AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಸ್ವಂತ ಚಿಕ್ಕಮ್ಮನ ಮೇಲೆ 7 ವರ್ಷಗಳಿಂದ ಸಹೋದರರಿಂದ ಅತ್ಯಾಚಾರ?

ಸ್ವಂತ ಚಿಕ್ಕಪ್ಪನ ಪತ್ನಿಯನ್ನೇ ಕಾನ್ಸ್​ಟೇಬಲ್ ಹಾಗೂ ಆತನ ಸೋದರ ಅತ್ಯಾಚಾರ ಮಾಡಿರುವಂತಹ ಆರೋಪ ಕೇಳಿಬಂದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಪೇಟ್ಲಾ ಗ್ರಾಮದ ಸಂತ್ರಸ್ತೆ ಚಿಕ್ಕಮ್ಮಳಿಂದ ದೂರು ನೀಡಲಾಗಿದ್ದು, ಸದ್ಯ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಯಾದಗಿರಿ: ಸ್ವಂತ ಚಿಕ್ಕಮ್ಮನ ಮೇಲೆ 7 ವರ್ಷಗಳಿಂದ ಸಹೋದರರಿಂದ ಅತ್ಯಾಚಾರ?
ಪ್ರಾತಿನಿಧಿಕ ಚಿತ್ರ
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 03, 2025 | 10:39 PM

Share

ಯಾದಗಿರಿ, ಸೆಪ್ಟೆಂಬರ್​ 03: ಕಾನ್ಸ್​ಟೇಬಲ್ ಹಾಗೂ ಆತನ ಸಹೋದರನಿಂದ ಚಿಕ್ಕಪ್ಪನ ಪತ್ನಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿರುವ (sexually assault) ಆರೋಪ ಕೇಳಿಬಂದಿದೆ. ಯಾದಗಿರಿ (Yadgiri)  ಸಂಚಾರಿ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿರುವ​​ ರಮೇಶ್ ಮತ್ತು ಜೆಸ್ಕಾಂ ನೌಕರ ಲಕ್ಷ್ಮಣ್ ವಿರುದ್ಧ ಸಂತ್ರಸ್ತೆ ದೂರು ಹಿನ್ನಲೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸತತ ಏಳು ವರ್ಷಗಳಿಂದ ಇಬ್ಬರು ಬಲವಂತವಾಗಿ ಅತ್ಯಾಚಾರ ಎಸಗಿರುವ ಆರೋಪಿಸಲಾಗಿದೆ. ಪ್ರಾಣ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಜೊತೆಗೆ ತನ್ನ ಮಗಳಿಗೆ ಅಶ್ಲೀಲ ವಾಟ್ಸಪ್ ಮೆಸೇಜ್ ಕಳುಹಿಸುತ್ತಿದ್ದರು. ಬಟ್ಟೆಯನ್ನ ಬಿಚ್ಚಿ ಬೆತ್ತಲೆ ದೇಹವನ್ನ ತೋರಿಸು ಎಂದು ಪೀಡಿಸುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ಆರೋಪಿಗಳು ಅಂದರ್​​

ಹಾಸನ ನಗರದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ನಡೆದಿರುವ ಇದೊಂದು ಘಟನೆಯನ್ನ ಕೇಳಿದರೆ ನೀವು ನಿಜಕ್ಕೂ ಬೆಚ್ಚಿಬೀಳಿತ್ತೀರಾ. 28 ವರ್ಷದ ಬುದ್ಧಿಮಾಂದ್ಯ ಹೆಣ್ಣುಮಗಳೊಬ್ಬಳ ಮೇಲೆ ರಾಕ್ಷಸರಂತೆ ಎರಗಿರುವ ಕೀಚಕರು ನಡೆಸಿರುವ ಅಮಾನವೀಯ ಪೈಶಾಚಿಕ ಕೃತ್ಯ ಮನುಷ್ಯ ಕುಲವೇ ತಲೆ ತಗ್ಗಿಸುವಂತಿದೆ.

ಇದನ್ನೂ ಓದಿ: ಮಂಗಳೂರು: ಅಪ್ರಾಪ್ತೆ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ, ವಿಡಿಯೋ ವೈರಲ್ ಮಾಡಿದವರೂ ಖಾಕಿ ಬಲೆಗೆ!

ಇಲ್ಲಿನ ಇಮ್ರಾನ್, ಅಜೀಜ್, ಇರ್ಫಾನ್ ಹಾಗೂ ಮತ್ತೋರ್ವನ ವಿರುದ್ದ ಅತ್ಯಾಚಾರ ಕೇಸ್ ದಾಖಲಾಗಿದೆ. ಯುವತಿ ಮೇಲೆ ನೀಚರಂತೆ ಎರಗಿದ್ದು ಮಾತ್ರವಲ್ಲ ತಮ್ಮ ಹೀನ ಕೃತ್ಯವನ್ನ ಮೊಬೈಲ್​ನಲ್ಲಿ ಸೆರೆಹಿಡಿದುಕೊಂಡಿದ್ದರು.

ಇದನ್ನೂ ಓದಿ: 26 ರ ವಿಧವೆ ಜೊತೆ 52 ವರ್ಷದ ಇಬ್ಬರು ಹೆಂಡಿರ ಗಂಡನ ಲಿವಿಂಗ್ ಟುಗೆದರ್! ಯುವತಿ ದೂರವಾಗ್ತಾಳೆಂದು ಬೆಂಕಿ ಹಚ್ಚಿ ಕೊಲೆ

ಯುವತಿಯ ತಮ್ಮನ ಮೊಬೈಲ್​ಗೆ ಈ ವಿಡಿಯೋ ಬಂದಿದೆ. ವಿಡಿಯೋ ನೋಡಿ ಕುಸಿದು ಹೋದ ಕುಟುಂಬ ಕೂಡಲೇ ಪೆನ್ಷನ್ ಮೊಹಲ್ಲಾ ಠಾಣೆಗೆ ದೂರು ನೀಡಿದ್ದಾರೆ. ರಾಕ್ಷಸರ ನೀಚತನದ ಬಗ್ಗೆ ವಿವರಿಸಿದ್ದಾರೆ ಕೂಡಲೆ ಕಾರ್ಯಪ್ರವೃತ್ತರಾದ ಪೊಲೀಸರು ಇರ್ಫಾನ್ಮ, ಅಜೀಜ್ ಹಾಗೂ ಇಮ್ರಾನ್​ನನ್ನ ಬಂಧಿಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಜನರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ