AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​: ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಯಾದಗಿರಿಯಲ್ಲಿ ಸೈಬರ್​ ಠಾಣೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ, ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.

ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​: ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​ನ್ನು ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
Kiran HV
| Edited By: |

Updated on:Aug 03, 2024 | 7:14 PM

Share

ಬೆಂಗಳೂರು, ಆ.03: ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಾದಗಿರಿ ಪಿಎಸ್​ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು(ಆ.03) ನಡೆದಿದೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

17 ಗಂಟೆ ಬಳಿಕ ಪ್ರಕರಣ ದಾಖಲಿಸಿದ್ದ ಪೊಲೀಸರು

ಇನ್ನು ಸೈಬರ್​ ಠಾಣೆ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪಿಎಸ್​​ಐ ಪರಶುರಾಮ ಪತ್ನಿ ಶ್ವೇತಾ ಅವರು ನೀಡಿದ ದೂರನ್ನು ಆಧರಿಸಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ.

ಇದನ್ನೂ ಓದಿ:ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಕಡುಬಡತನದಲ್ಲಿ ಬೆಳೆದು ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದ ಪರಶುರಾಮ!

ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ ಮಾಜಿ ಶಾಸಕ ರಾಜುಗೌಡ

ಇನ್ನು ಈ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕ ರಾಜುಗೌಡ, ‘ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ್ದರು. ಪಿಎಸ್ಐ ಆತ್ಮಹತ್ಯೆ ಹಿಂದೆ ಸ್ಥಳೀಯ ಶಾಸಕರು ಮತ್ತು ಅವರ ಪುತ್ರ ಇದ್ದಾರೆ. ಮೃತ ಪರಶುರಾಮ್​ರಿಂದ 30 ಲಕ್ಷ ಪಡೆದಿದ್ದಾರೆ ಎನ್ನುತ್ತಿದ್ದಾರೆ. ಕೂಡಲೇ ಯಾದಗಿರಿ ಶಾಸಕ, ಅವರ ಪುತ್ರನನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ರೆ ಯಾದಗಿರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದರು. ಅಷ್ಟೇ ಅಲ್ಲ, ಯತ್ನಾಳ್​, JDS ಶಾಸಕ ಶರಣಗೌಡ ಕಂದಕೂರು ಕೂಡ ತನಿಖೆಗೆ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Sat, 3 August 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​