AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಪ್ರವಾದಿ ಮೊಹಮ್ಮದ್ ನಿಂದಿಸುವವರ ಶಿರಚ್ಛೇದ ಮಾಡಿ, ಪ್ರಚೋದನಕಾರಿ ರೀಲ್ಸ್ ಮಾಡುತ್ತಿದ್ದ ಇಬ್ಬರ ಬಂಧನ

"ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸುವವರ ಶಿರಚ್ಛೇದ ಮಾಡಿ" ಎಂದು ಹೇಳಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.

ಯಾದಗಿರಿ: ಪ್ರವಾದಿ ಮೊಹಮ್ಮದ್ ನಿಂದಿಸುವವರ ಶಿರಚ್ಛೇದ ಮಾಡಿ, ಪ್ರಚೋದನಕಾರಿ ರೀಲ್ಸ್ ಮಾಡುತ್ತಿದ್ದ ಇಬ್ಬರ ಬಂಧನ
ಅಕ್ಬರ್ ಸೈಯದ್ ಬಹದ್ದೂರ್ ಅಲಿ, ಮೊಹಮ್ಮದ್ ಅಯಾಜ್
TV9 Web
| Edited By: |

Updated on:Aug 09, 2023 | 12:59 PM

Share

ಯಾದಗಿರಿ, ಆ.09: ‘ಮಹಮ್ಮದ್‌ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವವರನ್ನು, ಅವಮಾನ ಮಾಡಿದವರ ತಲೆ ಕಡೆಯಿರಿ’ ಎಂಬ ಪ್ರಚೋದನಕಾರಿ ಸಂದೇಶದ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಯಾದಗಿರಿ ಪೊಲೀಸರು ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಯಾದಗಿರಿ ಗ್ರಾಮಾಂತರ ಠಾಣೆಯ ‍ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆಶನಾಳ ಗ್ರಾಮದ ಅಕ್ಬರ್ ಸೈಯದ್ ಬಹದ್ದೂರ್ ಅಲಿ (23), ಹತ್ತಿಕುಣಿ ಕ್ರಾಸ್‌ ನಿವಾಸಿ ಮೊಹಮ್ಮದ್ ಅಯಾಜ್ (21) ಬಂಧಿತರು.

ಮೂರು ದಿನಗಳ ಹಿಂದೆ ಸೈಯದ್ ಅಲಿ ಅಕ್ಬರ್ ಜಾಗೀರದಾರ್ ಎಂಬ ವ್ಯಕ್ತಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವಿಡಿಯೋಗಳನ್ನು ಅಪ್‌ಲೋಡ್ ಮಾಡಿದ್ದ. ಇನ್‌ಸ್ಟಾಗ್ರಾಮ್ ರೀಲ್‌ನಲ್ಲಿ, ಸೈಯದ್ “ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸುವವರ ಶಿರಚ್ಛೇದ ಮಾಡಿ” ಎಂದು ಹೇಳಿದ್ದ. ಮತ್ತೊಂದು ವಿಡಿಯೋದಲ್ಲಿ, “ಕುರಾನ್ ಪ್ರಕಾರ ಕಾಫಿರರಿಗೆ(ಅನ್ಯ ಧರ್ಮಿಯರು) ಇರುವ ಏಕೈಕ ಸ್ಥಳವೆಂದರೆ ನರಕ” ಎಂದು ಹೇಳಿದ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಚೋದನಕಾರಿ ವಿಡಿಯೋ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಸದ್ಯ ಯಾದಗಿರಿ ಜಿಲ್ಲಾ ಪೊಲೀಸರು ಮಂಗಳವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಅದೇ ರಾತ್ರಿ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 153 ಅಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ದಾವಣಗೆರೆ: ಅನಾರೋಗ್ಯ ನಾಟಕವಾಡಿ ಚುನಾವಣೆ ಮುಂದೂಡಿದ ಅಧಿಕಾರಿ; ಗ್ರಾ.ಪಂ ಸದಸ್ಯರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ

‘ನಾವು ಅಹಿಲೇ ಸುನ್ನತೆ ಜಮಾತ್‌ನವರಿದ್ದೇವೆ ಗೆಳೆಯರೆ. ನಮಗೆ ಬಾಲ್ಯದಿಂದ ಇದನ್ನೇ ಕಲಿಸಿಕೊಡಲಾಗಿದೆ. ಜೀವನದಲ್ಲಿ ಎಲ್ಲ ಕಷ್ಟವನ್ನು ಎದುರಿಸಿ. ಆದರೆ, ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದರೆ ಅವರ ದೇಹದಿಂದ ರುಂಡವನ್ನು ಬೇರ್ಪಡಿಸಿ’ ಎಂದು ವೈರಲ್ ವಿಡಿಯೋದಲ್ಲಿ ಹೇಳಲಾಗಿದೆ.

‘‌ಯುವತಿಯರನ್ನು ಬುಟ್ಟಿಗೆ ಹಾಕಿಕೊಂಡು ಗಂಡಸು ಎಂದುಕೊಳ್ಳುವವರೇ, ಗಂಡಸೇ ಆಗಿದ್ದರೆ 15 ನಿಮಿಷಕ್ಕಾಗಿ ಮೈದಾನಕ್ಕೆ ಬನ್ನಿ. ಮುಸ್ಲಿಮರ ಮೇಲೆ ದೌರ್ಜನ್ಯ ಎಸಗುವವರೇ, ಮುಸ್ಲಿಮರನ್ನೇ ಟಾರ್ಗೆಟ್ ಮಾಡುವವರೇ ಎಷ್ಟು ಹಾರಾಡ್ತಿರಾ? ಹಾರಾಡಿ ಈ ಜಗತ್ತಿನಲ್ಲಿ. ಕುರಾನ್ ಬಹಳ ಸ್ಪಷ್ಟವಾಗಿ ಹೇಳುತ್ತದೆ. ಕಾಫಿರ್ (ಅನ್ಯ ಧರ್ಮಿಯರು) ಕೊನೆಗೆ ನಿಮ್ಮ ಸ್ಥಾನ ನರಕ’ ಎಂದು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೊಡ್‌ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:56 pm, Wed, 9 August 23

ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು
ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು
ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ
ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ
PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ
PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ
ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು
ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?