AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ನಿವೃತ್ತ ಮಹಿಳಾ ಅಧಿಕಾರಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 10 ಲಕ್ಷ ರೂ. ದೋಚಿದ ಸೈಬರ್ ವಂಚಕರು

ಯಾದಗಿರಿ ಜಿಲ್ಲೆಯ ನಿವೃತ್ತ ಮಹಿಳಾ ಅಧಿಕಾರಿಯೊಬ್ಬರು ಸೈಬರ್ ಅಪರಾಧಿಗಳಿಂದ 10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿಯ ಸೋಗಿನಲ್ಲಿ ವಂಚಕ, ಡಿಜಿಟಲ್ ಅರೆಸ್ಟ್ ಮಾಡಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಸಂತ್ರಸ್ತೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದು ಯಾದಗಿರಿಯಲ್ಲಿ ನಡೆದ ಮೊದಲ ಡಿಜಿಟಲ್ ಅರೆಸ್ಟ್ ಪ್ರಕರಣವಾಗಿದೆ.

ಯಾದಗಿರಿ: ನಿವೃತ್ತ ಮಹಿಳಾ ಅಧಿಕಾರಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 10 ಲಕ್ಷ ರೂ. ದೋಚಿದ ಸೈಬರ್ ವಂಚಕರು
ಸಾಂದರ್ಭಿಕ ಚಿತ್ರ
ಅಮೀನ್​ ಸಾಬ್​
| Edited By: |

Updated on: Feb 18, 2025 | 10:52 AM

Share

ಯಾದಗಿರಿ, ಫೆಬ್ರವರಿ 18: ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ನಿವೃತ್ತ ಮಹಿಳಾ ಅಧಿಕಾರಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿದ ಸೈಬರ್ ಅಪರಾಧಿಗಳು, ಅವರಿಂದ 10 ಲಕ್ಷ ರೂಪಾಯಿ ದೋಚಿದ ವಿಚಾರ ಬೆಳಕಿಗೆ ಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿಯ ಯುಕೆಪಿ ಕ್ಯಾಂಪ್​ನ ನಿವೃತ್ತ ಅಧಿಕಾರಿ ವಂಚನೆಗೆ ಒಳಗಾದವರು. ಸದ್ಯ ಸಂತ್ರಸ್ತೆ ಯಾದಗಿರಿ ಸೆನ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಲ್ಲಿ ಬಂತು ವಿಡಿಯೋ ಕಾಲ್

ಮುಂಬೈ ಕ್ರೈಂ ಬ್ರ್ಯಾಂಚ್ ಅಧಿಕಾರಿ ಎಂದು ಹೇಳಿಕೊಂಡು ನಿವೃತ್ತ ಮಹಿಳಾ ಅಧಿಕಾರಿಗೆ ವಿಡಿಯೋ ಕರೆ ಬಂದಿದೆ. ಸೈಬರ್ ಅಪರಾಧಿಗಳು ಜನವರಿ 26 ರಿಂದ ಫೆಬ್ರವರಿ 7 ರ ಅವಧಿಯಲ್ಲಿ ವಿಡಿಯೋ ಕಾಲ್ ಮಾಡಿ, ಕರೆ ಕಟ್ ಮಾಡದಂತೆ ದಿಗ್ಬಂಧನ ಹೇರಿ ಹಂತ ಹಂತವಾಗಿ 10 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಮನಿಲ್ಯಾಂಡರಿಂಗ್ ಕೇಸ್ ಇದೆ ಎಂದು ಬೆದರಿಸಿ ಕೃತ್ಯ

ವಿಡಿಯೋ ಕಾಲ್ ಮಾಡಿದ ಸೈಬರ್ ವಂಚಕರು, ‘ನಿನ್ನ ಮೇಲೆ ಮನಿ ಲ್ಯಾಂಡರಿಂಗ್ ಕೇಸ್ ದಾಖಲಾಗಿದೆ’ ಎಂದು ಎಂದು ವಿಡಿಯೋ ಹೇಳಿರುವ ಮಹಿಳಾ ಅಧಿಕಾರಿಯನ್ನು ಬೆದರಿಸಿದ್ದಾರೆ. ಈ ಪ್ರಕರಣದ‌ ಮುಖ್ಯ ಆರೋಪಿ ನರೇಶ್ ಗೋಯಲ್ ಎಂಬಾತನ ಜೊತೆ ಕೃತ್ಯದಲ್ಲಿ ಭಾಗಿಯಾಗಿದ್ದೀರಿ. ಹೀಗಾಗಿ ಬ್ಯಾಂಕ್ ಅಕೌಂಟ್ ಪಾಸ್ ಬುಕ್, ಆಧಾರ್, ಪ್ಯಾನ್ ಕಾರ್ಡ್ ಕಳುಹಿಸಿ ಎಂದು ವಂಚಕ ಹೇಳಿದ್ದಾನೆ. ತಕ್ಷಣ ಹೆದರಿದ ಮಹಿಳೆ ಎಲ್ಲವನ್ನು ಕಳುಹಿಸಿದ್ದಾರೆ.

ಮಾಹಿತಿ ಕಳುಹಿಸಿದ ಮೇಲೇನಾಯ್ತು?

ಮಹಿಳಾ ಅಧಿಕಾರಿಯಿಂದ ಅಗತ್ಯ ಮಾಹಿತಿಯನ್ನೆಲ್ಲ ತರಿಸಿಕೊಂಡ ವಂಚಕ, ‘ಈ ಪ್ರಕರಣ ಮುಖ್ಯ ಆರೋಪಿ ನರೇಶ್ ಗೋಯಲ್ ಅರೆಸ್ಟ್ ಅಗಿದ್ದಾನೆ’ ಎಂದು ಹೇಳಿದ್ದಾನೆ. ನ್ಯಾಯಾಧೀಶರ ರೀತಿಯಲ್ಲಿ ಡ್ರಸ್ ಧರಿಸಿ ಕುಳಿತಿದ್ದ ಚಿತ್ರ ತೋರಿಸಿ, ಮನಿ ಲ್ಯಾಂಡರಿಂಗ್ ಕೇಸ್​ನಿಂದ ಪಾರಾಗಲು ಹೇಳಿದಂತೆ ಕೇಳುವಂತೆ ಬೆದರಿಕೆಯೊಡ್ಡಿದ್ದಾನೆ. ಈ ವಿಷಯ ನಿಮ್ಮ ಮಗನಿಗೆ ಗೊತ್ತಾದ್ರೆ ಅವನ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಸತತವಾಗಿ ಭಯ ಹುಟ್ಟಿಸಿದ್ದಾನೆ. ಹೀಗೆ ಭಯ ಹುಟ್ಟಿಸಿ ಹಂತ ಹಂತವಾಗಿ 10 ಲಕ್ಷ ರೂಪಾಯಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ನಿವೃತ್ತ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಂತಹ ಡಿಜಿಟಲ್ ಅರೆಸ್ಟ್ ಪ್ರಕರಣ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?