AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮೂರು ಶಾಲೆಗಳಲ್ಲಿ ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ
ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ
ಅಮೀನ್​ ಸಾಬ್​
| Edited By: |

Updated on: Jun 15, 2024 | 8:10 AM

Share

ಯಾದಗಿರಿ, ಜೂನ್.15: ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡ ಘಟನೆ ನಿನ್ನೆ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಯಾದಗಿರಿ (Yadgir) ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ ವಾಂತಿ ಭೇದಿ ಕಂಡು ಬಂದಿದ್ದು ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಈ ನಾಲ್ಕು ಶಾಲೆಗಳಿಗೂ ಖಾಸಗಿ ಶಿವಶಕ್ತಿ ಏಜೆನ್ಸಿಯಿಂದ ಆಹಾರ ಪದಾರ್ಥ ಸರಬರಾಜು ಆಗುತ್ತೆ. ನಿನ್ನೆ ಮಧ್ಯಾಹ್ನ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿ ಪ್ರಕರಣ: ಮೃತರ ಸಂಖ್ಯೆ 6ಕ್ಕೆ ಏರಿಕೆ

ಶಾಲೆ ಆರಂಭವಾದ್ರು ಮಕ್ಕಳಿಗಿಲ್ಲ‌ ಹಾಸ್ಟೆಲ್ ಭಾಗ್ಯ

ಈ ವರ್ಷದ ಶೈಕ್ಷಣಿಕ ವರ್ಷ ಆರಂಭವಾಗಿದ್ದು ಕಳೆದ ಮೇ 31 ರಿಂದ ಶಾಲೆಗಳು ಆರಂಭವಾಗಿವೆ. ಹೀಗಾಗಿ ಮಕ್ಕಳು ಹೆಗಲಿಗೆ ಬ್ಯಾಗ್ ಹಾಕಿಕೊಂಡು ಶಾಲೆಗೆ ಬರ್ತಾಯಿದ್ದಾರೆ. ಇನ್ನು ದೂರದ ಊರಿನ ಮಕ್ಕಳು ಶಾಲೆ ಆರಂಭವಾಗಿದ್ದಕ್ಕೆ ಲಗೇಜ್ ಸಮೇತವಾಗಿ ಪಟ್ಟಣಕ್ಕೆ ಬಂದಿದ್ದಾರೆ. ಶಾಲೆ ಜೊತೆಗೆ ಹಾಸ್ಟೆಲ್ ಗಳು ಓಪನ್ ಆಗುತ್ತೆ ಅಂತ ವಿದ್ಯಾರ್ಥಿಗಳು ಲಗೇಜ್ ಸಮೇತವಾಗಿ ಬಂದಿದ್ದಾರೆ. ಆದ್ರೆ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದೆ ಯಾಕೆಂದ್ರೆ ಶಾಲೆಯೇನೋ ಆರಂಭವಾಗಿವೆ. ಆದ್ರೆ ಹಾಸ್ಟೆಲ್ ಗಳು ಮಾತ್ರ ಓಪನ್ ಆಗಿಲ್ಲ. ಇದು ಕೇವಲ ಸಮಾಜ ಕಲ್ಯಾಣ ಇಲಾಖೆಯ ವ್ತಾಪ್ತಿಗೆ ಬರುವ ಮೆಟ್ರಿಕ್ ಪೂರ್ವದ ಹಾಸ್ಟೆಲ್ ಗಳು ಮಾತ್ರ ಓಪನ್ ಆಗಿಲ. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಎಸ್ಸಿ, ಎಸ್ಟಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ 33 ಹಾಸ್ಟೆಲ್ ಗಳಿವೆ. ಆದ್ರೆ ಈ ಹಾಸ್ಟೆಲ್ ಗಳು ಶಾಲೆಗಳು ಪ್ರಾರಂಭವಾದ ದಿನದಿಂದ ಆರಂಭಿಸಬೇಕು ಆದ್ರೆ ಹಾಸ್ಟೆಲ್ ಗಳನ್ನ ಲಾಕ್ ಮಾಡಿಕೊಂಡು ಮಕ್ಕಳು ಬರದೆ ಹಾಗೆ ಮಾಡಿದ್ದಾರೆ. ಇದರಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ