AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮೂರು ಶಾಲೆಗಳಲ್ಲಿ ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ
ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ
ಅಮೀನ್​ ಸಾಬ್​
| Edited By: |

Updated on: Jun 15, 2024 | 8:10 AM

Share

ಯಾದಗಿರಿ, ಜೂನ್.15: ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡ ಘಟನೆ ನಿನ್ನೆ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಯಾದಗಿರಿ (Yadgir) ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ ವಾಂತಿ ಭೇದಿ ಕಂಡು ಬಂದಿದ್ದು ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಈ ನಾಲ್ಕು ಶಾಲೆಗಳಿಗೂ ಖಾಸಗಿ ಶಿವಶಕ್ತಿ ಏಜೆನ್ಸಿಯಿಂದ ಆಹಾರ ಪದಾರ್ಥ ಸರಬರಾಜು ಆಗುತ್ತೆ. ನಿನ್ನೆ ಮಧ್ಯಾಹ್ನ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿ ಪ್ರಕರಣ: ಮೃತರ ಸಂಖ್ಯೆ 6ಕ್ಕೆ ಏರಿಕೆ

ಶಾಲೆ ಆರಂಭವಾದ್ರು ಮಕ್ಕಳಿಗಿಲ್ಲ‌ ಹಾಸ್ಟೆಲ್ ಭಾಗ್ಯ

ಈ ವರ್ಷದ ಶೈಕ್ಷಣಿಕ ವರ್ಷ ಆರಂಭವಾಗಿದ್ದು ಕಳೆದ ಮೇ 31 ರಿಂದ ಶಾಲೆಗಳು ಆರಂಭವಾಗಿವೆ. ಹೀಗಾಗಿ ಮಕ್ಕಳು ಹೆಗಲಿಗೆ ಬ್ಯಾಗ್ ಹಾಕಿಕೊಂಡು ಶಾಲೆಗೆ ಬರ್ತಾಯಿದ್ದಾರೆ. ಇನ್ನು ದೂರದ ಊರಿನ ಮಕ್ಕಳು ಶಾಲೆ ಆರಂಭವಾಗಿದ್ದಕ್ಕೆ ಲಗೇಜ್ ಸಮೇತವಾಗಿ ಪಟ್ಟಣಕ್ಕೆ ಬಂದಿದ್ದಾರೆ. ಶಾಲೆ ಜೊತೆಗೆ ಹಾಸ್ಟೆಲ್ ಗಳು ಓಪನ್ ಆಗುತ್ತೆ ಅಂತ ವಿದ್ಯಾರ್ಥಿಗಳು ಲಗೇಜ್ ಸಮೇತವಾಗಿ ಬಂದಿದ್ದಾರೆ. ಆದ್ರೆ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದೆ ಯಾಕೆಂದ್ರೆ ಶಾಲೆಯೇನೋ ಆರಂಭವಾಗಿವೆ. ಆದ್ರೆ ಹಾಸ್ಟೆಲ್ ಗಳು ಮಾತ್ರ ಓಪನ್ ಆಗಿಲ್ಲ. ಇದು ಕೇವಲ ಸಮಾಜ ಕಲ್ಯಾಣ ಇಲಾಖೆಯ ವ್ತಾಪ್ತಿಗೆ ಬರುವ ಮೆಟ್ರಿಕ್ ಪೂರ್ವದ ಹಾಸ್ಟೆಲ್ ಗಳು ಮಾತ್ರ ಓಪನ್ ಆಗಿಲ. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಎಸ್ಸಿ, ಎಸ್ಟಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ 33 ಹಾಸ್ಟೆಲ್ ಗಳಿವೆ. ಆದ್ರೆ ಈ ಹಾಸ್ಟೆಲ್ ಗಳು ಶಾಲೆಗಳು ಪ್ರಾರಂಭವಾದ ದಿನದಿಂದ ಆರಂಭಿಸಬೇಕು ಆದ್ರೆ ಹಾಸ್ಟೆಲ್ ಗಳನ್ನ ಲಾಕ್ ಮಾಡಿಕೊಂಡು ಮಕ್ಕಳು ಬರದೆ ಹಾಗೆ ಮಾಡಿದ್ದಾರೆ. ಇದರಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್