AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಶರಣಗೌಡ ಕಂದಕೂರನಿಂದ ಕಿರುಕುಳ ಆರೋಪ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ

ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ ಅವರ ಕಿರುಕುಳ ನೀಡಿದ್ದಾರೆ ಎಂದು ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದ ಯುವಕ ಬೀರಲಿಂಗಪ್ಪ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಶಾಸಕರ ಕಾರ್ಯಕರ್ತರಿಂದ ಹಲ್ಲೆ, ಸುಳ್ಳು ದೂರು ದಾಖಲು, ಕೆಲಸದಿಂದ ವಜಾ, ದೇವಸ್ಥಾನ ಅನುದಾನದಲ್ಲಿ ಅಡ್ಡಿ, ಇವುಗಳಿಂದಾಗಿ ಆರ್ಥಿಕ ಹಾಗೂ ಮಾನಸಿಕ ಸಂಕಷ್ಟ ಎದುರಿಸುತ್ತಿರುವ ಬೀರಲಿಂಗಪ್ಪ ದಯಾಮರಣಕ್ಕಾಗಿ ಮನವಿ ಮಾಡಿದ್ದಾರೆ. ಇದು ರಾಜಕೀಯ ಪ್ರತೀಕಾರ ಎಂದು ಅವರು ಆರೋಪಿಸಿದ್ದಾರೆ.

ಶಾಸಕ ಶರಣಗೌಡ ಕಂದಕೂರನಿಂದ ಕಿರುಕುಳ ಆರೋಪ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ
ಶರಣಗೌಡ ಕಂದಕೂರ, ಬೀರಲಿಂಗಪ್ಪ
TV9 Web
| Edited By: |

Updated on: Jan 19, 2025 | 12:33 PM

Share

ಯಾದಗಿರಿ, ಜನವರಿ 19: ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ (Sharanagouda Kandakura) ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳ ತಡೆದುಕೊಳ್ಳಲಾಗದೆ ದಯಾಮರಣ ಕರಣಿಸುವಂತೆ ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದ ಯುವಕ ಬೀರಲಿಂಗಪ್ಪ ಎಂಬುವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

“ಗುರುಮಿಠಕಲ್ ಮತಕೇತ್ರದ ಶಾಸಕ ಶರಣಗೌಡ ಕಂದಕೂರ ನನ್ನ ಊರಿನ ರಾಜಶೇಖರ ಗೌಡ ಮತ್ತು ಮಲ್ಲಿಕಾರ್ಜುನ ಮಾಲಿಪಾಟೀಲ್ ಅವರಿಂದ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರಿಂದ ಸೈದಾಪೂರ ಪೊಲೀಸ್​ ಠಾಣೆಯಲ್ಲಿ ನನ್ನ ಮೇಲೆ ಸುಳ್ಳು ದೂರು ನೀಡಿದ್ದಾರೆ. ನಾನು ವಾರ್ತಾ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದು, ನನ್ನನ್ನು ಕೆಲಸದಿಂದ ತೆಗೆಯದಿದ್ದರೆ ನಿಮ್ಮ ಆಫೀಸ್ ಮುಂದೆ ಪ್ರತಿಭಟನೆ ಮಾಡುತ್ತೇನೆ ಹಾಗೂ ವಿಧಾನಸೌಧದಲ್ಲಿ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ, ನನ್ನ ಪವರ್ ಏನೆಂದು ತೋರಿಸುತ್ತೇನೆ ಎಂದು ವಾರ್ತಾ ಇಲಾಖೆ ಅಧಿಕಾರಿಗಳಿಗೆ ಧಮ್ಮಿ ಹಾಕಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳ ಮುಖಾಂತರ ನನ್ನನ್ನು ಕೆಲಸದಿಂದ ತೆಗೆಸಲು ಹುನ್ನಾರ ನಡೆಸಿದ್ದಾರೆ.

“ನಮ್ಮ ಊರಿನ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಬಿಡುಗಡೆಯಾದ 3 ಲಕ್ಷದ 98 ಸಾವಿರ ರೂಪಾಯಿಗಳ ಅನುದಾನಕ್ಕೆ ತಮ್ಮ ಕಾರ್ಯಕರ್ತರಿಂದ ಗ್ರಾಮಸ್ಥರ ಪೋರ್ಜರಿ ಸಹಿ ಮಾಡಿಸಿ ಬಿಲ್ ಮಾಡದಂತೆ ನಿರ್ಮೀತಿ ಕೇಂದ್ರದ ಅಧಿಕಾರಿಗಳಿಗೆ ತಡೆ ಹಿಡಿದಿದ್ದಾರೆ. ದೇವಸ್ಥಾನ ನಿರ್ಮಾಣಕ್ಕಾಗಿ ಸಾಲ ಮಾಡಿದ್ದೇನೆ. ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿ ಇರುವಾಗ ಉದ್ದೇಶ ಪೂರ್ವಕವಾಗಿ ಕಾಮಗಾರಿ ಬದಲಾವಣೆ, ಮಾಡಿ ಅನುದಾನ ಬೇರೆ ಊರಿಗೆ ಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ಮೀತಿ ಕೇಂದ್ರದವರಿಗೆ ಶಾಸಕರು ಪತ್ರ ಬರೆದಿದ್ದಾರೆ.

“ಶಾಸಕರು ಅನುಮತಿ ಇಲ್ಲದೇ ನಾವು ಬಿಲ್ ಮಾಡಲು ಸಾಧ್ಯವಿಲ್ಲ ಎಂದು ನಿರ್ಮೀತಿ ಕೇಂದ್ರದ ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗೆ ಹಲವಾರು ರೀತಿಯಲ್ಲಿ ನನಗೆ ಮಾನಸಿಕ ಹಿಂಸೆ ನೀಡಿ-ಮುಂದೆ ನನ್ನ ಸಾವಿಗೆ ಶಾಸಕರು ಕಾರಣವಾಗುತ್ತಿದ್ದಾರೆ.”

“ಶಾಸಕ ಶರಣಗೌಡ ಕಂದಕೂರ ಜಿಲ್ಲಾಮಟ್ಟದ ಅಧಿಕಾರಿಗಳಿಗೂ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಹೀಗೆ ಅಧಿಕಾರ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಲು ಪ್ರಯತ್ನಿಸುತ್ತಿದ್ದಾರೆ.”

“ನಮ್ಮ ಊರಿನಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಲೀಡ್ ಬರಲಿಲ್ಲ ಎಂಬ ಕಾರಣಕ್ಕೆ ಈ ರೀತಿಯ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಶಾಸಕರಿಗೆ ತೇಜೋವಧೆ ಮಾಡಿಸಿದ್ದಾನೆ ಎಂದು ಸುಳ್ಳು ಸಾಕ್ಷಿಯ ಆಧಾರಗಳನ್ನು ಸೃಷ್ಟಿಸಿ ನನ್ನ ಮೇಲೆ ಕೇಸ್ ದಾಖಲಿಸಲು ಪ್ರಯತ್ನಪಡುತ್ತಿದ್ದಾರೆ.”

“ತಮ್ಮ ಕಾರ್ಯಕರ್ತರಿಂದ ನನ್ನ ಮೇಲೆ ಸುಖಾಸುಮ್ಮನೆ ಉದ್ದೇಶ ಪೂರ್ವಕವಾಗಿ ಜಗಳ ಮಾಡಿ ಹಲ್ಲೆ ಮಾಡಿಸಲು ಪ್ರೇರೇಪಿಸುತ್ತಿದ್ದಾರೆ. ಮುಂದೆ ನನಗೇನಾದರೂ ಜೀವಕ್ಕೆ ಅಪಾಯವಾದರೆ ಶಾಸಕರಾದ ಶರಣಗೌಡ ಕಂದಕೂರ ಅವರೇ ನೇರ ಹೊಣೆಗಾರರು ಆಗಿರುತ್ತಾರೆ. ಹೀಗಾಗಿ ದೇವಸ್ಥಾನ ನಿರ್ಮಿಸುವುದಕ್ಕಾಗಿ ಸಾಲ ಮಾಡಿದ್ದರಿಂದ ಅನುದಾನದ ಬಿಲ್ ತಡೆ ಹಿಡಿದಿದ್ದರಿಂದ ಸಾಲಗಾರನಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇನೆ.”

“ಸಾಲ ಕೊಟ್ಟವರಿಗೆ ಮುಖ ತೋರಿಸಲು ಆಗುತ್ತಿಲ್ಲ. ಅಷ್ಟೇ ಅಲ್ಲದೇ ಕೆಲಸದಿಂದ ನನ್ನನ್ನು ತೆಗೆಸಿ ಬೀದಿಪಾಲು ಮಾಡುತ್ತಿದ್ದಾರೆ ಹೀಗಾಗಿ ನನಗೆ ದಯಾಮರಣ ಕೊಟ್ಟು ಶಾಸಕರ ಮಾನಸಿಕ ಕಿರುಕುಳದಿಂದ ಮುಕ್ತಿ ಕೊಡಿಸಬೇಕು ಎಂದು ತಮ್ಮಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದು ಬೀರಲಿಂಗಪ್ಪ ಪತ್ರದಲ್ಲಿ ಬರೆದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು