AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಅಕ್ರಮವಾಗಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡ 14 ಮಂದಿ, 9 ವರ್ಷದ ಬಳಿಕ ಪ್ರಕರಣ ಬೆಳಕಿಗೆ

2015ರಲ್ಲಿ ನಕಲಿ ಅಂಕಪಟ್ಟಿ ನೀಡಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಡಿ ಗ್ರೂಪ್​ ಹುದ್ದೆ ಪಡೆದ 14 ಜನರ ಬಗ್ಗೆ ಮಾಹಿತಿ ನೀಡುವಂತೆ ಡಿಹೆಚ್​ಒಗೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರ ಸೂಚನೆ ನೀಡಿದ್ದಾರೆ. ಡಿಹೆಚ್​ಒ ಈ 14 ಜನರ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಯಾದಗಿರಿ: ಅಕ್ರಮವಾಗಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡ 14 ಮಂದಿ, 9 ವರ್ಷದ ಬಳಿಕ ಪ್ರಕರಣ ಬೆಳಕಿಗೆ
ಶಹಾಪುರ ಸರ್ಕಾರಿ ಆಸ್ಪತ್ರೆ
ಅಮೀನ್​ ಸಾಬ್​
| Edited By: |

Updated on: Aug 31, 2024 | 11:20 AM

Share

ಯಾದಗಿರಿ, ಆಗಸ್ಟ್​ 31: ನಕಲಿ ಅಂಕಪಟ್ಟಿ ನೀಡಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ (Hospital) ಡಿ ಗ್ರೂಪ್​ ಹುದ್ದೆ (D Group Post) ಪಡೆದ 14 ಜನರ ಬಗ್ಗೆ ಮಾಹಿತಿ ನೀಡುವಂತೆ ಡಿಹೆಚ್​ಒಗೆ (DHO) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರ ಸೂಚನೆ ನೀಡಿದ್ದಾರೆ.

2015ರಲ್ಲಿ ಇಲಾಖೆಯ ಡಿ ಗ್ರೂಪ್ ಹುದ್ದೆಗೆ ನೇಮಕಾತಿ ನಡೆದಿತ್ತು. ಎಸ್​ಎಸ್​ಎಲ್​​ಸಿ ವಿದ್ಯಾರ್ಹತೆಯ ಮೇಲೆ ಗ್ರೂಪ್-ಡಿ ಹುದ್ದೆಗೆ ಕೌನ್ಸೆಲಿಂಗ್ ಮೂಲಕ ನೇರ ನೇಮಕಾತಿ ನಡೆದಿತ್ತು. ನೇಮಕಾತಿ ವೇಳೆ 14 ಮಂದಿ ನಕಲಿ ದಾಖಲೆ ನೀಡಿದ್ದಾರೆ. ನಕಲಿ ಅಂಕಪಟ್ಟಿ ನೀಡಿದವರ ಬಗ್ಗೆ 9 ವರ್ಷದ ಬಳಿಕ ಆರೋಗ್ಯ ಇಲಾಖೆಗೆ ದೂರು ನೀಡಲಾಗಿದೆ. ದೂರಿನ ಬೆನ್ನಲ್ಲೇ ಎಚ್ಚೆತ್ತ ಇಲಾಖೆ ಈ 14 ಜನರ ಬಗ್ಗೆ ಮಾಹಿತಿ ನೀಡುವಂತೆ ಯಾದಗಿರಿ ಡಿಹೆಚ್​ಒಗೆ ಸೂಚನೆ ನೀಡಿದ್ದಾರೆ.

ನೌಕರರು ಸಲ್ಲಿಸಿರುವ ಎಸ್​ಎಸ್​ಎಲ್​ಸಿ ಅಂಕಪಟ್ಟಿಯ ಮಾರ್ಕ್ಸ್ ಮತ್ತು ಕಚೇರಿಯ ಸಂಪುಟದಲ್ಲಿನ ಅಂಕಗಳಿಗೆ ತಾಳೆ ಹೊಂದುತ್ತಿಲ್ಲ. ನೌಕರರಿಗೆ ನೈಜತೆ ಪ್ರಮಾಣ ಪತ್ರ ನೀಡಿಲ್ಲ. 14 ನೌಕರರ ಜನ್ಮ ದಿನಾಂಕ, ನೌಕರರು ಸೇವೆಗೆ ಸೇರಿದ ದಿನಾಂಕ, ಆದೇಶ ಪ್ರತಿ ಸೇರಿದಂತೆ ನಿರ್ದೇಶನಾಲಯ ಒಟ್ಟು ಆರು ಮಾಹಿತಿ ಕೇಳಿದೆ.

ಇದನ್ನೂ ಓದಿ: ಬೇಲಿಯೇ ಎದ್ದು ಹೊಲ ಮೇಯ್ದಂತೆ: ಮಗನನ್ನು ಪಾಸ್ ಮಾಡಿಸಲು ಹೆಡ್​ಮಾಸ್ಟರ್​ನಿಂದಲೇ ಚೀಟಿಂಗ್

ನಿರ್ದೇಶನಾಲಯದ ಸೂಚನೆ ಮೇರೆಗೆ ಯಾದಗಿರಿ ಆರೋಗ್ಯ ಅಧಿಕಾರಿಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸ್ತಿರುವ ನೌಕರರ ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನು, ಯಾದಗಿರಿಯಷ್ಟೇ ಅಲ್ಲದೆ ಹಲವು ಜಿಲ್ಲೆಗಳಿಗೆ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ

ಮೈಸೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರ ಬಳಿ ಲಕ್ಷ ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಎಸಗಿದೆ ಇಬ್ಬರನ್ನು ಮೈಸೂರಿನ ಉದಯಗಿರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಸರ್ಕಾರದ ನಕಲಿ ಆದೇಶ ಪತ್ರ, ನೇಮಕಕಾತಿ ಪತ್ರ, ನಡವಳಿ, ನಿರಾಕ್ಷೇಪಣಾ ಪ್ರಮಾಣಪತ್ರ, ಐಡಿ ಕಾರ್ಡ್ ಎಲ್ಲವನ್ನು ನೀಡಿ ಮೋಸ ಮಾಡಿದ್ದಾರೆ. ಆರೋಪಿಗಳು 3 ರಿಂದ 5 ಲಕ್ಷ ರೂ.ವರೆಗು ಹಣ ಪಡೆದು ಬರೊಬ್ಬರಿ 30 ಜನರಿಗೆ ವಂಚಿಸಿದ್ದಾರೆ.

ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಮಂಡ್ಯ, ಆರೋಗ್ಯ ಕುಟುಂಬ ಕಲ್ಯಾಣ ಸೇವೆ ಆಯುಕ್ತಾಲಯ ಬೆಂಗಳೂರು ಕಚೇರಿಯಲ್ಲಿ ಗ್ರೂಪ್ ಡಿ ಹುದ್ದೆಗಳನ್ನು ಕೊಡಿಸುವುದಾಗಿ ಹೇಳಿದ್ದಾರೆ. ಹೀಗೆ 30 ಜನರಿಗೆ ಹೇಳಿ ಒಬ್ಬೊಬ್ಬರಿಂದ 3 ರಿಂದ 5 ಲಕ್ಷ ರೂ.ವರೆಗೆ ಹಣ ಪಡೆದಿದ್ದಾರೆ. ನಂತರ, ಸರ್ಕಾರದ ಖಜಾನೆಯಿಂದಲೇ ಚೆಲನ್ ರೆಫರೆನ್ಸ್ ನಂಬರಿನ ಮೆಸೆಜ್ ಬಂದಿರುವುದನ್ನು ನೋಡಿ ಉದ್ಯೋಗಾಕಾಂಕ್ಷಿಗಳು ಇವರನ್ನು ನಂಬಿದ್ದಾರೆ.

2020 ರಿಂದ 2023ರ ಆಗಸ್ಟ್​​ 17ರವರೆಗೂ ಆರೋಪಿಗಳು ಒಂದೊಂದು ಆದೇಶ ಪ್ರತಿಯನ್ನು ಉದ್ಯೋಗಾಕಾಂಕ್ಷಿಗಳಿಗೆ ನೀಡುತ್ತಾ ಬಂದಿದ್ದಾರೆ. ಆದರೆ, ಇದೀಗ ಆರೋಪಿಗಳು ತಮಗೆ ವಂಚಿಸಿರುವುದು ಉದ್ಯೋಗಾಕಾಂಕ್ಷಿಗಳಿಗೆ ತಿಳಿದಿದ್ದು, ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್