PM Modi Speech: ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ಮೋದಿ ಭಾಷಣ: ಈ ಹಿಂದಿನ ಸರ್ಕಾರಗಳು ಯಾದಗಿರಿಯಂಥ ಹಲವು ಜಿಲ್ಲೆಗಳನ್ನು ಹಿಂದುಳಿದಿವೆ ಎಂದು ಘೋಷಿಸಿ ಕೈತೊಳೆದುಕೊಂಡಿದ್ದವು. ಆದರೆ ನಾವು ಈ ಜಿಲ್ಲೆಗಳು ಹಿಂದುಳಿದಿರುವ ಕಾರಣಗಳನ್ನು ಹುಡುಕಿ, ಪರಿಹರಿಸಲು ಯತ್ನಿಸಿದೆವು ಎಂದು ಪ್ರಧಾನಿ ಮೋದಿ ಹೇಳಿದರು.

PM Modi Speech: ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ: ಪ್ರಧಾನಿ ನರೇಂದ್ರ ಮೋದಿ
ಯಾದಗಿರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
Follow us
| Updated By: Rakesh Nayak Manchi

Updated on:Jan 19, 2023 | 1:33 PM

ಯಾದಗಿರಿ: ನಾವು ಎಂದಿಗೂ ವೋಟ್​ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ಅಭಿವೃದ್ಧಿಗೆ ಒತ್ತುಕೊಡುತ್ತೇವೆ. ಅಭಿವೃದ್ಧಿಯನ್ನೇ ಗಮನದಲ್ಲಿರಿಸಿಕೊಂಡು ರಾಜಕಾರಣ ಮಾಡುತ್ತೇವೆ. ಯಾದರಿಗಿ ಸಹಿತವಾಗಿ ದೇಶದ ನೂರಾರು ಇಂಥ ಜಿಲ್ಲೆಗಳಲ್ಲಿ ಆಕಾಂಕ್ಷಿ ಜಿಲ್ಲೆ ಎನ್ನುವ ಹೊಸ ಕಾರ್ಯಕ್ರಮ ಆರಂಭಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹೇಳಿದರು. ಹಲವು ಯೋಜನೆಗಳು ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಮಾತನಾಡಿದ ಅವರು, ಈ ಕ್ಷೇತ್ರವು ಅಭಿವೃದ್ಧಿ ಯಾತ್ರೆಯಲ್ಲಿ ಬಹಳ ಹಿಂದೆ ಬಿದ್ದಿತ್ತು. ಹಿಂದೆ ಇದ್ದ ಸರ್ಕಾರಗಳು ಯಾದಗಿರಿಯಂಥ ಹಲವು ಜಿಲ್ಲೆಗಳನ್ನು ಹಿಂದುಳಿದಿವೆ ಎಂದು ಘೋಷಿಸಿ ಕೈತೊಳೆದುಕೊಂಡಿದ್ದವು. ಆದರೆ ನಾವು ಹಾಗಲ್ಲ. ಈ ಜಿಲ್ಲೆಗಳು ಹಿಂದುಳಿದಿರುವ ಕಾರಣಗಳನ್ನು ಹುಡುಕಿ, ಪರಿಹರಿಸಲು ಯತ್ನಿಸಿದೆವು. ಆದರೆ ಹಿಂದಿದ್ದವರು ಅವನ್ನು ಹುಡುಕಲು ಸಮಯ ಕೊಡಲೇ ಇಲ್ಲ. ರಸ್ತೆ, ವಿದ್ಯುತ್, ನೀರಿನಂಥ ಸೌಕರ್ಯ ಒದಗಿಸಲು ಹಿಂದಿನ ಸರ್ಕಾರಗಳು ವಿಫಲವಾದವು. ಅವರು ಮತಬ್ಯಾಂಕ್ ರಾಜಕಾರಣಕ್ಕೇ ಒತ್ತು ಕೊಟ್ಟರು. ಜಾತಿ, ಮತಗಳನ್ನು ಮುಂದಿಟ್ಟು ರಾಜಕಾರಣ ಮಾಡಿದರು ಎಂದರು.

ಕರ್ನಾಟಕದಲ್ಲಿಂದು ಸಾವಿರಾರು ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ನಾರಾಯಣಪುರ ಎಡದಂಡೆ ಯೋಜನೆಯ ವಿಸ್ತರಣೆ, ಆಧುನೀಕರಣಗೊಳಿಸಲಾಗಿದೆ. ಇದರಿಂದ ಮೂರು ಜಿಲ್ಲೆಗಳ ಲಕ್ಷಾಂತರ ರೈತರಿಗೆ ನೇರ ಲಾಭವಾಗಲಿದೆ. ಯಾದರಿಗಿಯ ಲಕ್ಷಾಂತರ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು. ಸೂರತ್-ಚೆನ್ನೈ ಎಕನಾಮಿಕ್ ಕಾರಿಡರ್​ನ ಕರ್ನಾಟಕದ ಭಾಗದ ಕೆಲಸವು ಇಂದಿನಿಂದ ಆರಂಭವಾಗಲಿದೆ. ಇದರಿಂದ ಯಾದಗಿರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಜನಜೀವನ ಸುಧಾರಿಸಲಿದೆ. ಉದ್ಯಮಗಳು ಹೆಚ್ಚಾಗಲಿವೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: PM Narendra Modi: ಉತ್ತರ ಕರ್ನಾಟಕಕ್ಕೆ 2ನೇ ಬಾರಿ ಆಗಮಿಸುತ್ತಿರುವ ಪ್ರಧಾನಿ ಮತದಾರರ ಮೇಲೆ ಮೋಡಿ ಮಾಡಲಿದ್ದಾರೆಯೇ?

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆಗುತ್ತಿರುವ ಕೆಲಸಗಳು ಶ್ಲಾಘನೀಯ. ಇದಕ್ಕಾಗಿ ಸಿಎಂ ಬೊಮ್ಮಾಯಿ ಮತ್ತು ಅವರ ಸಚಿವರನ್ನು ಅಭಿನಂದಿಸುತ್ತೇನೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಮುಂದಿನ 25 ವರ್ಷಗಳ ಕನಸು ಹೊತ್ತು ನಾವು ಮುನ್ನಡೆಯುತ್ತಿದ್ದೇವೆ. ಇದು ನಮಗೆಲ್ಲರಿಗೂ ಅಮೃತ ಕಾಲ. ಈ ಅಮೃತ ಕಾಲದಲ್ಲಿ ನಾವು ವಿಕಸಿತ ಭಾರತವನ್ನು ನಿರ್ಮಿಸಬೇಕಿದೆ. ಭಾರತದ ಎಲ್ಲ ನಾಗರಿಕರಿಗೆ, ಕುಟುಂಬಗಳಿಗೆ, ರಾಜ್ಯಗಳು ಅಭಿಯಾನದ ಭಾಗವಾದಾಗ ಮಾತ್ರ ಭಾರತ ವಿಕಸಿತವಾಗಲಿದೆ. ರೈತರು, ಕಾರ್ಮಿಕರು ಮತ್ತು ಎಲ್ಲರ ಬದುಕು ಸುಧಾರಿಸಿದಾಗ ಮಾತ್ರ ಭಾರತ ವಿಕಸಿತವಾಗಲಿದೆ. ಕೃಷಿಯಲ್ಲಿ ಫಸಲು ಚೆನ್ನಾಗಿ ಬರಬೇಕು, ಕೈಗಾರಿಕೆಯಲ್ಲಿ ಉತ್ಪಾದನೆ ಚೆನ್ನಾಗಿ ಆಗಬೇಕು. ಆಗಷ್ಟೇ ಭಾರತ ವಿಕಸಿತವಾಗಲಿದೆ ಎಂದರು.

ದೇಶದ ಆರ್ಥಿಕತೆಗೆ ಉತ್ತರ ಕರ್ನಾಟಕದ ಕೊಡುಗೆ ದೊಡ್ಡದು: ಮೋದಿ

ನಾನು ಇಂದು ಯಾದಗಿರಿ ಬಂದು ಕರ್ನಾಟಕಕ್ಕೆ ಮತ್ತೊಂದು ಕೃತಜ್ಞತೆ ಅರ್ಪಿಸುತ್ತೇನೆ. ಇದು ತೊಗರಿಯ ಕಣಜ. ಕಳೆದ ಕೆಲ ವರ್ಷಗಳಲ್ಲಿ ತೊಗರಿಗಾಗಿ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಿದೆ. ದೇಶದ ಆರ್ಥಿಕತೆಯ ದೃಷ್ಟಿಯಿಂದ ಇದು ಬಹಳ ಮುಖ್ಯವಾದ ಬೆಳವಣಿಗೆ. ಇದಕ್ಕಾಗಿ ನಾನು ಉತ್ತರ ಕರ್ನಾಟಕದ ರೈತರಿಗೆ ಅಭಾರಿಯಾಗಿದ್ದೇನೆ. ತೊಗರಿ ಬೆಳೆಗಾರರಿಗಾಗಿ 7,000 ಕೋಟಿ ರೂ. ಪ್ರೋತ್ಸಾಹ ಧನ ನೀಡಿದ್ದೇವೆ. ಖಾದ್ಯತೈಲದಲ್ಲಿಯೂ ದೇಶ ಸ್ವಾವಲಂಬನೆಯತ್ತ ಸಾಗುತ್ತಿದೆ. ಇದರಲ್ಲಿಯೂ ಕರ್ನಾಟಕದ ಕೊಡುಗೆ ದೊಡ್ಡದು ಎಂದರು.

ಎಥೆನಾಲ್ ನೀತಿಯಲ್ಲಿ ಶೀಘ್ರ ಜಾರಿಗೊಳಿಸುತ್ತೇವೆ. ಇದನ್ನು ಸಾಧಿಸಲು ಕರ್ನಾಟಕದ ಕಬ್ಬು ಬೆಳೆಗಾರರ ಕೊಡುಗೆ ಅತ್ಯಗತ್ಯ. ನಾವು 2023ನೇ ಇಸವಿಯನ್ನು ಕಿರುಧಾನ್ಯಗಳ ವರ್ಷವಾಗಿ ಘೋಷಿಸಿದ್ದೇವೆ. ರಾಗಿ ಸೇರಿದಂತೆ ಹಲವು ಕಿರುಧಾನ್ಯಗಳನ್ನು ಬೆಳೆಯುವ ಕರ್ನಾಟಕ ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ. ಕರ್ನಾಟಕಕ್ಕೆ ಹೆಚ್ಚು ಲಾಭವಾಗಲಿದೆ ಎಂದರು.

ಇದನ್ನೂ ಓದಿ: PM Modi in Kalaburagi: ಕಲಬುರಗಿಯಲ್ಲಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ರೆಡಿ ಆಯ್ತು ಬಗೆಬಗೆ ತಿಂಡಿ, ಊಟ

ಉತ್ತರ ಕರ್ನಾಟಕದಲ್ಲಿ ಹೂಡಿಕೆ ಹೆಚ್ಚಳ: ಮೋದಿ

ದೇಶದ ಎರಡು ದೊಡ್ಡ ಬಂದರು ನಗರಿಗಳ ಸಂಪರ್ಕ ಮುಂದಿನ ದಿನಗಳಲ್ಲಿ ಸುಧಾರಿಸಲಿದೆ. ಇದರಿಂದ ಉದ್ಯೋಗಾವಕಾಶ ಹೆಚ್ಚಾಗಲಿದೆ. ಪ್ರವಾಸೋದ್ಯಮಕ್ಕೆ ಹೊಸ ಒತ್ತು ಸಿಗಲಿದೆ. ಮೂಲಸೌಕರ್ಯದ ವಿಚಾರದಲ್ಲಿ ಡಬಲ್ ಎಂಜಿನ್ ಸರ್ಕಾರದ ಪರಿಶ್ರಮದಿಂದಾಗಿ ಕರ್ನಾಟಕಕ್ಕೆ ಹೂಡಿಕೆಗಳು ಹರಿದು ಬರುತ್ತಿವೆ. ಉತ್ತರ ಕರ್ನಾಟಕಕ್ಕೂ ಈ ಹೂಡಿಕೆಯ ಲಾಭ ಸಿಕ್ಕೇ ಸಿಗುತ್ತದೆ. ಇನ್ನೊಮ್ಮೆ ಇದೇ ರೀತಿ ನಮಗೆ ಆಶೀರ್ವದಿಸಿ ಎಂದು ಕೋರುತ್ತೇನೆ. ಇಂಥ ಹಲವು ಯೋಜನೆಗಳಿಗೆ ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದರು.

ಸುಧಾರಣೆಯತ್ತ ಸಾಗುತ್ತಿದೆ ಯಾದಗಿರಿ: ಮೋದಿ

ಯಾದರಿಗಿಯಲ್ಲಿ ಮಕ್ಕಳ ಪೌಷ್ಟಿಕತೆ ವರ್ಧಿಸಲು ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಸೇವೆ ಸಿಗುತ್ತಿದೆ. ಶಿಕ್ಷಣ, ಆರೋಗ್ಯ, ಸಂಪರ್ಕದಲ್ಲಿ ಯಾದಗಿರಿಯು ಇಂದು ಟಾಪ್-10 ಆಕಾಂಕ್ಷಿ ಜಿಲ್ಲೆಗಳಲ್ಲಿ ಸ್ಥಾನ ಪಡೆದಿದೆ. ಈ ಸಾಧನೆಗಾಗಿ ಯಾದಗಿರಿಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತವನ್ನು ಶ್ಲಾಘಿಸುತ್ತೇನೆ ಎಂದರು.

ಹಲವು ಹೊಸ ಯೋಜನೆಗಳ ಅನುಷ್ಠಾನ: ಮೋದಿ

ಯಾದಗಿರಿಯಲ್ಲಿ ಈಗ ಹಲವು ಹೊಸ ಯೋಜನೆಗಳು ಜಾರಿಯಾಗುತ್ತಿವೆ. ಆಹಾರ ಉದ್ಯಮಗಳಿಗೆ ಇಲ್ಲಿ ಉತ್ತೇಜನ ಸಿಗುತ್ತಿದೆ. ಭಾರತವು ಅಭಿವೃದ್ಧಿಹೊಂದಲು ರಕ್ಷಣೆ ಮತ್ತು ಆಂತರಿಕ ಭದ್ರತೆಯೊಂದಿಗೆ ಉತ್ತಮ ಆಡಳಿತವೂ ಅತ್ಯಗತ್ಯ. ಡಬಲ್ ಎಂಜಿನ್ ಸರ್ಕಾರವು ಈ ಆಶಯ ಈಡೇರಿಸುತ್ತಿದೆ. ನಾವು ಘೋಷಿಸಿದ್ದ ಹಲವು ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಹಳೆಯ ಯೋಜನೆಗಳನ್ನೂ ಅನುಷ್ಠಾನಕ್ಕೆ ತಂದಿದ್ದೇವೆ. ಕರ್ನಾಟಕದಲ್ಲಿ ಹಲವು ಹೊಸ ಯೋಜನೆಗಳು ನಡೆಯುತ್ತಿವೆ. ನದಿಗಳ ಜೋಡಣೆಯಿಂದ ಬರಪೀಡಿತ ಪ್ರದೇಶಗಳ ಸಮಸ್ಯೆ ಪರಿಹರಿಸಲು ಯತ್ನಿಸುತ್ತಿದ್ದೇವೆ ಎಂದರು.

ಹನಿಹನಿ ನೀರು ಬಳಸೋಣ: ಮೋದಿ

ಈಗ ದೇಶದಲ್ಲಿ ‘ಪರ್ ಕ್ರಾಪ್, ಮೋರ್ ಕ್ರಾಪ್’ ಹಾಗೂ ‘ಮೈಕ್ರೋ ಇರಿಗೇಶನ್’ (ಪ್ರತಿ ಹನಿಗೆ ಹೆಚ್ಚು ಬೆಳೆ) ಯೋಜನೆಯನ್ನು ಆದ್ಯತೆಯೊಂದಿಗೆ ಜಾರಿಗೊಳಿಸುತ್ತಿದ್ದೇವೆ. ಕರ್ನಾಟಕದಲ್ಲಿಯೂ ಈ ಯೋಜನೆ ವೇಗವಾಗಿ ಅನುಷ್ಠಾನಗೊಳ್ಳುತ್ತಿದೆ. ಡಬಲ್ ಎಂಜಿನ್ ಸರ್ಕಾರವು ಅಂತರ್ಜಲ ವೃದ್ಧಿಗೂ ಸತತ ಪ್ರಯತ್ನ ಮಾಡುತ್ತಿದೆ. ಕೆರೆ-ಕುಂಟೆಗಳ ಪುನರುಜ್ಜೀವನಕ್ಕೆ ಒತ್ತು ಕೊಡುತ್ತಿದೆ ಎಂದರು.

ಮಹಿಳೆಯರ ಆಶೀರ್ವಾದ ಮೋದಿಗೆ ಸಿಗುತ್ತಿದೆ: ಮೋದಿ

ಡಬಲ್ ಎಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಜಲ್​ಜೀವನ್ ಮಿಷನ್​ ಉತ್ತಮ ಉದಾಹರಣೆಯಾಗಿದೆ. ನಾವು ಕಾರ್ಯಕ್ರಮ ಆರಂಭಿಸಿದಾಗ 3 ಕೋಟಿ ಮನೆಗಳಿಗೆ ಮಾತ್ರವೇ ನಲ್ಲಿ ಸಂಪರ್ಕ ಇತ್ತು. ಈಗ ದೇಶದಲ್ಲಿ 11 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 8 ಕೋಟಿ ಹೊಸ ಕುಟುಂಬಗಳಿಗೆ ಪೈಪ್​ಗಳ ಸಂಪರ್ಕ ಬಂದಿದೆ. ಇದರಲ್ಲಿ ಕರ್ನಾಟಕದ ಲಕ್ಷಾಂತರ ಕುಟುಂಬಗಳು ಸೇರಿವೆ. ಕರ್ನಾಟಕ ಮತ್ತು ದೇಶದ ಎಲ್ಲ ಮನೆಗಳಿಗೂ ನಾವು ನೀರು ಒದಗಿಸುತ್ತೇವೆ. ನಲ್ಲಿಯಿಂದ ನೀರು ಮನೆಗೆ ಬಂದಾಗ ತಾಯಂದಿರು ಮೋದಿಗೆ ಮನಃಪೂರ್ವಕ ಆಶೀರ್ವಾದ ಕೊಡುತ್ತಾರೆ ಎಂದರು.

ಮಕ್ಕಳ ಜೀವ ಉಳಿಸುವ ಶುದ್ಧ ನೀರು: ಮೋದಿ

ಜಲಜೀವನ್ ಮಿಷನ್​ನ ಮತ್ತೊಂದು ಮುಖ್ಯ ಉದ್ದೇಶವೆಂದರೆ ಮಕ್ಕಳ ಜೀವ ಉಳಿಸುವುದು. ಶುದ್ಧ ಕುಡಿಯುವ ನೀರು ಪೂರೈಕೆಯಾದರೆ ಲಕ್ಷಾಂತರ ಮಕ್ಕಳ ಜೀವ ಉಳಿಯುತ್ತದೆ. ಮಕ್ಕಳ ಜೀವ ಉಳಿಸುವುದಕ್ಕಿಂತಲೂ ಶ್ರೇಷ್ಠವಾದ ಕೆಲಸ ಯಾವುದಿದೆ? ಎಲ್ಲ ಮನೆಗಳಿಗೂ ನೀರು ಸಂಪರ್ಕ ಒದಗಿಸುವುದು ಡಬಲ್ ಎಂಜಿನ್ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಡಬಲ್ ಎಂಜಿನ್ ಎಂದರೆ ಡಬಲ್ ವೇಗ, ಡಬಲ್ ಲಾಭ. ಇದರಿಂದ ಎಲ್ಲರಿಗೂ ಒಳ್ಳೆಯದೇ ಆಗುತ್ತದೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: PM Modi Karnataka Visit: ಸುರಪುರ ಶಾಸಕ ರಾಜು ಗೌಡ ಪ್ರಧಾನಿಗಳಿಗೆ ಕಾಮದೇನು ಮೂರ್ತಿ ಕಾಣಿಕೆಯಾಗಿ ನೀಡಿದರು

ಡಬಲ್ ಎಂಜಿನ್​ನಿಂದ ಡಬಲ್ ಬೆನಿಫಿಟ್: ಮೋದಿ

ನಾವು ಹೊಸ ಶಿಕ್ಷಣ ನೀತಿ ಜಾರಿ ಮಾಡಿದೆವು, ಕರ್ನಾಟಕ ಸರ್ಕಾರ ವಿದ್ಯಾನಿಧಿ ಜಾರಿ ಮಾಡಿತು. ಕೇಂದ್ರ ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದರೆ ಕರ್ನಾಟಕ ಸರ್ಕಾರವು ಅವೆಲ್ಲವನ್ನೂ ಸಮರ್ಪಕವಾಗಿ ಬಳಸಿಕೊಂಡಿದೆ. ನಾವು ಮುದ್ರಾ ಯೋಜನೆಯಡಿ ಉದ್ಯಮಗಳಿಗೆ ಪ್ರೋತ್ಸಾಹ ಕೊಡುತ್ತೇವೆ. ಕೊವಿಡ್​ನಿಂದ ಬಾಧಿತರಾದ ಉದ್ಯಮಿಗಳಿಗೆ ಕರ್ನಾಟಕ ಸರ್ಕಾರ ನೆರವಾಗಿದೆ. ವಂಚಿತ ಕುಟುಂಬಗಳಿಗೆ, ಸಣ್ಣ ರೈತರಿಗೆ ಈವರೆಗೆ ಕೃಷಿ ನೀತಿಯಲ್ಲಿ ಆದ್ಯತೆ ಸಿಗುತ್ತಿರಲಿಲ್ಲ. ಆದರೆ ಈಗ ನಾವು ಡ್ರೋಣ್​, ನ್ಯಾನೊ ಯೂರಿಯಾದಂಥ ಆಧುನೀಕರಣಕ್ಕೆ ನೆರವಾಗುತ್ತಿದ್ದೇವೆ. ಇದರ ಜೊತೆಜೊತೆಗೆ ಸಹಜ-ಸಾವಯವ ಕೃಷಿಗೂ ಪ್ರೋತ್ಸಾಹಿಸುತ್ತಿದ್ದೇವೆ ಎಂದರು.

ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ, ಕಾರ್ಯಕರ್ತರ ಹರ್ಷೋದ್ಗಾರ

‘ಕರ್ನಾಟಕದಲ್ಲಿ ಎಲ್ಲ ಸಹೋದರ, ಸಹೋದರಿಯರಿಗೆ ನನ್ನ ವಂದನೆಗಳು’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ ಅವರು ನೆರೆದ ಸಾವಿರಾರು ಜನರು, ಅಭಿಮಾನಿಗಳು, ಕಾರ್ಯಕರ್ತರಿಗೆ ಕೈಮುಗಿದರು. ಈ ವೇಳೆ ಜನರು ‘ಮೋದಿ ಮೋದಿ’ ಎಂದು ಹರ್ಷೋದ್ಗಾರ ಮಾಡಿದರು.

ನಿಮ್ಮ ಆಶೀರ್ವಾದವೇ ನಮ್ಮ ಶಕ್ತಿ ಎಂದ ಮೋದಿ

ನನ್ನ ದೃಷ್ಟಿ ಎಷ್ಟು ದೂರ ಹೋಗಬಹುದೋ ಅಷ್ಟೂ ದೂರಕ್ಕೆ ಜನರೇ ಕಾಣಿಸುತ್ತಿದ್ದಾರೆ. ಹೆಲಿಪ್ಯಾಡ್​ನಲ್ಲಿಯೂ ಜನವೋ ಜನ. ಇಲ್ಲಿಯೂ ಅಷ್ಟೇ. ಪೆಂಡಾನ್​ನ ಹೊರಗೂ ಸಾವಿರಾರು ಜನರು ಬಿಸಿಲಿನಲ್ಲಿ ನಿಂತಿದ್ದಾರೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವೇ ನಮಗೆ ದೊಡ್ಡ ಶಕ್ತಿ ಎಂದರು.

ಸುರಪುರದ ಇತಿಹಾಸ ಸ್ಮರಿಸಿದ ಮೋದಿ

ಯಾದಗಿರಿಯು ಸಮೃದ್ಧ ಇತಿಹಾಸ ಹೊಂದಿದೆ. ರಟ್ಟಿಹಳ್ಳಿಯ ಸ್ಮಾರಕದ ಬಗ್ಗೆ ಎಲ್ಲರಿಗೂ ಗೊತ್ತಿದೆ. ನಮ್ಮ ಸಂಸ್ಕೃತಿಯ ಭಾಗವಾಗಿರುವ ಹಲವು ಅಂಶಗಳು ಇಲ್ಲಿದೆ. ಸುರಪುರದ ಹೋರಾಟಗಾರರು, ಮಹಾನ್ ರಾಜಾ ವೆಂಕಟಪ್ಪನಾಯಕ ಸ್ವರಾಜ್ಯದ ಹೋರಾಟದಲ್ಲಿ ವಿಖ್ಯಾತರಾದವರು. ಈ ನೆಲದ ಬಗ್ಗೆ ನಮಗೆ ಗರ್ವವಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:26 pm, Thu, 19 January 23

ತಾಜಾ ಸುದ್ದಿ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ