AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮೂರು ಶಾಲೆಗಳಲ್ಲಿ ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ
ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ
ಅಮೀನ್​ ಸಾಬ್​
| Edited By: ಆಯೇಷಾ ಬಾನು|

Updated on: Jun 15, 2024 | 8:10 AM

Share

ಯಾದಗಿರಿ, ಜೂನ್.15: ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡ ಘಟನೆ ನಿನ್ನೆ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಯಾದಗಿರಿ (Yadgir) ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ ವಾಂತಿ ಭೇದಿ ಕಂಡು ಬಂದಿದ್ದು ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಈ ನಾಲ್ಕು ಶಾಲೆಗಳಿಗೂ ಖಾಸಗಿ ಶಿವಶಕ್ತಿ ಏಜೆನ್ಸಿಯಿಂದ ಆಹಾರ ಪದಾರ್ಥ ಸರಬರಾಜು ಆಗುತ್ತೆ. ನಿನ್ನೆ ಮಧ್ಯಾಹ್ನ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿ ಪ್ರಕರಣ: ಮೃತರ ಸಂಖ್ಯೆ 6ಕ್ಕೆ ಏರಿಕೆ

ಶಾಲೆ ಆರಂಭವಾದ್ರು ಮಕ್ಕಳಿಗಿಲ್ಲ‌ ಹಾಸ್ಟೆಲ್ ಭಾಗ್ಯ

ಈ ವರ್ಷದ ಶೈಕ್ಷಣಿಕ ವರ್ಷ ಆರಂಭವಾಗಿದ್ದು ಕಳೆದ ಮೇ 31 ರಿಂದ ಶಾಲೆಗಳು ಆರಂಭವಾಗಿವೆ. ಹೀಗಾಗಿ ಮಕ್ಕಳು ಹೆಗಲಿಗೆ ಬ್ಯಾಗ್ ಹಾಕಿಕೊಂಡು ಶಾಲೆಗೆ ಬರ್ತಾಯಿದ್ದಾರೆ. ಇನ್ನು ದೂರದ ಊರಿನ ಮಕ್ಕಳು ಶಾಲೆ ಆರಂಭವಾಗಿದ್ದಕ್ಕೆ ಲಗೇಜ್ ಸಮೇತವಾಗಿ ಪಟ್ಟಣಕ್ಕೆ ಬಂದಿದ್ದಾರೆ. ಶಾಲೆ ಜೊತೆಗೆ ಹಾಸ್ಟೆಲ್ ಗಳು ಓಪನ್ ಆಗುತ್ತೆ ಅಂತ ವಿದ್ಯಾರ್ಥಿಗಳು ಲಗೇಜ್ ಸಮೇತವಾಗಿ ಬಂದಿದ್ದಾರೆ. ಆದ್ರೆ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದೆ ಯಾಕೆಂದ್ರೆ ಶಾಲೆಯೇನೋ ಆರಂಭವಾಗಿವೆ. ಆದ್ರೆ ಹಾಸ್ಟೆಲ್ ಗಳು ಮಾತ್ರ ಓಪನ್ ಆಗಿಲ್ಲ. ಇದು ಕೇವಲ ಸಮಾಜ ಕಲ್ಯಾಣ ಇಲಾಖೆಯ ವ್ತಾಪ್ತಿಗೆ ಬರುವ ಮೆಟ್ರಿಕ್ ಪೂರ್ವದ ಹಾಸ್ಟೆಲ್ ಗಳು ಮಾತ್ರ ಓಪನ್ ಆಗಿಲ. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಎಸ್ಸಿ, ಎಸ್ಟಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ 33 ಹಾಸ್ಟೆಲ್ ಗಳಿವೆ. ಆದ್ರೆ ಈ ಹಾಸ್ಟೆಲ್ ಗಳು ಶಾಲೆಗಳು ಪ್ರಾರಂಭವಾದ ದಿನದಿಂದ ಆರಂಭಿಸಬೇಕು ಆದ್ರೆ ಹಾಸ್ಟೆಲ್ ಗಳನ್ನ ಲಾಕ್ ಮಾಡಿಕೊಂಡು ಮಕ್ಕಳು ಬರದೆ ಹಾಗೆ ಮಾಡಿದ್ದಾರೆ. ಇದರಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ