AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುಮಠಕಲ್‌ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ.

ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು
ಸಿಡಿಲು
TV9 Web
| Edited By: |

Updated on:Sep 28, 2022 | 7:07 PM

Share

ಯಾದಗಿರಿ: ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುಮಠಕಲ್‌ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ. ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು (4) ಶ್ರೀನಿವಾಸ್ (2), ಎಸ್ ಹೊಸಹಳ್ಳಿ ಗ್ರಾಮ ಸಾಬಣ್ಣ (17) ಮೃತ ದುರ್ದೈವಿಗಳು. ಓರ್ವ ಯುವಕನಿಗೆ ಗಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮಧ್ಯಾಹ್ನ ಯಾದಗಿರಿಯಿಂದ ಊರಿಗೆ ಹೋಗುವಾಗ ಸುರಿದ ಮಳೆಯಿಂದಾಗಿ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವು

ಶಿವಮೊಗ್ಗ: ಸ್ನೇಹಿತರ ಜತೆ ಸ್ವಿಮ್ಮಿಂಗ್​ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಕ್ತಿಧಾಮ ಲೇಔಟ್​ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಸ್ವಿಮ್ಮಿಂಗ್ ಪೂಲ್​ನಲ್ಲಿ ನಡೆದಿದೆ. ರಾಕೇಶ್ (18) ಮೃತ ಯುವಕ. ಶಿವಮೊಗ್ಗದ ಜೊಸೆಫ್ ನಗರದ ನಿವಾಸಿ ಕುಮಾರ್ ಎಂಬುವರ ಪುತ್ರನಾಗಿರುವ ರಾಕೇಶ್, ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದನು. ರಾಕೇಶ್ ಇಂದು ಸ್ನೇಹಿತರೊಂದಿಗೆ ಶಿವಮೊಗ್ಗ ಹೊರವಲಯದ ಗಾಡಿಕೊಪ್ಪ ಸಮೀಪದ ಶಕ್ತಿಧಾಮ ಲೇಔಟ್ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಈಜಲು ತೆರಳಿದ್ದಾನೆ. ಆದರೆ ರಾಕೇಶ್​ಗೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಪತಿ

ದಕ್ಷಿಣ ಕನ್ನಡ : ಪತಿ – ಪತ್ನಿ ನಡುವೆ ವಿರಸ ಮೂಡಿದ್ದು, ಪತಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ  ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕು ರಾಮನಾಥಪುರ ನಿವಾಸಿ ಸುನೀಲ್ (28) ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುನೀಲ್  ವಿಷ ಕುಡಿಯುವುದನ್ನು ವಿಡಿಯೋ ಮಾಡಿ ಮನೆಯವರಿಗೆ ಕಳುಹಿಸಿದ್ದಾನೆ. ಈ ವಿಡಿಯೋವನ್ನು ಕುಟುಂಬಸ್ಥರು ಧರ್ಮಸ್ಥಳ ಪೊಲೀಸರಿಗೆ ರವಾನಿಸಿದ್ದಾರೆ.  ವೀಡಿಯೋ ನೋಡಿ  ಕೂಡಲೆ ಜಾಗ ಪತ್ತೆಹಚ್ಚಿ ಸುನೀಲ್​ನನ್ನು ರಕ್ಷಿಸಿದ್ದಾರೆ. ತಕ್ಷಣ ಸುನೀಲ್ ನನ್ನು ಉಜರೆಯ ಖಾಸಗಿ ಆಸ್ಪತ್ರೆಗೆ ದಾಳಿಸಿದ್ದಾರೆ. ಸುನೀಲ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:06 pm, Wed, 28 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ