AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದಾನ ಮಾಡಲು ರಾಜವಂಶಸ್ಥ ಯದುವೀರ್ ಕರೆ

ಮೈಸೂರಿನ ಕೆಲ ಸೇವಾ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ. ನಾಗರೀಕರು ಸಮಾಜದ ಸುಧಾರಣೆಗಾಗಿ ಹಾಗೂ ಈ ಬಿಕ್ಕಟ್ಟಿನ ಕಾಲದಲ್ಲಿ ಎಲ್ಲರೂ ಮುಂದೆ ಬಂದು ರಕ್ತವನ್ನು ದಾನ ಮಾಡಿ ಎಂದು ಮನವಿ ಮಾಡಿದ್ದಾರೆ.

ರಕ್ತದಾನ ಮಾಡಲು ರಾಜವಂಶಸ್ಥ ಯದುವೀರ್ ಕರೆ
ರಾಜವಂಶಸ್ಥ ಯದುವೀರ್
TV9 Web
| Edited By: sandhya thejappa|

Updated on: Jun 12, 2021 | 11:18 AM

Share

ಮೈಸೂರು: ರಕ್ತದಾನ ಮಾಡಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕರೆ ನೀಡಿದ್ದಾರೆ. ಕಠಿಣ ಸಂದರ್ಭ ಇದಾಗಿದೆ. ಇಂತಹ ಸಮಯದಲ್ಲಿ ಎಲ್ಲರು ಕೈಜೋಡಿಸಿ. ಈ ಸಂದರ್ಭದಲ್ಲಿ ರಕ್ತದಾನ ಮಾಡಿ ಎಂದು ಯದುವೀರ್ ಮನವಿ ಮಾಡಿದ್ದಾರೆ. ಮೈಸೂರಿನ ಕೆಲ ಸೇವಾ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ. ನಾಗರೀಕರು ಸಮಾಜದ ಸುಧಾರಣೆಗಾಗಿ ಹಾಗೂ ಈ ಬಿಕ್ಕಟ್ಟಿನ ಕಾಲದಲ್ಲಿ ಎಲ್ಲರೂ ಮುಂದೆ ಬಂದು ರಕ್ತವನ್ನು ದಾನ ಮಾಡಿ. ವಿಶೇಷವಾಗಿ ಯುವಕರು ಈ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ವೀಡಿಯೋ ಮೂಲಕ ಮನವಿ ಮಾಡಿದ್ದಾರೆ. ಶಾಸಕ ಡಿ.ಎಸ್.ಸುರೇಶ್ ಡ್ಯಾನ್ಸ್ ಚಿಕ್ಕಮಗಳೂರು: ಕೊವಿಡ್ ಕೇರ್ ಸೆಂಟರ್​ನಲ್ಲಿ ಶಾಸಕ ಡಿ.ಎಸ್.ಸುರೇಶ್ ಡ್ಯಾನ್ಸ್ ಮಾಡಿದ್ದಾರೆ. ಸೋಂಕಿತರಿಗೆ ಧೈರ್ಯ ತುಂಬಲು ಸೋಂಕಿತ ಬಾಲಕಿ ಜೊತೆ ಶಾಸಕರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಹಾಡು ಹೇಳುತ್ತಾ ಶಾಸಕ ನೃತ್ಯ ಮಾಡಿದ್ದಾರೆ.

ಬಾವಿಕೆರೆ ಕೋವಿಡ್ ಕೇರ್ ಸೆಂಟರ್​ನಲ್ಲಿ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಶಾಸಕ ಕಾಲ ಮತ್ತೊಮ್ಮೆ ನಮಗಾಗಿ ಬಂತು ಎಂಬ ಹಾಡನ್ನು ಹಾಡಿದ್ದಾರೆ. ಜೊತೆಗೆ ಯಾರೇ ನೀನು ರೋಜಾ ಹೂವೇ ಹಾಡನ್ನು ಹಾಡಿಕೊಂಡು ಹೆಜ್ಜೆ ಹಾಕಿದ್ದಾರೆ. ಸೋಂಕಿತ ಬಾಲಕಿ ಶಾಸಕರ ಜೊತೆ ಕುಣಿದು ಕುಪ್ಪಳಿಸಿದ್ದಾಳೆ. ಈ ವೇಳೆ ಶಾಸಕರಿಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಹಾಡು ಹೇಳಿ ಹೆಜ್ಜೆ ಹಾಕಿದ ಶಾಸಕ

ಇದನ್ನೂ ಓದಿ

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ

ದೇಶಾದ್ಯಂತ ಮುಂಗಾರು ಜೋರು: ಮುಂಗಾರು ತವರು ಕೇರಳದಲ್ಲಿ ಮಳೆ ಮಳೆ, ಮುಂಬೈನಲ್ಲಿ ಹೈಅಲರ್ಟ್​, ಈಶಾನ್ಯದಲ್ಲಿ ಚಂಡಮಾರುತ

(Yaduveer has requested to donate blood in mysuru)

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು