ಯಾದಗಿರಿ: ಕಲುಷಿತ ನೀರು ಹಾಗೂ ಫುಡ್ ಪಾಯಿಸನ್​ನಿಂದ ಮಕ್ಕಳು ಸೇರಿ 24 ಜನರಿಗೆ ವಾಂತಿ ಭೇದಿ

ಕೊಳವೆ ಬಾವಿಯ ನೀರು ಸೇವಿಸಿದ 16 ಮಕ್ಕಳಿಗೆ ವಾಂತಿ ಭೇದಿಯಾಗಿದ್ದು ಮಕ್ಕಳನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ಫುಡ್ ಪಾಯಿಸನ್ ನಿಂದ ಪಶ್ಚಿಮ ಬಂಗಾಳ ಮೂಲದ 8 ಕಾರ್ಮಿಕರಿಗೆ ವಾಂತಿ ಭೇದಿಯಾಗಿದೆ. ಸರಿಯಾಗಿ ಬೇಯಿಸದೆ ಮೀನು ಆಹಾರ ಸೇವಿಸಿದ ಹಿನ್ನೆಲೆ ಕಾರ್ಮಿಕರಿಗೆ ವಾಂತಿ ಭೇದಿಯಾಗಿದೆ ಎನ್ನಲಾಗುತ್ತಿದೆ.

ಯಾದಗಿರಿ: ಕಲುಷಿತ ನೀರು ಹಾಗೂ ಫುಡ್ ಪಾಯಿಸನ್​ನಿಂದ ಮಕ್ಕಳು ಸೇರಿ 24 ಜನರಿಗೆ ವಾಂತಿ ಭೇದಿ
ಕೊಳವೆ ಬಾವಿಯ ನೀರು ಸೇವಿಸಿದ 5 ಮಕ್ಕಳಿಗೆ ವಾಂತಿ ಭೇದಿ
Follow us
| Updated By: ಆಯೇಷಾ ಬಾನು

Updated on:Aug 28, 2023 | 1:46 PM

ಯಾದಗಿರಿ, ಆ.28: ಕಲುಷಿತ ನೀರು(Contaminated Water) ಸೇವಿಸಿ ಅಸ್ವಸ್ಥಗೊಳ್ಳುವ ಘಟನೆಗಳು ಯಾದಗಿರಿ ಜಿಲ್ಲೆಯಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಿದೆ. ಇತ್ತೀ​ಚೆ​ಗೆ ಗುರುಮಠಕಲ್‌ ತಾಲೂಕಿನ ಅನಪುರ, ಶಿವಪುರ, ಮಾರ​ಲ​ಭಾವಿ, ಗಾಜರಕೋಟ್‌ನಲ್ಲಿ ಕಲುಷಿತ ನೀರು ಸೇವನೆಯಿಂದಾದ ಅನಾಹುತಗಳು ಮಾಸುವ ಮುನ್ನವೇ, ಇದೀಗ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ. ಕಲುಷಿತ ನೀರು ಹಾಗೂ ಫುಡ್ ಪಾಯಿಸನ್ ನಿಂದ(Food Poison) 24 ಜನರಿಗೆ ವಾಂತಿ ಭೇದಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಕಂಡು ಬಂದಿದೆ.

ಕೊಳವೆ ಬಾವಿಯ ನೀರು ಸೇವಿಸಿದ 16 ಮಕ್ಕಳಿಗೆ ವಾಂತಿ ಭೇದಿಯಾಗಿದ್ದು ಮಕ್ಕಳನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ಫುಡ್ ಪಾಯಿಸನ್ ನಿಂದ ಪಶ್ಚಿಮ ಬಂಗಾಳ ಮೂಲದ 8 ಕಾರ್ಮಿಕರಿಗೆ ವಾಂತಿ ಭೇದಿಯಾಗಿದೆ. ಸರಿಯಾಗಿ ಬೇಯಿಸದೆ ಮೀನು ಆಹಾರ ಸೇವಿಸಿದ ಹಿನ್ನೆಲೆ ಕಾರ್ಮಿಕರಿಗೆ ವಾಂತಿ ಭೇದಿಯಾಗಿದೆ ಎನ್ನಲಾಗುತ್ತಿದೆ. ಕಾರ್ಮಿಕರು ಸದ್ಯ ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಕಲುಷಿತ ನೀರು ಸೇವನೆ ಶಂಕೆ, 19 ಜನರಲ್ಲಿ ವಾಂತಿ ಭೇದಿ

ಕಳೆದ ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾರ​ಲ​ಭಾವಿ ಗ್ರಾಮ​ದಲ್ಲಿ ಕಲುಷಿತ ನೀರು ಸೇವನೆಯಿಂದ 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಮಾರಲಭಾವಿ ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ವಸ್ತು ಸೇರಿದ್ದು, ಇದನ್ನು ಸೇವಿಸಿದವರಿಗೆ ವಾಂತಿಬೇಧಿ ಉಂಟಾಗಿತ್ತು. ಮಕ್ಕಳು, ಯುವಕರು ಹಾಗೂ ವಯೋವೃದ್ಧರು ಸೇರಿದಂತೆ 10ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು. ಈ ಗ್ರಾಮಕ್ಕೆ ಕುಡಿಯುವ ನೀರಿನ ಮೂಲವಾಗಿದ್ದ ಬಾವಿಯಲ್ಲಿ ಕೆಲವು ದಿನಗಳ ಹಿಂದೆ ಹಂದಿ ಸತ್ತು ಬಿದ್ದಿತ್ತಂತೆ, ಇದರ ಸ್ವಚ್ಛತೆಗೆ ಕ್ರಮ ಕೈಗೊಂಡಿರಲಿಲ್ಲ. ಈ ವಿಚಾರ ತಿಳಿಯದ ಕೆಲವರು ನೀರು ಸೇವಿಸಿ ಅಸ್ವಸ್ಥಗೊಂಡಿದ್ದರು ಎಂಬ ಮಾತು ಕೇಳಿ ಬಂದಿತ್ತು.

ಯಾದಗಿರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:15 am, Mon, 28 August 23

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ