Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ನಿವೃತ್ತ ಮಹಿಳಾ ಅಧಿಕಾರಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 10 ಲಕ್ಷ ರೂ. ದೋಚಿದ ಸೈಬರ್ ವಂಚಕರು

ಯಾದಗಿರಿ ಜಿಲ್ಲೆಯ ನಿವೃತ್ತ ಮಹಿಳಾ ಅಧಿಕಾರಿಯೊಬ್ಬರು ಸೈಬರ್ ಅಪರಾಧಿಗಳಿಂದ 10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿಯ ಸೋಗಿನಲ್ಲಿ ವಂಚಕ, ಡಿಜಿಟಲ್ ಅರೆಸ್ಟ್ ಮಾಡಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಸಂತ್ರಸ್ತೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದು ಯಾದಗಿರಿಯಲ್ಲಿ ನಡೆದ ಮೊದಲ ಡಿಜಿಟಲ್ ಅರೆಸ್ಟ್ ಪ್ರಕರಣವಾಗಿದೆ.

ಯಾದಗಿರಿ: ನಿವೃತ್ತ ಮಹಿಳಾ ಅಧಿಕಾರಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 10 ಲಕ್ಷ ರೂ. ದೋಚಿದ ಸೈಬರ್ ವಂಚಕರು
ಸಾಂದರ್ಭಿಕ ಚಿತ್ರ
Follow us
ಅಮೀನ್​ ಸಾಬ್​
| Updated By: Ganapathi Sharma

Updated on: Feb 18, 2025 | 10:52 AM

ಯಾದಗಿರಿ, ಫೆಬ್ರವರಿ 18: ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ನಿವೃತ್ತ ಮಹಿಳಾ ಅಧಿಕಾರಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿದ ಸೈಬರ್ ಅಪರಾಧಿಗಳು, ಅವರಿಂದ 10 ಲಕ್ಷ ರೂಪಾಯಿ ದೋಚಿದ ವಿಚಾರ ಬೆಳಕಿಗೆ ಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿಯ ಯುಕೆಪಿ ಕ್ಯಾಂಪ್​ನ ನಿವೃತ್ತ ಅಧಿಕಾರಿ ವಂಚನೆಗೆ ಒಳಗಾದವರು. ಸದ್ಯ ಸಂತ್ರಸ್ತೆ ಯಾದಗಿರಿ ಸೆನ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಲ್ಲಿ ಬಂತು ವಿಡಿಯೋ ಕಾಲ್

ಮುಂಬೈ ಕ್ರೈಂ ಬ್ರ್ಯಾಂಚ್ ಅಧಿಕಾರಿ ಎಂದು ಹೇಳಿಕೊಂಡು ನಿವೃತ್ತ ಮಹಿಳಾ ಅಧಿಕಾರಿಗೆ ವಿಡಿಯೋ ಕರೆ ಬಂದಿದೆ. ಸೈಬರ್ ಅಪರಾಧಿಗಳು ಜನವರಿ 26 ರಿಂದ ಫೆಬ್ರವರಿ 7 ರ ಅವಧಿಯಲ್ಲಿ ವಿಡಿಯೋ ಕಾಲ್ ಮಾಡಿ, ಕರೆ ಕಟ್ ಮಾಡದಂತೆ ದಿಗ್ಬಂಧನ ಹೇರಿ ಹಂತ ಹಂತವಾಗಿ 10 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಮನಿಲ್ಯಾಂಡರಿಂಗ್ ಕೇಸ್ ಇದೆ ಎಂದು ಬೆದರಿಸಿ ಕೃತ್ಯ

ವಿಡಿಯೋ ಕಾಲ್ ಮಾಡಿದ ಸೈಬರ್ ವಂಚಕರು, ‘ನಿನ್ನ ಮೇಲೆ ಮನಿ ಲ್ಯಾಂಡರಿಂಗ್ ಕೇಸ್ ದಾಖಲಾಗಿದೆ’ ಎಂದು ಎಂದು ವಿಡಿಯೋ ಹೇಳಿರುವ ಮಹಿಳಾ ಅಧಿಕಾರಿಯನ್ನು ಬೆದರಿಸಿದ್ದಾರೆ. ಈ ಪ್ರಕರಣದ‌ ಮುಖ್ಯ ಆರೋಪಿ ನರೇಶ್ ಗೋಯಲ್ ಎಂಬಾತನ ಜೊತೆ ಕೃತ್ಯದಲ್ಲಿ ಭಾಗಿಯಾಗಿದ್ದೀರಿ. ಹೀಗಾಗಿ ಬ್ಯಾಂಕ್ ಅಕೌಂಟ್ ಪಾಸ್ ಬುಕ್, ಆಧಾರ್, ಪ್ಯಾನ್ ಕಾರ್ಡ್ ಕಳುಹಿಸಿ ಎಂದು ವಂಚಕ ಹೇಳಿದ್ದಾನೆ. ತಕ್ಷಣ ಹೆದರಿದ ಮಹಿಳೆ ಎಲ್ಲವನ್ನು ಕಳುಹಿಸಿದ್ದಾರೆ.

ಮಾಹಿತಿ ಕಳುಹಿಸಿದ ಮೇಲೇನಾಯ್ತು?

ಮಹಿಳಾ ಅಧಿಕಾರಿಯಿಂದ ಅಗತ್ಯ ಮಾಹಿತಿಯನ್ನೆಲ್ಲ ತರಿಸಿಕೊಂಡ ವಂಚಕ, ‘ಈ ಪ್ರಕರಣ ಮುಖ್ಯ ಆರೋಪಿ ನರೇಶ್ ಗೋಯಲ್ ಅರೆಸ್ಟ್ ಅಗಿದ್ದಾನೆ’ ಎಂದು ಹೇಳಿದ್ದಾನೆ. ನ್ಯಾಯಾಧೀಶರ ರೀತಿಯಲ್ಲಿ ಡ್ರಸ್ ಧರಿಸಿ ಕುಳಿತಿದ್ದ ಚಿತ್ರ ತೋರಿಸಿ, ಮನಿ ಲ್ಯಾಂಡರಿಂಗ್ ಕೇಸ್​ನಿಂದ ಪಾರಾಗಲು ಹೇಳಿದಂತೆ ಕೇಳುವಂತೆ ಬೆದರಿಕೆಯೊಡ್ಡಿದ್ದಾನೆ. ಈ ವಿಷಯ ನಿಮ್ಮ ಮಗನಿಗೆ ಗೊತ್ತಾದ್ರೆ ಅವನ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಸತತವಾಗಿ ಭಯ ಹುಟ್ಟಿಸಿದ್ದಾನೆ. ಹೀಗೆ ಭಯ ಹುಟ್ಟಿಸಿ ಹಂತ ಹಂತವಾಗಿ 10 ಲಕ್ಷ ರೂಪಾಯಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ನಿವೃತ್ತ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಂತಹ ಡಿಜಿಟಲ್ ಅರೆಸ್ಟ್ ಪ್ರಕರಣ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ