ಒಡೆಯರ್ ಜೊತೆಗಿನ ಅಪರೂಪದ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಯದುವೀರ್

ಮೈಸೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು(88) ಇಹಲೋಕ ತ್ಯಜಿಸಿದ್ದಾರೆ. ಜಯಚಾಮರಾಜೇಂದ್ರ ಒಡೆಯರ್ ಜೊತೆಗಿನ ಶ್ರೀಗಳ ಅಪರೂಪದ ಫೋಟೋ ಹಂಚಿಕೊಂಡು ಯದುವೀರ್ ಸಂತಾಪ ಸೂಚಿಸಿದ್ದಾರೆ. ಮಹಾನ್ ಸಂತರೂ ಸಿದ್ಧಪುರುಷರೂ ಆದ ಶ್ರೀಕ್ಷೇತ್ರ ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ದೈವಾಧೀನರಾಗಿದ್ದು ನಮಗೆ ಬಹಳ ದುಃಖವಾಗಿದೆ. ಪರಮಪೂಜ್ಯ ಶ್ರೀಪಾದಂಗಳವರು ತಮ್ಮ ಬಾಲ್ಯದಲ್ಲೇ ವಯ್ಯಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷ ತಮ್ಮನ್ನು ನಿರಂತರವಾಗಿ ಶ್ರೀಕೃಷ್ಣನ ಸೇವೆಗಾಗಿ ಹಾಗು ಸಮಾಜದ ಸುಧಾರಣೆಗಾಗಿ ಮುಡಿಪಾಗಿಸಿಟ್ಟಿದ್ದರು. ನಮ್ಮ […]

ಒಡೆಯರ್ ಜೊತೆಗಿನ ಅಪರೂಪದ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಯದುವೀರ್
ಸಾಧು ಶ್ರೀನಾಥ್​

Updated on: Dec 30, 2019 | 6:47 PM

ಮೈಸೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು(88) ಇಹಲೋಕ ತ್ಯಜಿಸಿದ್ದಾರೆ. ಜಯಚಾಮರಾಜೇಂದ್ರ ಒಡೆಯರ್ ಜೊತೆಗಿನ ಶ್ರೀಗಳ ಅಪರೂಪದ ಫೋಟೋ ಹಂಚಿಕೊಂಡು ಯದುವೀರ್ ಸಂತಾಪ ಸೂಚಿಸಿದ್ದಾರೆ.

ಮಹಾನ್ ಸಂತರೂ ಸಿದ್ಧಪುರುಷರೂ ಆದ ಶ್ರೀಕ್ಷೇತ್ರ ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ದೈವಾಧೀನರಾಗಿದ್ದು ನಮಗೆ ಬಹಳ ದುಃಖವಾಗಿದೆ. ಪರಮಪೂಜ್ಯ ಶ್ರೀಪಾದಂಗಳವರು ತಮ್ಮ ಬಾಲ್ಯದಲ್ಲೇ ವಯ್ಯಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷ ತಮ್ಮನ್ನು ನಿರಂತರವಾಗಿ ಶ್ರೀಕೃಷ್ಣನ ಸೇವೆಗಾಗಿ ಹಾಗು ಸಮಾಜದ ಸುಧಾರಣೆಗಾಗಿ ಮುಡಿಪಾಗಿಸಿಟ್ಟಿದ್ದರು.

ನಮ್ಮ ಪೂರ್ವಜರಾದ ಮಹಾರಾಜ ಶ್ರೀ ಜಯಚಾಮರಾಜ ಒಡೆಯರವರು ಆಗಾಗ್ಗೆ ಶ್ರೀಮಠಕ್ಕೆ ಭೇಟಿ ನೀಡಿ ಪರಮಪೂಜ್ಯರ ದರ್ಶನವನ್ನು ಪಡೆಯುತ್ತಿದ್ದರು. ನಾಡಿನ ಜನತೆಗೆ ಶ್ರೀಗಳವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಯದುವೀರ್ ಒಡೆಯರ್ ಸಂತಾಪ ಸೂಚಿಸಿದ್ದಾರೆ.

Published On - 11:54 am, Sun, 29 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us