AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮೂರು ಶಾಲೆಗಳಲ್ಲಿ ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ
ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ
ಅಮೀನ್​ ಸಾಬ್​
| Edited By: ಆಯೇಷಾ ಬಾನು|

Updated on: Jun 15, 2024 | 8:10 AM

Share

ಯಾದಗಿರಿ, ಜೂನ್.15: ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡ ಘಟನೆ ನಿನ್ನೆ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಯಾದಗಿರಿ (Yadgir) ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ ವಾಂತಿ ಭೇದಿ ಕಂಡು ಬಂದಿದ್ದು ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಈ ನಾಲ್ಕು ಶಾಲೆಗಳಿಗೂ ಖಾಸಗಿ ಶಿವಶಕ್ತಿ ಏಜೆನ್ಸಿಯಿಂದ ಆಹಾರ ಪದಾರ್ಥ ಸರಬರಾಜು ಆಗುತ್ತೆ. ನಿನ್ನೆ ಮಧ್ಯಾಹ್ನ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿ ಪ್ರಕರಣ: ಮೃತರ ಸಂಖ್ಯೆ 6ಕ್ಕೆ ಏರಿಕೆ

ಶಾಲೆ ಆರಂಭವಾದ್ರು ಮಕ್ಕಳಿಗಿಲ್ಲ‌ ಹಾಸ್ಟೆಲ್ ಭಾಗ್ಯ

ಈ ವರ್ಷದ ಶೈಕ್ಷಣಿಕ ವರ್ಷ ಆರಂಭವಾಗಿದ್ದು ಕಳೆದ ಮೇ 31 ರಿಂದ ಶಾಲೆಗಳು ಆರಂಭವಾಗಿವೆ. ಹೀಗಾಗಿ ಮಕ್ಕಳು ಹೆಗಲಿಗೆ ಬ್ಯಾಗ್ ಹಾಕಿಕೊಂಡು ಶಾಲೆಗೆ ಬರ್ತಾಯಿದ್ದಾರೆ. ಇನ್ನು ದೂರದ ಊರಿನ ಮಕ್ಕಳು ಶಾಲೆ ಆರಂಭವಾಗಿದ್ದಕ್ಕೆ ಲಗೇಜ್ ಸಮೇತವಾಗಿ ಪಟ್ಟಣಕ್ಕೆ ಬಂದಿದ್ದಾರೆ. ಶಾಲೆ ಜೊತೆಗೆ ಹಾಸ್ಟೆಲ್ ಗಳು ಓಪನ್ ಆಗುತ್ತೆ ಅಂತ ವಿದ್ಯಾರ್ಥಿಗಳು ಲಗೇಜ್ ಸಮೇತವಾಗಿ ಬಂದಿದ್ದಾರೆ. ಆದ್ರೆ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದೆ ಯಾಕೆಂದ್ರೆ ಶಾಲೆಯೇನೋ ಆರಂಭವಾಗಿವೆ. ಆದ್ರೆ ಹಾಸ್ಟೆಲ್ ಗಳು ಮಾತ್ರ ಓಪನ್ ಆಗಿಲ್ಲ. ಇದು ಕೇವಲ ಸಮಾಜ ಕಲ್ಯಾಣ ಇಲಾಖೆಯ ವ್ತಾಪ್ತಿಗೆ ಬರುವ ಮೆಟ್ರಿಕ್ ಪೂರ್ವದ ಹಾಸ್ಟೆಲ್ ಗಳು ಮಾತ್ರ ಓಪನ್ ಆಗಿಲ. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಎಸ್ಸಿ, ಎಸ್ಟಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ 33 ಹಾಸ್ಟೆಲ್ ಗಳಿವೆ. ಆದ್ರೆ ಈ ಹಾಸ್ಟೆಲ್ ಗಳು ಶಾಲೆಗಳು ಪ್ರಾರಂಭವಾದ ದಿನದಿಂದ ಆರಂಭಿಸಬೇಕು ಆದ್ರೆ ಹಾಸ್ಟೆಲ್ ಗಳನ್ನ ಲಾಕ್ ಮಾಡಿಕೊಂಡು ಮಕ್ಕಳು ಬರದೆ ಹಾಗೆ ಮಾಡಿದ್ದಾರೆ. ಇದರಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ