AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಬಸ್ ಸಮಸ್ಯೆ: ಯಾದಗಿರಿ ಜಿಲ್ಲೆಯ ಆಶಾಪುರ ತಾಂಡಾದ ಶಾಲಾ ಮಕ್ಕಳ ಪರದಾಟ, ನಿತ್ಯ 16 ಕಿ.ಮೀ. ನಡಿಗೆ

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿ ಮಾಡಿದ ನಂತರ ಶಾಲಾ ಕಾಲೇಜು ಮಕ್ಕಳು ಸರಿಯಾಗಿ ತರಗತಿಗಳಿಗೆ ಹಾಜರಾಗಲು ಪರದಾಟ ನಡೆಸುತ್ತಿದ್ದಾರೆ. ಆದರೆ, ಕೆಲವೊಂದು ಗ್ರಾಮಗಳಿಗೆ ಬಸ್ ಸಂಪರ್ಕವೇ ಇಲ್ಲದೆಯೂ ಹೆಣಗಾಡುತ್ತಿದ್ದಾರೆ. ಈ ಪೈಕಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಆಶಾಪುರ ತಾಂಡಾ ಕೂಡ ಒಂದು.

ಸಾರಿಗೆ ಬಸ್ ಸಮಸ್ಯೆ: ಯಾದಗಿರಿ ಜಿಲ್ಲೆಯ ಆಶಾಪುರ ತಾಂಡಾದ ಶಾಲಾ ಮಕ್ಕಳ ಪರದಾಟ, ನಿತ್ಯ 16 ಕಿ.ಮೀ. ನಡಿಗೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಆಶಾಪುರ ತಾಂಡಾದಲ್ಲಿ ಸಾರಿಗೆ ಬಸ್ ಸಮಸ್ಯೆ (ಸಾಂದರ್ಭಿಕ ಚಿತ್ರ)
ಅಮೀನ್​ ಸಾಬ್​
| Edited By: |

Updated on:Aug 27, 2023 | 3:40 PM

Share

ಯಾದಗಿರಿ, ಆಗಸ್ಟ್ 27: ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿ ಮಾಡಿದ ನಂತರ ಶಾಲಾ ಕಾಲೇಜು ಮಕ್ಕಳು ಸರಿಯಾಗಿ ತರಗತಿಗಳಿಗೆ ಹಾಜರಾಗಲು ಪರದಾಟ ನಡೆಸುತ್ತಿದ್ದಾರೆ. ಆದರೆ, ಕೆಲವೊಂದು ಗ್ರಾಮಗಳಿಗೆ ಸಾರಿಗೆ ಬಸ್ ಸಂಪರ್ಕ ಇಲ್ಲದೆಯೂ ಹೆಣಗಾಡುತ್ತಿದ್ದಾರೆ. ಈ ಪೈಕಿ ಯಾದಗಿರಿ (Yadgir) ಜಿಲ್ಲೆಯ ಗುರುಮಠಕಲ್ ತಾಲೂಕಿನ ಆಶಾಪುರ ತಾಂಡಾ ಕೂಡ ಒಂದು.

ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಆಶಾಪುರ ತಾಂಡದ ಮಕ್ಕಳ ದುಸ್ಥಿತಿ ಕೇಳುವವರು ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಮಕ್ಕಳು ಮನೆಯಿಂದ ಎಲ್ಹೇರಿ ಗ್ರಾಮದ ಪ್ರೌಢ ಶಾಲೆಗೆ ಹೋಗಲು 8 ಕಿ.ಮೀ, ನಡೆದರೆ, ಶಾಲೆಯಿಂದ ಮನೆಗೆ 8 ಕಿ‌.ಮೀ ನಡೆಯಬೇಕು.

ಇದನ್ನೂ ಓದಿ: ಯಾದಗಿರಿ: 21 ವರ್ಷದ ಬಳಿಕ ಶಾಲೆಗೆ ಬಿಸಿಯೂಟದ ಭಾಗ್ಯ!

ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಒಂದಷ್ಟು ಮಕ್ಕಳು ಮಾರ್ಗ ಮಧ್ಯದಲ್ಲಿ ಸಿಗುವ ಟ್ರ್ಯಾಕ್ಟರ್ ಮೇಲೆ ಹತ್ತಿ ಶಾಲೆಗೆ ಹೋಗುತ್ತಿದ್ದಾರೆ. ಟ್ರ್ಯಾಕ್ಟರ್ ಟ್ರಾಲಿಯಲ್ಲಿ, ಟ್ರಾಕ್ಟರ್​ನ ಇಂಜಿನ ಮೇಲೆ ಜೊತೆಗೆ ಇಂಜಿನ್‌ ಟಾಪ್ ಮೇಲೆ ಕುಳಿತು ಮಕ್ಕಳು ಪ್ರಯಾಣಿಸುತ್ತಿದ್ದಾರೆ. 70 ಕ್ಕೂ ಅಧಿಕ ಮಕ್ಕಳು ನಿತ್ಯ ಇದೆ ಸಂಕಷ್ಟವನ್ನ ಎದುರಿಸುತ್ತಿದ್ದಾರೆ.

ತಾಂಡಾದ ಮಕ್ಕಳು ಜೀವ ಹಂಗು ತೋರೆದು ವಿದ್ಯೆ ಕಲಿಯಲು ಹೋಗುತ್ತಿದ್ದಾರೆ. ಸ್ವಲ್ಪ ಯಾಮಾರಿದರೂ ಪುಟಾಣಿ ಮಕ್ಕಳ ಪ್ರಾಣ ಪಕ್ಷಿ ಹೋಗುವುದು ಗ್ಯಾರಂಟಿ. ಸರ್ಕಾರಿ ಬಸ್ ಬಿಡುವಂತೆ ಹತ್ತಾರು ಬಾರಿ ಮನವಿ ಮಾಡಿಕೊಂಡರೂ ತಾಂಡಾ ಕಡೆಗೆ ಸರ್ಕಾರಿ ಬಸ್ ಬಿಡುತ್ತಿಲ್ಲ. ಅಪರೂಪಕ್ಕೆ ಒಂದೊಂದು ಬಾರಿ ಬಸ್ ಬರುತ್ತದೆ. ಅದು ಕೂಡ ಸಮಯಕ್ಕೆ ಸರಿಯಾಗಿ ಬರುವುದಿಲ್ಲ. ಇನ್ನಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತು ಗ್ರಾಮಕ್ಕೆ ಸರ್ಕಾರಿ ಬಸ್​ ವ್ಯವಸ್ಥೆ ಕಲ್ಪಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Sun, 27 August 23

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​