AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ತಾಪಮಾನ ಏರಿಕೆ ಪರಿಣಾಮ ನವಜಾತ ಶಿಶುಗಳಲ್ಲಿ ಕಿಡ್ನಿ ಬಾವು, ಆರೋಗ್ಯ ಸಮಸ್ಯೆ ಹೆಚ್ಚಳ

ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೆತ್ತಿ ಸುಡುವ ಬಿಸಿಲಿನಿಂದ ಯಾದಗಿರಿ ಜಿಲ್ಲೆಯ ಜನ ಕಂಗೆಟ್ಟು ಹೋಗಿದ್ದಾರೆ. ಬಿಸಿಲಿನ ತಾಪ ಕಂದಮ್ಮಗಳಿಗೂ ತಟ್ಟಿದೆ. ಬಿಸಿಲಿನ ಝಳ ಹೆಚ್ಚಾಗಿದ್ದಕ್ಕೆ ನವಜಾತ ಶಿಶುಗಳ ಆರೋಗ್ಯದಲ್ಲಿ ಏರುಪೇರು ಹೆಚ್ಚಾಗಿದೆ. ಇದೇ ಕಾರಣಕ್ಕೆ ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ನವಜಾತ ಶಿಶುಗಳ ದಾಖಲಾತಿ ಹೆಚ್ಚಾಗುತ್ತಿದೆ.

ಯಾದಗಿರಿ: ತಾಪಮಾನ ಏರಿಕೆ ಪರಿಣಾಮ ನವಜಾತ ಶಿಶುಗಳಲ್ಲಿ ಕಿಡ್ನಿ ಬಾವು, ಆರೋಗ್ಯ ಸಮಸ್ಯೆ ಹೆಚ್ಚಳ
ನವಜಾತ ಶಿಶುಗಳನ್ನು ಆಸ್ಪತ್ರೆಗೆ ದಾಖಲಿಸಿರುವುದು
ಅಮೀನ್​ ಸಾಬ್​
| Edited By: |

Updated on: Apr 14, 2025 | 8:17 AM

Share

ಯಾದಗಿರಿ, ಏಪ್ರಿಲ್ 14: ಕಲ್ಯಾಣ ಕರ್ನಾಟಕ (Kalyana Karnataka) ಪ್ರದೇಶ ಈಗ ಬಿಸಿಲ ಝಳದಿಂದ ಕಾದ ಕುಲುಮೆಯಂತಾಗಿದೆ. ಅದರಲ್ಲೂ ಯಾದಗಿರಿ (Yadgir) ಜಿಲ್ಲೆಯಲ್ಲಿ 41 ಡಿಗ್ರಿಯಷ್ಟು ತಾಪಮಾನ (Temperature) ದಾಖಲಾಗುತ್ತಿದೆ. ಮನೆಯಿಂದ ಹೊರ ಬರಲು ಜನ ಹೆದರುತ್ತಿದ್ದಾರೆ. ರಣ ಬಿಸಿಲು ವೃದ್ಧರು ಮತ್ತು ಮಕ್ಕಳ ಮೇಲೂ ಪರಿಣಾಮ ಬೀರುತ್ತಿದೆ. ಯಾದಗಿರಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೂ ನವಜಾತ ಶಿಶುಗಳ ದಾಖಲಾತಿ ಹೆಚ್ಚಾಗಿದೆ. ಇದಕ್ಕೆ, ಬಿಸಿಲಿನಿಂದ ಮಕ್ಕಳಲ್ಲಿ ನಿರ್ಜಲೀಕರಣ, ಕಿಡ್ನಿ ಬಾವು ಉಂಟಾಗುತ್ತಿರುವುದೇ  ಕಾರಣವಾಗಿದೆ.

ನವಜಾತ ಶಿಶುಗಳಲ್ಲಿ ಕಿಡ್ನಿ ಮೇಲೆ ಬಾವು, ಮೂತ್ರ ವಿಸರ್ಜನೆ ಸಮಸ್ಯೆ ಹೆಚ್ಚಾಗುತ್ತಿದೆ. ಸದ್ಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ನಿತ್ಯ ಮೂರ್ನಾಲ್ಕು ನವಜಾತ ಶಿಶುಗಳು ದಾಖಲಾಗುತ್ತಿವೆ. ತಾಯಂದಿರು ಸರಿಯಾದ ಸಮಯಕ್ಕೆ ಎದೆ ಹಾಲುಣಿಸುವ ಕೆಲಸವನ್ನು ಮಾಡಬೇಕು. ಮಕ್ಕಳಿಗೆ ತೆಳ್ಳನೆ ಬಟ್ಟೆಗಳನ್ನು ತೊಡಿಸಬೇಕೆಂದು ಮಕ್ಕಳ ತಜ್ಞ ವೈದ್ಯ ಡಾ. ಅಲ್ತಾಪ್ ಸಲಹೆ ನೀಡಿದ್ದಾರೆ.

ಯಾದಗಿರಿ‌ ನಗರದಲ್ಲಿರುವ ತಾಯಿ‌ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ನವಜಾತ ಶಿಶುಗಳ ದಾಖಲಾತಿ ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ವ್ಯವಸ್ಥೆಯನ್ನು ವೈದ್ಯರು ಮಾಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಸುಮಾರು 10 ಜ‌ನ ಮಕ್ಕಳನ್ನು ಬಿಸಿಲಿನ ಪರಿಣಾಮ ನಿರ್ಜಲೀಕರಣ ಉಂಟಾಗಿ ಆಸ್ಪತ್ರೆಗೆ ದಾಖಲಾಸಲಾಗಿದೆ. ಬಿಸಿಲಿನಿಂದ ಮಕ್ಕಳಲ್ಲಿ ನಿರ್ಜಲೀಕರಣ ಉಂಟಾಗಿತ್ತಿದೆ. ಇದರಿಂದ ನವಜಾತ ಶಿಶುಗಳಿಗೆ‌ ಕಿಡ್ನಿ ಮೇಲೆ ಬಾವು ಬರೋದು, ಸರಿಯಾದ ರೀತಿಯಲ್ಲಿ ಮೂರ್ತ ವಿರ್ಜನೆ ಆಗದೆ ಇರೋದು ಸಮಸ್ಯೆ ಉಂಟಾಗುತ್ತಿದೆ. ತಾಪಮಾನ ಏರಿಕೆಯಿಂದಾಗಿ ಮಕ್ಕಳು ಹಾಗೂ ನವಜಾತ ಶಿಶುಗಳು ಬೇರೆ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯಗಳು ಹೆಚ್ಚಿವೆ ಎಂದು ವೈದ್ಯರು ಮುನ್ಸೂಚನೆ ನೀಡಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಇದನ್ನೂ ಓದಿ: ಯಾದಗಿರಿ: ಬುಲೆರೊ ಹಾಗೂ ಸಾರಿಗೆ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಒಟ್ಟಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಬಿಸಿಲ ತಾಪಕ್ಕೆ ದೊಡ್ಡವರೇ ಕಂಗೆಟ್ಟಿದ್ದು, ಇನ್ನು ನವಜಾತ ಶಿಶುಗಳು ಪಾಡೇನು ಎನ್ನುವಂತಾಗಿದೆ ಪರಿಸ್ಥತಿ. ಈ ಬೇಸಿಗೆಯಲ್ಲಿ ಪೋಷಕರು ಕಂದಮ್ಮಗಳ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?