AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನಲ್ಲ: ಪ್ರತಾಪ್ ಸಿಂಹಗೆ ಯದುವೀರ್ ಟಾಂಗ್

ಅರಮನೆಯ AC ರೂಂನಲ್ಲಿ ರಾಜನಾಗಿರುವ ಬದಲು, ಪ್ರಜೆಗಳಂತೆ ಬದುಕಲು ಬಂದ್ರೆ ಸ್ವಾಗತಿಸದಿರಲಾಗುತ್ತಾ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ತಿರುಗೇಟು ನೀಡಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್​​, ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನು ಅಲ್ಲ. ನಾನು ಈಗಾಗಲೇ ಜನರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.  

ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನಲ್ಲ: ಪ್ರತಾಪ್ ಸಿಂಹಗೆ ಯದುವೀರ್ ಟಾಂಗ್
ರಾಮ್​, ಮೈಸೂರು
| Edited By: |

Updated on:Mar 14, 2024 | 8:00 PM

Share

ಮೈಸೂರು, ಮಾರ್ಚ್​​ 14: ಅರಮನೆಯ AC ರೂಂನಲ್ಲಿ ರಾಜನಾಗಿರುವ ಬದಲು, ಪ್ರಜೆಗಳಂತೆ ಬದುಕಲು ಬಂದ್ರೆ ಸ್ವಾಗತಿಸದಿರಲಾಗುತ್ತಾ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ತಿರುಗೇಟು ನೀಡಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar)​​, ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನು ಅಲ್ಲ. ನಾನು ಈಗಾಗಲೇ ಜನರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ, ಬಿಜೆಪಿ ಕಾರ್ಯವೈಖರಿ ಗಮನಿಸಿ‌ ಸ್ಪರ್ಧೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ರಾಜಕಾರಣದ ಮೂಲಕ ಸಾಮಾಜಿಕ ಸಮಸ್ಯೆ ಬಗೆಹರಿಸಲು ಸಾಧ್ಯ. ಇದೇ ಕಾರಣಕ್ಕೆ ನಾನು ರಾಜಕಾರಣಕ್ಕೆ ಬರಲು ತೀರ್ಮಾನಿಸಿದ್ದೇನೆ. ರಾಜಕೀಯದಲ್ಲಿ ಇರುವ ಸವಾಲುಗಳನ್ನು ಅರಿತೇ ಬಂದಿದ್ದೇನೆ. ಕೇವಲ ಅವಕಾಶ ಸಿಕ್ಕಿದೆ ಅಂತಾ ನಾನು ರಾಜಕಾರಣಕ್ಕೆ ಬಂದಿಲ್ಲ. ಪ್ರತಾಪ್ ಸಿಂಹ ಸೇರಿ ಹಲವರು ಉತ್ತಮ ಅಡಿಪಾಯ ಹಾಕಿದ್ದಾರೆ ಎಂದಿದ್ದಾರೆ.

ಜನರು ಅವಕಾಶ ಕೊಟ್ಟರೆ ಮೈಸೂರು-ಕೊಡಗು ಅಭಿವೃದ್ಧಿ ಮಾಡ್ತೇನೆ

ಜನರು ಅವಕಾಶ ಕೊಟ್ಟರೆ ಮೈಸೂರು-ಕೊಡಗು ಅಭಿವೃದ್ಧಿ ಮಾಡುತ್ತೇನೆ. ಮೈಸೂರು ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುವ ಜವಾಬ್ದಾರಿ ಇದೆ. ಕಳೆದ 9 ವರ್ಷದಿಂದ ಮೈಸೂರು ಅರಮನೆ ಜವಾಬ್ದಾರಿ ಹೊತ್ತಿದ್ದೇನೆ. ಈಗ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗಿದ್ದೇನೆ. ಉತ್ತಮ ಸರ್ಕಾರ ಇದ್ದರೆ ಮತ್ತಷ್ಟು ಅಭಿವೃದ್ಧಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

ಯದುವೀರ್ ಬಿಜೆಪಿ ಸೇರ್ಪಡೆಯಾಗಿದ್ದಕ್ಕೆ ದೊಡ್ಡಬಲ ಬಂದಿದೆ: ಬಿ.ಎಸ್​.ಯಡಿಯೂರಪ್ಪ

ಯದುವೀರ್ ಸ್ಪರ್ಧೆ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಅವರ ಸುತ್ತಮುತ್ತ ಕ್ಷೇತ್ರಗಳಲ್ಲಿ ಅನುಕೂಲವಾಗಲಿದೆ. ಅವರು ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಓಡಾಡಲು ಒಪ್ಪಿಕೊಂಡಿದ್ದಾರೆ. ಯದುವೀರ್ ಬಿಜೆಪಿ ಸೇರ್ಪಡೆಯಾಗಿದ್ದಕ್ಕೆ ದೊಡ್ಡಬಲ ಬಂದಿದೆ ಎಂದರು.

ಇದನ್ನೂ ಓದಿ: ಟಿಕೆಟ್​ ಸಿಕ್ಕ ಖುಷಿಯಲ್ಲಿ ಮೈಸೂರು-ಕೊಡಗು ಜನತೆಗೊಂದು ಯದುವೀರ್ ಪತ್ರ, ಆ ಪತ್ರದಲ್ಲೇನಿದೆ?

ಸಂಸದ ಪ್ರತಾಪ್​ ಸಿಂಹಗೆ ಬಿಜೆಪಿ ಟಿಕೆಟ್ ಕೈತಪ್ಪಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಯಾವ ಪ್ರಶ್ನೆ ಕೇಳಬೇಡಿ, ಎಲ್ಲರೂ ಸಮಾಧಾನಗೊಂಡಿದ್ದಾರೆ. ಕೆ‌.ಎಸ್.ಈಶ್ವರಪ್ಪ ಜೊತೆಗೂ ನಾನು ಮಾತನಾಡುತ್ತೇನೆ. ಈಶ್ವರಪ್ಪ ಪುತ್ರನನ್ನು ಎಂಎಲ್​ಸಿ ಮಾಡುವ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:07 pm, Thu, 14 March 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್