AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​: ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಯಾದಗಿರಿಯಲ್ಲಿ ಸೈಬರ್​ ಠಾಣೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ, ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.

ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​: ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​ನ್ನು ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
Kiran HV
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 03, 2024 | 7:14 PM

Share

ಬೆಂಗಳೂರು, ಆ.03: ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಾದಗಿರಿ ಪಿಎಸ್​ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು(ಆ.03) ನಡೆದಿದೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

17 ಗಂಟೆ ಬಳಿಕ ಪ್ರಕರಣ ದಾಖಲಿಸಿದ್ದ ಪೊಲೀಸರು

ಇನ್ನು ಸೈಬರ್​ ಠಾಣೆ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪಿಎಸ್​​ಐ ಪರಶುರಾಮ ಪತ್ನಿ ಶ್ವೇತಾ ಅವರು ನೀಡಿದ ದೂರನ್ನು ಆಧರಿಸಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ.

ಇದನ್ನೂ ಓದಿ:ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಕಡುಬಡತನದಲ್ಲಿ ಬೆಳೆದು ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದ ಪರಶುರಾಮ!

ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ ಮಾಜಿ ಶಾಸಕ ರಾಜುಗೌಡ

ಇನ್ನು ಈ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕ ರಾಜುಗೌಡ, ‘ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ್ದರು. ಪಿಎಸ್ಐ ಆತ್ಮಹತ್ಯೆ ಹಿಂದೆ ಸ್ಥಳೀಯ ಶಾಸಕರು ಮತ್ತು ಅವರ ಪುತ್ರ ಇದ್ದಾರೆ. ಮೃತ ಪರಶುರಾಮ್​ರಿಂದ 30 ಲಕ್ಷ ಪಡೆದಿದ್ದಾರೆ ಎನ್ನುತ್ತಿದ್ದಾರೆ. ಕೂಡಲೇ ಯಾದಗಿರಿ ಶಾಸಕ, ಅವರ ಪುತ್ರನನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ರೆ ಯಾದಗಿರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದರು. ಅಷ್ಟೇ ಅಲ್ಲ, ಯತ್ನಾಳ್​, JDS ಶಾಸಕ ಶರಣಗೌಡ ಕಂದಕೂರು ಕೂಡ ತನಿಖೆಗೆ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Sat, 3 August 24

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!