AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಪಿಎಸ್​ಐ ಅನುಮಾನಸ್ಪದವಾಗಿ ಸಾವು: ಕಾಂಗ್ರೆಸ್​ ಶಾಸಕನ ವಿರುದ್ಧ ದೂರು

ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಸಾವಿಗೆ ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್​ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ.

ಯಾದಗಿರಿ ಪಿಎಸ್​ಐ ಅನುಮಾನಸ್ಪದವಾಗಿ ಸಾವು: ಕಾಂಗ್ರೆಸ್​ ಶಾಸಕನ ವಿರುದ್ಧ ದೂರು
ಯಾದಗಿರಿ ಪಿಎಸ್​ಐ ಪರಶುರಾಮ, ಪತ್ನಿ ಶ್ವೇತಾ
ಅಮೀನ್​ ಸಾಬ್​
| Edited By: ವಿವೇಕ ಬಿರಾದಾರ|

Updated on: Aug 03, 2024 | 10:34 AM

Share

ಯಾದಗಿರಿ, ಆಗಸ್ಟ್​​ 03: ಯಾದಗಿರಿ (Yadgiri) ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ (PSI Parashuram) (34) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು (ಆ.03) ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಅವರ ಸಾವಿಗೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ (Congress MLA Chennareddy Patil) ಮತ್ತು ಪುತ್ರ ಪಂಪಣ್ಣಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್​​ಗಾಗಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್​ ಅವರನ್ನು ಮತ್ತೆ ಯಾದಗಿರಿ ಸೈಬರ್​ ಕ್ರೈಮ್​ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್​ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು. ಪಿಎಸ್​ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು. ಪಿಎಸ್​ಐ ಪರಶುರಾಮ್ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್​ನಲ್ಲಿ ಮಾತನಾಡಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಪಿಎಸ್​ಐ ಪರಶುರಾಮ ಸಾವಿಗೆ ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್​ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್ ಪದೇ ಪದೇ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ನಾವು ದಲಿತರು, ದುಡ್ಡು ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕರು ಪೋಸ್ಟಿಂಗ್ ಕೊಟ್ಟಿಲ್ಲ. ಶಾಸಕರು ತಪ್ಪು ಮಾಡಿದ್ದಾರೆ ಅವರು ಸ್ಥಳಕ್ಕೆ ಬರಬೇಕು ಎಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ಒತ್ತಾಯಿಸಿದ್ದಾರೆ. ಶ್ವೇತಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಗೀತಾ ಅವರ ಬಳಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಪ್ರೇಮಿಗಳಿಬ್ಬರ ಮದುವೆಗೆ ಅಡ್ಡಿಯಾದ ಜಾತಿ; ಮನೆಯವರ ವಿರೋಧಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್​ ಮೊರೆ

ಯಾದಗಿರಿ ಕಾಂಗ್ರೆಸ್​​ ಶಾಸಕ ಚೆನ್ನಾರೆಡ್ಡಿಗೆ ದುಡ್ಡಿನ ಆಸೆ ಹೆಚ್ಚಾಗಿದೆ. ಯಾದಗಿರಿ ಠಾಣೆಯಿಂದ ಅವಧಿ ಪೂರ್ವ ವರ್ಗಾವಣೆ ಮಾಡಿದ್ದಾರೆ. ಅವಧಿ ಪೂರ್ವ ವರ್ಗಾವಣೆಯಿಂದ ಪಿಎಸ್​ಐ ಪರಶುರಾಮ ನೊಂದಿದ್ದರು. ಏಳು ತಿಂಗಳ ಅವಧಿಯಲ್ಲಿ ಶಾಸಕರು ಬೇರೆಯವರಿಗೆ ಪೋಸ್ಟಿಂಗ್ ನೀಡಿದ್ದಾರೆ. ವರ್ಗಾವಣೆ ಮಾಡುತ್ತಿರುವುದು ಸಿಎಂ, ಗೃಹಸಚಿವರ ಗಮನಕ್ಕೆ ಬರಲಿಲ್ವಾ? ಎಂದು ಮೃತ ಪಿಎಸ್​ಐ ಪರಶುರಾಮ ಮಾವ ವೆಂಕಟಸ್ವಾಮಿ ಗಂಭೀರ ಆರೋಪ ಮಾಡಿದರು.

ಪೋಸ್ಟಿಂಗ್​​​ಗಾಗಿ ನನ್ನ ಅಳಿಯನಿಗೆ ಕಾಂಗ್ರೆಸ್ ಶಾಸಕರು ಹಣ ಕೇಳಿದರು. ಹೆಚ್ಚು ಹಣ ಕೊಟ್ಟವರಿಗೆ ಪೋಸ್ಟಿಂಗ್ ಕೊಡಿಸುವ ಕೆಲಸ ಮಾಡಿದ್ದಾರೆ. ಅವರಿಗಿಂತ ಪರಶುರಾಮ ಹಣ ಜಾಸ್ತಿ ಕೊಟ್ಟಿದ್ದರೆ ಪೋಸ್ಟಿಂಗ್ ಆಗುತ್ತಿತ್ತು. ಯಾದಗಿರಿ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಕಿಡಿ ಕಾರಿದರು.

ತಪ್ಪಿತಸ್ಥ ಎಂಎಲ್​ಎ ಚನ್ನಾರೆಡ್ಡಿ ಪಾಟೀಲ್​ರನ್ನು ಬಂಧಿಸುವಂತೆ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಮೃತ ಪಿಎಸ್​ಐ ಪರಶುರಾಮ ಕುಟುಂಬಸ್ಥರು ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಪ್ರತಿಭಟನೆ ನಡೆಸಿದರು. ಯಾದಗಿರಿ ಶಾಸಕ ಹಾಗೂ ಶಾಸಕರ ಪುತ್ರ ದುಡ್ಡಿಗಾಗಿ ಕಿರುಕುಳ ನೀಡುತ್ತಿದ್ದರು. 30 ರಿಂದ 40 ಲಕ್ಷ ದುಡ್ಡು ಕೇಳಿದ್ದಾರೆ. ಪೊಲೀಸರು ಸಹ ಶಾಸಕರ ಬೆಂಬಲವಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?