AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಕಲುಷಿತ ನೀರು ಸೇವನೆ ಶಂಕೆ, 19 ಜನರಲ್ಲಿ ವಾಂತಿ ಭೇದಿ

ಯಾದಗಿರಿ ಜಿಲ್ಲೆಯಲ್ಲಿ ಆಗಾಗ ಕಲುಷಿತ ನೀರು ಸೇವಿಸಿ ಜನರು ವಾಂತಿ ಭೇದಿ ಬಳಲುತ್ತಿದ್ದಾರೆ. ಈ ಕುರಿತು ಅನೇಕ ಪ್ರಕರಣಗಳು ವರದಿಯಾಗಿದ್ದರೂ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿದ್ದೆಗೆ ಜಾರಿದ್ದು ಮಾತ್ರ ಕೇದರದ ಸಂಗತಿ. ಇದೀಗ ಮತ್ತೆ ಜಿಲ್ಲೆಯ ಗುರುಮಠಕಲ್​ ತಾಲೂಕಿನ ಗಾಜರಕೋಟ ಹಾಗೂ ಶಿವಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 19 ಜನರು ವಾಂತಿ, ಭೇದಿಯಿಂದ ಬಳಲುತ್ತಿದ್ದಾರೆ.

ಯಾದಗಿರಿ: ಕಲುಷಿತ ನೀರು ಸೇವನೆ ಶಂಕೆ, 19 ಜನರಲ್ಲಿ ವಾಂತಿ ಭೇದಿ
ಅಸ್ವಸ್ಥಗೊಂಡಿರುವ ಜನ
ಅಮೀನ್​ ಸಾಬ್​
| Edited By: |

Updated on:Aug 22, 2023 | 7:08 PM

Share

ಯಾದಗಿರಿ: ಜಿಲ್ಲೆಯಲ್ಲಿ ಆಗಾಗ ಕಲುಷಿತ ನೀರು (Contaminated water) ಸೇವಿಸಿ ಜನರು ವಾಂತಿ ಭೇದಿ ಬಳಲುತ್ತಿದ್ದಾರೆ. ಈ ಕುರಿತು ಅನೇಕ ಪ್ರಕರಣಗಳು ವರದಿಯಾಗಿದ್ದರೂ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿದ್ದೆಗೆ ಜಾರಿದ್ದು ಮಾತ್ರ ಖೇದರದ ಸಂಗತಿ. ಇದೇ ವರ್ಷ ಫೆಬ್ರವರಿಯಲ್ಲಿ ಗುರುಮಠಕಲ್ (Gurmitkal)​ ತಾಲೂಕಿನ ಅನಪುರ ಗ್ರಾಮದ 35 ವರ್ಷದ ಸಾವಿತ್ರಮ್ಮ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದರು. ಇದೀಗ ಮತ್ತೆ ಜಿಲ್ಲೆಯ ಇದೇ ಗುರುಮಠಕಲ್​ ತಾಲೂಕಿನ ಗಾಜರಕೋಟ ಹಾಗೂ ಶಿವಪುರ ಗ್ರಾಮದ 19 ಜನರು ವಾಂತಿ, ಭೇದಿಯಿಂದ ಬಳಲುತ್ತಿದ್ದು, ಇದಕ್ಕೆ ಕಲುಷಿತ ನೀರು ಸೇವನೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರಿಗೆ ಗಾಜರಕೋಟ, ಗುರುಮಠಕಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ಹೆಚ್ಚುವರಿ ಡಿಎಚ್‌ಒ ಡಾ.ಸಾಜೀದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದೇ ವರ್ಷ ಫೆಬ್ರವರಿಯಲ್ಲಿ ಇದೇ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದ 30 ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 35 ವರ್ಷದ ಸಾವಿತ್ರಮ್ಮ ಎಂಬುವರಿಗೆ ವಾಂತಿ ಭೇದಿ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಯಾದಗಿರಿ ನಗರಸಭೆ ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ

ನಂತರ ಜೂನ್​ ತಿಂಗಳಲ್ಲಿ ಮತ್ತೆ ಗುರುಮಠಕಲ್ ತಾಲೂಕಿನ ಇಮ್ಲಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 54 ಮಂದಿಗೆ ವಾಂತಿ ಮತ್ತು ಭೇದಿ ಶುರುವಾಗಿತ್ತು. ಈ ಪೈಕಿ 22 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಿಂಗಳು ಕಳೆಯುವುದರ ಒಳಗಾಗಿ ಮೇಲಿಂದ ಮೇಲೆ ಈ ರೀತಿ ಸಂಭವಿಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಅಗತ್ಯ ಕ್ರಮ ಕೈಗೊಳ್ಳದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Tue, 22 August 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ