AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಬಿದಿರೆಯಲ್ಲಿ ವೇದಿಕೆಯಲ್ಲಿ ಕುಣಿಯುವಾಗಲೇ ಕುಸಿದು ಬಿದ್ದ ಯಕ್ಷಗಾನ ಕಲಾವಿದ

ಮೂಡಬಿದಿರೆ ತಾಲೂಕಿನ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಯಕ್ಷಗಾನ ಮಾಡುತ್ತಿದ್ದಾಗ ಅರ್ಜುನ್ ಪಾತ್ರಧಾರಿ ಮೋಹನ್ ಕುಮಾರ್ ಅಮ್ಮುಂಜೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.

ಮೂಡಬಿದಿರೆಯಲ್ಲಿ ವೇದಿಕೆಯಲ್ಲಿ ಕುಣಿಯುವಾಗಲೇ ಕುಸಿದು ಬಿದ್ದ ಯಕ್ಷಗಾನ ಕಲಾವಿದ
ಮೋಹನ್ ಕುಮಾರ್ ಅಮ್ಮುಂಜೆ
TV9 Web
| Edited By: |

Updated on:Aug 10, 2021 | 7:21 PM

Share

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಯಕ್ಷಗಾನ ಮಾಡುತ್ತಿರುವಾಗ ಯಕ್ಷಗಾನ ಕಲಾವಿದ ವೇದಿಕೆಯಲ್ಲೇ ಕುಸಿದುಬಿದ್ದಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಯಕ್ಷಗಾನ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಎಂಬುವವರು ಯಕ್ಷಗಾನ ಮಾಡುತ್ತಿದ್ದಾಗಲೇ ತಲೆ ತಿರುಗಿ ಬಿದ್ದಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮೂಡಬಿದಿರೆ ತಾಲೂಕಿನ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ನಿನ್ನೆ ರಾತ್ರಿ ನಡೆಯುತ್ತಿದ್ದ ‘ಕರ್ಣ ಪರ್ವ’ ಯಕ್ಷಗಾನ ಪ್ರಸಂಗದಲ್ಲಿ ಅರ್ಜುನ ಪಾತ್ರಧಾರಿಯಾಗಿದ್ದ ಮೋಹನ್ ಕುಮಾರ್ ಅಮ್ಮುಂಜೆ ಕರ್ಣನ ವೇಷಧಾರಿಯೊಂದಿಗೆ ವೇದಿಕೆಯಲ್ಲಿ ಸಂಭಾಷಣೆ ಮಾಡುತ್ತಾ ಕುಣಿಯುತ್ತಿದ್ದಾಗ ತಲೆ ತಿರುಗಿ ಬಿದ್ದಿದ್ದಾರೆ. ತಕ್ಷಣ ವೇದಿಕೆಯಲ್ಲಿದ್ದ ಕಲಾವಿದರು ಹಾಗೂ ಹಿಮ್ಮೇಳದವರು ಮೋಹನ್ ಕುಮಾರ್ ಅವರನ್ನು ಎತ್ತಿ ಕೂರಿಸಿದ್ದಾರೆ.

ಕೊರೊನಾದಿಂದಾಗಿ ಹಲವು ತಿಂಗಳಿಂದ ಯಕ್ಷಗಾನ ಪ್ರದರ್ಶನ ನಡೆಯದ ಕಾರಣ ಇದ್ದಕ್ಕಿದ್ದಂತೆ ವೇದಿಕೆ ಏರಿದಾಗ ಫೋಕಸ್ ಲೈಟ್​ನಿಂದ ತಲೆ ತಿರುಗಿದೆ. ನಾನೀಗ ಆರೋಗ್ಯವಾಗಿದ್ದೇನೆ ಎಂದು ಮೋಹನ್ ಕುಮಾರ್ ತಿಳಿಸಿದ್ದಾರೆ. ಕೊಂಚ ಚೇತರಿಸಿಕೊಂಡ ಬಳಿಕ ನಿನ್ನೆ ತಾವೇ ಅರ್ಜುನನ ಪಾತ್ರವನ್ನು ಮೋಹನ್ ಕುಮಾರ್ ನಿಭಾಯಿಸಿದ್ದಾರೆ.

ಇದನ್ನೂ ಓದಿ: ಎರಡನೇ ಡೋಸ್ ಲಸಿಕೆ ಪಡೆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ; ಮಂಗಳೂರು ವಿವಿ ಪದವಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರದಾಟ

ಆನ್​ಲೈನ್ ಯಕ್ಷಗಾನ; ಉಡುಪಿಯಿಂದಲೇ ಬ್ರಿಟನ್‌ ಮತ್ತು ಜರ್ಮನ್​ನಲ್ಲಿರುವವರಿಗೆ ತರಬೇತಿ

(Yakshagana Artist Fell Down while Performing Yakshagana in Stage at Mudbidri)

Published On - 7:13 pm, Tue, 10 August 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ