AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಜವಂಶಸ್ಥ ಯದುವೀರ್

ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ನಿನ್ನೆಯಿಂದ ಬಹುತೇಕ ಲಾಕ್​ಡೌನ್​ಗೆ ಹೋಲುವ ಕೊರೊನಾ ಕರ್ಫ್ಯೂನ ಜಾರಿಗೊಳಿಸಿದೆ. ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ತನ್ನ ಜೀವದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ.

ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಜವಂಶಸ್ಥ ಯದುವೀರ್
ರಾಜವಂಶಸ್ಥ ಯದುವೀರ್​
Follow us
sandhya thejappa
|

Updated on: Apr 28, 2021 | 12:59 PM

ಮೈಸೂರು: ಕಳೆದ ಬಾರಿ ಕೊರೊನಾದಿಂದ ಆದ ನಷ್ಟ ಒಂದೆರಡಲ್ಲ. ಅದೆಷ್ಟೋ ಜೀವಿಗಳನ್ನು ಬಲಿ ತೆಗೆದುಕೊಂಡ ಕೊರೊನಾ ದೇಶದ ಆರ್ಥಿಕ ಪರಿಸ್ಥಿಯನ್ನು ಕುಂಟಿತಗೊಳಿಸಿದೆ. ಹದಗೆಟ್ಟ ಆರ್ಥಿಕತೆ ಇನ್ನೇನು ಸರಿಯಾಗುತ್ತದೆ ಎಂದು ಯೋಚಿಸುವ ಹೊತ್ತಿಗೆ ಕೊರೊನಾ ಎರಡನೇ ಅಲೆ ಬಂದು ಅಪ್ಪಳಿಸಿದೆ. ಕಳೆದ ಬಾರಿಗಿಂತ ಇದರ ಆರ್ಭಟ ಹೆಚ್ಚಾಗಿದ್ದು, ಎಲ್ಲರಿಗೂ ಆತಂಕ ಎದುರಾಗಿದೆ. ಮಹಾಮಾರಿ ಕೊರೊನಾ ತೊಲಗಿ ಹೋಗಲಿ ದೇಶ ಮತ್ತು ರಾಜ್ಯ ಮೊದಲ ಸ್ಥಿತಿಗೆ ಬರಲಿ ಎಂದು ದೇವರ ಮೊರೆ ಹೋಗುತ್ತಿದ್ದಾರೆ. ಅದರಂತೆ ಮೈಸೂರು ರಾಜವಂಶಸ್ಥ ಯದುವೀರ್​ ಸಂಕಷ್ಟಗಳನ್ನು ತಾಯಿ ಪರಿಹರಿಸು ಎಂದು ಜಗನ್ಮಾತೆ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ನಿನ್ನೆಯಿಂದ ಬಹುತೇಕ ಲಾಕ್​ಡೌನ್​ಗೆ ಹೋಲುವ ಕೊರೊನಾ ಕರ್ಫ್ಯೂನ ಜಾರಿಗೊಳಿಸಿದೆ. ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ತನ್ನ ಜೀವದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯಕ್ಕೆ ರಾಜವಂಶಸ್ಥ ಯದುವೀರ್​ ಧನ್ಯವಾದ ಅರ್ಪಿಸಿದ್ದಾರೆ.

ನಮ್ಮ ದೇಶ ಎದುರಿಸುತ್ತಿರುವ ಈ ಕಠಿಣ ಸಂದರ್ಭದಲ್ಲಿ ನಮ್ಮ ಪ್ರಾರ್ಥನೆಗಳು ಎಲ್ಲರೊಂದಿಗೆ ಇರುತ್ತವೆ. ಸಂಕಷ್ಟಕರ ಸಮಯದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಮುಂಚೂಣಿಯಲ್ಲಿದ್ದು ಕಾರ್ಯ ನಿರ್ವಹಿಸುತ್ತಿರುವ ಎಲ್ಲರಿಗೂ ನಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ತಿಳಿಸುತ್ತೇವೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ನಮಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಉಪಶಮನ ಮಾಡಿ ನಮ್ಮೆಲ್ಲರಿಗೆ ಸಮಸ್ತ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Yaduveer

ಸಾಮಾಜಿಕ ಜಾಲತಾಣದಲ್ಲಿ ಧನ್ಯವಾದ ಅರ್ಪಿಸಿದ್ದಾರೆ

ಇದನ್ನೂ ಓದಿ

ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೆ ದಾವಣಗೆರೆ ಪಾಲಿಕೆಯಿಂದ ಉಚಿತ ವಾಹನ

ಅಪಾಯದಲ್ಲಿರುವ ಭಾರತಕ್ಕೆ ಸಹಾಯ ಮಾಡಲು ವಿಶ್ವ ವಿಫಲವಾಗಿದೆ: ಯುಎಸ್​ನ ವೈದ್ಯಕೀಯ ಸಲಹೆಗಾರ ಡಾ. ಫೌಸಿ ಅಸಮಾಧಾನ

(yaduveer krishnadatta chamaraja wadiyar thanked doctors and health workers in social media)

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್