AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಜುಲೈ 12 ರಿಂದ ಮೂರು-ದಿನ ಭಾರೀ ಮಳೆಯಾಗುವ ಮುನ್ಸೂಚನೆ, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್​ ಘೋಷಿಸಿದ ಜಿಲ್ಲಾಧಿಕಾರಿ

ತಾಲೂಕು ಹಾಗೂ ನೋಡಲ್ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನಗಳಲ್ಲೇ ಇರಬೇಕೆಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಹಾಗೆಯೇ, ಸಾರ್ವಜನಿಕರು ಸಹ ಎಚ್ಚರ ಮತ್ತು ಜಾಗರೂಕತೆಯಿಂದ ಇರಬೇಕೆಂದು ಸೂಚಿಸಿರುವ ಜಿಲ್ಲಾಧಿಕಾರಿಗಳು ನದಿ, ಕೆರೆ ಮತ್ತು ನೀರಿನಿಂದ ಆವೃತವಾಗಿರುವ ಯಾವುದೇ ಪ್ರದೇಶಕ್ಕೆ ಇಳಿಯಬಾರದೆಂದು ಸೂಚಿಸಿದ್ದಾರೆ.

ಯಾದಗಿರಿಯಲ್ಲಿ ಜುಲೈ 12 ರಿಂದ ಮೂರು-ದಿನ ಭಾರೀ ಮಳೆಯಾಗುವ ಮುನ್ಸೂಚನೆ, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್​ ಘೋಷಿಸಿದ ಜಿಲ್ಲಾಧಿಕಾರಿ
ಯಾದಗಿರಿ ಜಿಲ್ಲಾಧಿಕಾರಿ ಡಾ ರಾಗಪ್ರಿಯಾ ಅರ್
TV9 Web
| Edited By: |

Updated on: Jul 10, 2021 | 11:58 PM

Share

ಯಾದಗಿರಿ: ಸುಡುಬಿಸಿಲಿನ ನಾಡು ಎಂದು ಕರೆಸಿಕೊಳ್ಳುವ ಯಾದಗಿರಿಗೆ ಈ ಸಲ ಮಳೆಯ ಕಂಟಕ ಎದುರಾಗಿದೆ. ಹವಾಮಾನ ಹಾಗೂ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು ನೀಡಿರುವ ಮುನ್ಸೂಚನೆ ಪ್ರಕಾರ ಸೋಮವಾರ ಅಂದರೆ ಜುಲೈ 12 ರಿಂದ ಮೂರು ದಿನಗಳವರೆಗೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ. ಸದರಿ ಮುನ್ಸೂಚನೆಯ ಹಿನ್ನೆಲೆಯಲ್ಲೇ ಯಾದಗಿರಿ ಜಿಲ್ಲಾಧಿಕಾರಿ ಡಾ ರಾಗಪ್ರಿಯಾ ಆರ್ ಅವರು ಜುಲೈ 12ರಿಂದ 14 ರವರೆಗೆ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

ತಾಲೂಕು ಹಾಗೂ ನೋಡಲ್ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನಗಳಲ್ಲೇ ಇರಬೇಕೆಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಹಾಗೆಯೇ, ಸಾರ್ವಜನಿಕರು ಸಹ ಎಚ್ಚರ ಮತ್ತು ಜಾಗರೂಕತೆಯಿಂದ ಇರಬೇಕೆಂದು ಸೂಚಿಸಿರುವ ಜಿಲ್ಲಾಧಿಕಾರಿಗಳು ನದಿ, ಕೆರೆ ಮತ್ತು ನೀರಿನಿಂದ ಆವೃತವಾಗಿರುವ ಯಾವುದೇ ಪ್ರದೇಶಕ್ಕೆ ಇಳಿಯಬಾರದೆಂದು ಸೂಚಿಸಿದ್ದಾರೆ.

ಪರಿಸ್ಥಿತಿ ಹತೋಟಿ ಮೀರುವ ಸಂದರ್ಭ ಎದುರಾದರೆ ಸನ್ನದ್ಧರಾಗಿರುವಂತೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ ಸೂಚಿಸಲಾಗಿದೆ.

ಹವಾಮಾನ ಹಾಗೂ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೋಮವಾರದಿಂದ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದರೂ ಜಿಲ್ಲೆಯ ಹಲವಾರು ಭಾಗಗಳಲ್ಲಿ ಭಾರೀ ಅಲ್ಲದಿದ್ದರೂ ಹಗುರವಾದ ಮಳೆ ಬೀಳುತ್ತಿದೆ. ಯಾದಗಿರಿಯ ಟಿವಿ9 ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಅಲ್ಲೀಪುರ, ಮುದ್ನಾಳ, ಅಬ್ಬೆ ತುಮಕೂರು, ಠಾಣಗುಂದ, ಬೊಮ್ಮಚಟ್ನಳ್ಳಿ, ಮಲಕಪ್ಪನಹಳ್ಳಿ, ವಡ್ನಳ್ಳಿ, ಎಸ್ ಹೊಸಳ್ಳಿ, ಮೋಟ್ನಳ್ಳಿ, ಕೋಟಗೇರಾ, ಚಿಂತಕುಂಟ, ಹೆಡಗಿಮದ್ರ, ಹೊನಗೇರಾ, ಹತ್ತಿಕುಣಿ, ಸಮಣಪುರ, ಬಂದಳ್ಳಿ, ಯಡ್ಡಳ್ಳಿ, ಚಾಮನಳ್ಳಿ, ಬೆಳಗೇರಾ, ಖಾನಳ್ಳಿ, ಅರಿಕೇರಾ ಬಿ, ಬಸವಂತಪುರ, ಕ್ಯಾಸಪನಹಳ್ಳಿ, ಹೋರುಣಚ, ಅಚ್ಚೋಲ, ಗುಲಗುಂದಿ, ಕಂಚಗಾರ ಹಳ್ಳಿ, ಬಾಚವಾರ, ಕಟ್ಟಿಗೆ ಶಹಾಪುರ ಮೊದಲಾದ ಗ್ರಾಮಗಳಲ್ಲಿ ಸೋನೆ ಮಳೆ ಸುರಿಯುತ್ತಿದೆ.

ಈ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ರೈತರಲ್ಲಿ ಸಂತೋಷವನ್ನುಂಟು ಮಾಡಿದೆ. ಕೆಲವು ಹಳ್ಳಿಗಳಲ್ಲಿ ನಿಂತು ಹೋಗಿದ್ದ ಬಿತ್ತನೆ ಕಾರ್ಯ ಮತ್ತೆ ಶುರುವಾಗಿದೆ. ಕೆರೆ-ಕುಂಟೆಗಳು ಭರ್ತಿಯಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ರೈತಾಪಿ ಜನ ಈ ಬಾರಿ ಉತ್ತಮ ಫಸಲಿನ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಆದರೆ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯೆಲ್ಲೆಡೆ ಮೂರು ದಿನಗಳ ಕಾಲ ಮಳೆ ಸುರಿದರೆ ಅವರು ಕಷ್ಟಕ್ಕೀಡಾಗಲಿದ್ದಾರೆ.

ಇದನ್ನೂ ಓದಿ: ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್