AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಆನೆಕಾಲು ರೋಗ ತಡೆ ಮಾತ್ರೆ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಆನೆಕಾಲು ರೋಗ ತಡೆ ಮಾತ್ರೆ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಯಾದಗಿರಿ: ಆನೆಕಾಲು ರೋಗ ತಡೆ ಮಾತ್ರೆ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಮಕ್ಕಳು
TV9 Web
| Edited By: |

Updated on:Nov 14, 2022 | 9:59 PM

Share

ಯಾದಗಿರಿ: ಆನೆಕಾಲು ರೋಗ ತಡೆ ಮಾತ್ರೆ (tablets) ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಆನೆಕಾಲು ರೋಗ ಮುಕ್ತ ಮಾಡುವ ಹಿನ್ನೆಲೆ ಇಂದು ಮಕ್ಕಳಿಗೆ ಔಷಧಿಗಳನ್ನ ನುಂಗಿಸುವ ಕಾರ್ಯಕ್ರಮವಿದ್ದು, ಈ ವೇಳೆ ಅವಘಡ ಉಂಟಾಗಿದೆ ಎನ್ನಲಾಗುತ್ತಿದೆ. ಅಸ್ವಸ್ಥಗೊಂಡ 20 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಅಸ್ವಸ್ಥ ಮಕ್ಕಳನ್ನು ವೈದ್ಯರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಈ ಕುರಿತಾಗಿ ಜಿಲ್ಲಾಸ್ಪತ್ರೆ ವೈದ್ಯರು ಮತ್ತು ಪೋಷಕರ ನಡುವೆ ಮಾತಿನ ಚಕಮಕಿ ಸಹ ಉಂಟಾಗಿದೆ.

ಮಕ್ಕಳ ದಿನಾಚರಣೆ ಹಿನ್ನೆಲೆ ಮಕ್ಕಳಿಗೆ ಗಂಧದಗುಡಿ ಸಿನಿಮಾ ತೋರಿಸಿದ ಸಾಲುಮರದ ವೆಂಕಟೇಶ್

ಚಾಮರಾಜನಗರ: ಇಂದು ಮಕ್ಕಳ ದಿನಾಚರಣೆ ಹಿನ್ನೆಲೆ ಗಂಧದಗುಡಿ ಸಿನಿಮಾ ತೋರಿಸಿ ಮಕ್ಕಳಲ್ಲಿ ಅರಣ್ಯ ಹಾಗೂ ಪರಿಸರದ ಬಗ್ಗೆ ಅರಿವು ಮೂಡಿಸಲು ಸಾಲುಮರದ ವೆಂಕಟೇಶ್ ಮುಂದಾದರು. ಚಾಮರಾಜನಗರದಲ್ಲಿ 60 ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಂಧದಗುಡಿ ಚಿತ್ರದ ಟಿಕೇಟ್ ಉಚಿತವಾಗಿ ನೀಡಲಾಯಿತು. ನಗರದ ರಾಘವೇಂದ್ರ ಚಿತ್ರಮಂದಿರದಲ್ಲಿ ಶಾಲಾ ಮಕ್ಕಳಿಗೆ ಗಂಧದಗುಡಿ ಚಿತ್ರ ತೋರಿಸಲಾಯಿತು. ಆಸಕ್ತಿಯಿಂದ ಚನ್ನಿಪುರಮೋಳೆ ಬಡಾವಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಗಂಧದ ಗುಡಿ ವೀಕ್ಷಿಸಿದರು. ತೆರೆಯ ಮೇಲೆ ಅಪ್ಪು ಕಂಡು ಶಾಲಾ ಮಕ್ಕಳ ಹರ್ಷೋದ್ಘಾರಗೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:40 pm, Mon, 14 November 22

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!