AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಪ್ರವಾದಿ ಮೊಹಮ್ಮದ್ ನಿಂದಿಸುವವರ ಶಿರಚ್ಛೇದ ಮಾಡಿ, ಪ್ರಚೋದನಕಾರಿ ರೀಲ್ಸ್ ಮಾಡುತ್ತಿದ್ದ ಇಬ್ಬರ ಬಂಧನ

"ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸುವವರ ಶಿರಚ್ಛೇದ ಮಾಡಿ" ಎಂದು ಹೇಳಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.

ಯಾದಗಿರಿ: ಪ್ರವಾದಿ ಮೊಹಮ್ಮದ್ ನಿಂದಿಸುವವರ ಶಿರಚ್ಛೇದ ಮಾಡಿ, ಪ್ರಚೋದನಕಾರಿ ರೀಲ್ಸ್ ಮಾಡುತ್ತಿದ್ದ ಇಬ್ಬರ ಬಂಧನ
ಅಕ್ಬರ್ ಸೈಯದ್ ಬಹದ್ದೂರ್ ಅಲಿ, ಮೊಹಮ್ಮದ್ ಅಯಾಜ್
TV9 Web
| Edited By: |

Updated on:Aug 09, 2023 | 12:59 PM

Share

ಯಾದಗಿರಿ, ಆ.09: ‘ಮಹಮ್ಮದ್‌ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವವರನ್ನು, ಅವಮಾನ ಮಾಡಿದವರ ತಲೆ ಕಡೆಯಿರಿ’ ಎಂಬ ಪ್ರಚೋದನಕಾರಿ ಸಂದೇಶದ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಯಾದಗಿರಿ ಪೊಲೀಸರು ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಯಾದಗಿರಿ ಗ್ರಾಮಾಂತರ ಠಾಣೆಯ ‍ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆಶನಾಳ ಗ್ರಾಮದ ಅಕ್ಬರ್ ಸೈಯದ್ ಬಹದ್ದೂರ್ ಅಲಿ (23), ಹತ್ತಿಕುಣಿ ಕ್ರಾಸ್‌ ನಿವಾಸಿ ಮೊಹಮ್ಮದ್ ಅಯಾಜ್ (21) ಬಂಧಿತರು.

ಮೂರು ದಿನಗಳ ಹಿಂದೆ ಸೈಯದ್ ಅಲಿ ಅಕ್ಬರ್ ಜಾಗೀರದಾರ್ ಎಂಬ ವ್ಯಕ್ತಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವಿಡಿಯೋಗಳನ್ನು ಅಪ್‌ಲೋಡ್ ಮಾಡಿದ್ದ. ಇನ್‌ಸ್ಟಾಗ್ರಾಮ್ ರೀಲ್‌ನಲ್ಲಿ, ಸೈಯದ್ “ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸುವವರ ಶಿರಚ್ಛೇದ ಮಾಡಿ” ಎಂದು ಹೇಳಿದ್ದ. ಮತ್ತೊಂದು ವಿಡಿಯೋದಲ್ಲಿ, “ಕುರಾನ್ ಪ್ರಕಾರ ಕಾಫಿರರಿಗೆ(ಅನ್ಯ ಧರ್ಮಿಯರು) ಇರುವ ಏಕೈಕ ಸ್ಥಳವೆಂದರೆ ನರಕ” ಎಂದು ಹೇಳಿದ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಚೋದನಕಾರಿ ವಿಡಿಯೋ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಸದ್ಯ ಯಾದಗಿರಿ ಜಿಲ್ಲಾ ಪೊಲೀಸರು ಮಂಗಳವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಅದೇ ರಾತ್ರಿ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 153 ಅಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ದಾವಣಗೆರೆ: ಅನಾರೋಗ್ಯ ನಾಟಕವಾಡಿ ಚುನಾವಣೆ ಮುಂದೂಡಿದ ಅಧಿಕಾರಿ; ಗ್ರಾ.ಪಂ ಸದಸ್ಯರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ

‘ನಾವು ಅಹಿಲೇ ಸುನ್ನತೆ ಜಮಾತ್‌ನವರಿದ್ದೇವೆ ಗೆಳೆಯರೆ. ನಮಗೆ ಬಾಲ್ಯದಿಂದ ಇದನ್ನೇ ಕಲಿಸಿಕೊಡಲಾಗಿದೆ. ಜೀವನದಲ್ಲಿ ಎಲ್ಲ ಕಷ್ಟವನ್ನು ಎದುರಿಸಿ. ಆದರೆ, ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದರೆ ಅವರ ದೇಹದಿಂದ ರುಂಡವನ್ನು ಬೇರ್ಪಡಿಸಿ’ ಎಂದು ವೈರಲ್ ವಿಡಿಯೋದಲ್ಲಿ ಹೇಳಲಾಗಿದೆ.

‘‌ಯುವತಿಯರನ್ನು ಬುಟ್ಟಿಗೆ ಹಾಕಿಕೊಂಡು ಗಂಡಸು ಎಂದುಕೊಳ್ಳುವವರೇ, ಗಂಡಸೇ ಆಗಿದ್ದರೆ 15 ನಿಮಿಷಕ್ಕಾಗಿ ಮೈದಾನಕ್ಕೆ ಬನ್ನಿ. ಮುಸ್ಲಿಮರ ಮೇಲೆ ದೌರ್ಜನ್ಯ ಎಸಗುವವರೇ, ಮುಸ್ಲಿಮರನ್ನೇ ಟಾರ್ಗೆಟ್ ಮಾಡುವವರೇ ಎಷ್ಟು ಹಾರಾಡ್ತಿರಾ? ಹಾರಾಡಿ ಈ ಜಗತ್ತಿನಲ್ಲಿ. ಕುರಾನ್ ಬಹಳ ಸ್ಪಷ್ಟವಾಗಿ ಹೇಳುತ್ತದೆ. ಕಾಫಿರ್ (ಅನ್ಯ ಧರ್ಮಿಯರು) ಕೊನೆಗೆ ನಿಮ್ಮ ಸ್ಥಾನ ನರಕ’ ಎಂದು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೊಡ್‌ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:56 pm, Wed, 9 August 23

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ