AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕ ಕಲ್ಯಾಣ, ಕೊರೊನಾ ನಿರ್ಮೂಲನೆಗಾಗಿ ರಾಚೋಟೇಶ್ವರ ಶ್ರೀಗಳಿಂದ ಸಮಾಧಿಯೋಗ; ಗಾಳಿ, ಅನ್ನ, ನೀರು ಇಲ್ಲದೆ 11 ದಿನಗಳ ಕಠಿಣ ಅನುಷ್ಠಾನ ಅಂತ್ಯ

ಇಡೀ ವಿಶ್ವಕ್ಕೆ ಮಾರಕವಾಗಿರುವ ಕೊರೊನಾ ನಿರ್ಮೂಲನೆಗಾಗಿ ಅಲ್ಲೊಬ್ಬ ಶ್ರೀಗಳು ಸಮಾಧಿಯೋಗ ಮುಂದಾಗಿದ್ದಾರೆ. ಆ ಶ್ರೀಗಳು ಹನ್ನೊಂದು ದಿನ ಊಟ, ನೀರು, ಗಾಳಿ ಇಲ್ಲದೆ ಮತ್ತು ಬಾಹ್ಯ ಲೋಕದ ಸಂಪರ್ಕದಲ್ಲಿರದೆ, ಬರೀ ಯೋಗದಿಂದಲೇ ಬದುಕಿದ್ದಾರೆ.

ಲೋಕ ಕಲ್ಯಾಣ, ಕೊರೊನಾ ನಿರ್ಮೂಲನೆಗಾಗಿ ರಾಚೋಟೇಶ್ವರ ಶ್ರೀಗಳಿಂದ ಸಮಾಧಿಯೋಗ; ಗಾಳಿ, ಅನ್ನ, ನೀರು ಇಲ್ಲದೆ 11 ದಿನಗಳ ಕಠಿಣ ಅನುಷ್ಠಾನ ಅಂತ್ಯ
ರಾಚೋಟೇಶ್ವರ ದೇವಸ್ಥಾನದ ರಾಚೋಟೇಶ್ವರ ಶ್ರೀಗಳು
TV9 Web
| Updated By: ಆಯೇಷಾ ಬಾನು|

Updated on: Oct 29, 2021 | 8:36 AM

Share

ಯಾದಗಿರಿ: ನಗರದ ಹೊರ ವಲಯದಲ್ಲಿರೋ ರಾಚೋಟೇಶ್ವರ ದೇವಸ್ಥಾನದ ರಾಚೋಟೇಶ್ವರ ಶ್ರೀಗಳು, ಲೋಕ ಕಲ್ಯಾಣಕ್ಕಾಗಿ, ಕೊರೊನಾ ನಿರ್ಮೂಲನೆಗಾಗಿ ಕಠಿಣ ಸಮಾಧಿಯೋಗ ಕೈಗೊಂಡಿದ್ರು. ಕಠಿಣ ಅನುಷ್ಠಾನ ಮಾಡಿದ್ರು. ಗಾಳಿ, ಅನ್ನ, ನೀರು ಇಲ್ಲದೆ 11 ದಿನಗಳ ಕಾಲ ಶ್ರೀಗಳು ಸಮಾಧಿಯೋಗ ಕೈಗೊಂಡಿದ್ರು. ರಾಚೋಟೇಶ್ವರ ದೇವಸ್ಥಾನದಲ್ಲಿ ಸಣ್ಣ ಗಾಳಿಯು ಒಳಗೆ ಬಾರದ ಹಾಗೆ ಸಿಮೆಂಟ್‌ನಿಂದ ಗೋಡೆಗಳನ್ನ ಪ್ಯಾಕ್ ಮಾಡಿಕೊಂಡು ಕಠಿಣ ವ್ರತಕೈಗೊಂಡಿದ್ರು. 11 ದಿನಗಳ ಹಿಂದೆ ಕೈಗೊಂಡಿದ್ದ ಅದೇ ವ್ರತ ನಿನ್ನೆ ಅಂತ್ಯವಾಗಿದೆ.

ಇನ್ನು ರಾಚೋಟೇಶ್ವರ ಶ್ರೀಗಳು ಇದಕ್ಕೂ ಮೊದಲು 10 ಬಾರಿ ಈ ರೀತಿ ಸಮಾಧಿಯೋಗವನ್ನ ಯಶಸ್ವಿಯಾಗಿ ಮಾಡಿದ್ದಾರೆ. ಜಿಲ್ಲೆ ಸೇರಿದಂತೆ ನಾನಾ ಕಡೆ ಲೋಕ ಕಲ್ಯಾಣಕ್ಕಾಗಿ ಶ್ರೀಗಳು ಸಮಾಧಿಯೋಗವನ್ನ ಮಾಡಿದ್ದಾರೆ. ಇನ್ನು ಅನುಷ್ಠಾನಕೈಗೊಂಡಿದ್ದ ಶ್ರೀಗಳು ಡಾಕ್ಟರೇಟ್ ಪದವಿ ಪಡೆದಿದ್ದು ಮೈಸೂರು ವಿವಿಯಲ್ಲಿ ಪ್ರಾದ್ಯಾಪಕರಾಗಿ ಸೇವೆಯನ್ನ ಸಲ್ಲಿಸಿದ್ದಾರೆ. ಆಧ್ಯಾತ್ಮದ ಕಡೆ ಹೆಚ್ಚು ಒಲವು ಇರುವ ಕಾರಣಕ್ಕೆ ಇತ್ತ ಮುಖ ಮಾಡಿದ್ದಾರೆ. ಸಮಾಧಿಯೋಗದ ಕೊನೇ ದಿನವಾದ ನಿನ್ನೆ ಅದ್ಧೂರಿ ಮೆರವಣಿಗೆ ಮೂಲಕ ರಂಭಾಪುರಿ ಶ್ರೀಗಳನ್ನ ಬರಮಾಡಿಕೊಳ್ಳಲಾಯ್ತು. ಬಳಿಕ ಅನುಷ್ಠಾನಕೈಗೊಂಡಿದ್ದ ಶ್ರೀಗಳಿಗೆ ಅಭಿಷೇಕ ಮಾಡಿ ವ್ರತವನ್ನ ಅಂತ್ಯಗೊಳಿಸಲಾಯ್ತು.

ಒಟ್ನಲ್ಲಿ ಕೊರೊನಾ ಓಡಿಸಲು ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ರೆ, ಇತ್ತ ಕಾವಿಧಾರಿಗಳು ಕೂಡಾ ಕಠಿಣ ಅನುಷ್ಠಾನದ ಮೂಲದ ಕೊರೊನಾ ವಿರುದ್ಧ ಹೋರಾಟ ಮಾಡಿದ್ದಾರೆ.

ವರದಿ: ಅಮೀನ್ ಹೊಸುರ್, ಟಿವಿ9 ಯಾದಗಿರಿ

ಇದನ್ನೂ ಓದಿ: Meta: ಫೇಸ್​ಬುಕ್ ಕಂಪನಿಯ ಹೊಸ ಹೆಸರು ಘೋಷಣೆ ಮಾಡಿದ ಮಾರ್ಕ್ ಜುಕರ್‌ಬರ್ಗ್

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?