದಾಖಲಗಳನ್ನು ಸೃಷ್ಟಿಸಿ ಕೃಷಿ ಭೂಮಿಯಲ್ಲಿ 1,310 ಖಾತಾ ನೀಡಿ ಸರ್ಕಾರದ ಬೊಕ್ಕಸಕ್ಕೆ 18 ಕೋಟಿ ರೂ. ನಷ್ಟ ಆಗಿರುವುದನ್ನು ಪೌರಾಯುಕ್ತ ಸಂಗಪ್ಪ ಅವರು ಪತ್ತೆ ಹಚ್ಚಿದ್ದರು. ಅಲ್ಲದೇ ನಾಲ್ಕು ಕೋಟಿ ಮೌಲ್ಯದ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆ ಮಾಡಿದ್ದನ್ನ ಬಯಲಿಗೆ ಎಳೆದಿದ್ದರು.

ಇದನ್ನೂ ಓದಿ: ಯಾದಗಿರಿ: ನಕಲಿ ದಾಖಲೆ ಸೃಷ್ಟಿಸಿ 18ಕೋಟಿ ರೂ. ಮೌಲ್ಯದ ಸರ್ಕಾರಿ ಆಸ್ತಿ ಪರಭಾರೆ, ನೋಟಿಸ್ ಜಾರಿ

ಇದೇ ಪ್ರಕರಣ ಸಂಬಂಧ ನಗರಸಭೆ ಸದಸ್ಯೆಯ ಪತಿ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರ ಹೆಸರು ಪ್ರಸ್ತಾಪಿಸಿದ್ದರು. ಇದೇ ಕಾರಣಕ್ಕೆ ನಿತ್ಯವೂ ಅನಾಮಿಕ ವ್ಯಕ್ತಿಗಳು ಕಚೇರಿ ಸುತ್ತವೂ ಓಡುತ್ತಿದ್ದಾರೆ. ರಾತ್ರಿ ವೇಳೆ ಬೇದರಿಕೆ ಕರೆಗಳು ಬರುತ್ತಿವೆ. ನನ್ನ ತೇಜೋವಧೆ ಮಾಡುವುದಲ್ಲದೇ, ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಪೌರಾಯಕ್ತ ಸಂಗಪ್ಪ ಉಪಾಸೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ