AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಬಿದಿರೆಯಲ್ಲಿ ವೇದಿಕೆಯಲ್ಲಿ ಕುಣಿಯುವಾಗಲೇ ಕುಸಿದು ಬಿದ್ದ ಯಕ್ಷಗಾನ ಕಲಾವಿದ

ಮೂಡಬಿದಿರೆ ತಾಲೂಕಿನ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಯಕ್ಷಗಾನ ಮಾಡುತ್ತಿದ್ದಾಗ ಅರ್ಜುನ್ ಪಾತ್ರಧಾರಿ ಮೋಹನ್ ಕುಮಾರ್ ಅಮ್ಮುಂಜೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.

ಮೂಡಬಿದಿರೆಯಲ್ಲಿ ವೇದಿಕೆಯಲ್ಲಿ ಕುಣಿಯುವಾಗಲೇ ಕುಸಿದು ಬಿದ್ದ ಯಕ್ಷಗಾನ ಕಲಾವಿದ
ಮೋಹನ್ ಕುಮಾರ್ ಅಮ್ಮುಂಜೆ
TV9 Web
| Edited By: |

Updated on:Aug 10, 2021 | 7:21 PM

Share

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಯಕ್ಷಗಾನ ಮಾಡುತ್ತಿರುವಾಗ ಯಕ್ಷಗಾನ ಕಲಾವಿದ ವೇದಿಕೆಯಲ್ಲೇ ಕುಸಿದುಬಿದ್ದಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಯಕ್ಷಗಾನ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಎಂಬುವವರು ಯಕ್ಷಗಾನ ಮಾಡುತ್ತಿದ್ದಾಗಲೇ ತಲೆ ತಿರುಗಿ ಬಿದ್ದಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮೂಡಬಿದಿರೆ ತಾಲೂಕಿನ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ನಿನ್ನೆ ರಾತ್ರಿ ನಡೆಯುತ್ತಿದ್ದ ‘ಕರ್ಣ ಪರ್ವ’ ಯಕ್ಷಗಾನ ಪ್ರಸಂಗದಲ್ಲಿ ಅರ್ಜುನ ಪಾತ್ರಧಾರಿಯಾಗಿದ್ದ ಮೋಹನ್ ಕುಮಾರ್ ಅಮ್ಮುಂಜೆ ಕರ್ಣನ ವೇಷಧಾರಿಯೊಂದಿಗೆ ವೇದಿಕೆಯಲ್ಲಿ ಸಂಭಾಷಣೆ ಮಾಡುತ್ತಾ ಕುಣಿಯುತ್ತಿದ್ದಾಗ ತಲೆ ತಿರುಗಿ ಬಿದ್ದಿದ್ದಾರೆ. ತಕ್ಷಣ ವೇದಿಕೆಯಲ್ಲಿದ್ದ ಕಲಾವಿದರು ಹಾಗೂ ಹಿಮ್ಮೇಳದವರು ಮೋಹನ್ ಕುಮಾರ್ ಅವರನ್ನು ಎತ್ತಿ ಕೂರಿಸಿದ್ದಾರೆ.

ಕೊರೊನಾದಿಂದಾಗಿ ಹಲವು ತಿಂಗಳಿಂದ ಯಕ್ಷಗಾನ ಪ್ರದರ್ಶನ ನಡೆಯದ ಕಾರಣ ಇದ್ದಕ್ಕಿದ್ದಂತೆ ವೇದಿಕೆ ಏರಿದಾಗ ಫೋಕಸ್ ಲೈಟ್​ನಿಂದ ತಲೆ ತಿರುಗಿದೆ. ನಾನೀಗ ಆರೋಗ್ಯವಾಗಿದ್ದೇನೆ ಎಂದು ಮೋಹನ್ ಕುಮಾರ್ ತಿಳಿಸಿದ್ದಾರೆ. ಕೊಂಚ ಚೇತರಿಸಿಕೊಂಡ ಬಳಿಕ ನಿನ್ನೆ ತಾವೇ ಅರ್ಜುನನ ಪಾತ್ರವನ್ನು ಮೋಹನ್ ಕುಮಾರ್ ನಿಭಾಯಿಸಿದ್ದಾರೆ.

ಇದನ್ನೂ ಓದಿ: ಎರಡನೇ ಡೋಸ್ ಲಸಿಕೆ ಪಡೆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ; ಮಂಗಳೂರು ವಿವಿ ಪದವಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರದಾಟ

ಆನ್​ಲೈನ್ ಯಕ್ಷಗಾನ; ಉಡುಪಿಯಿಂದಲೇ ಬ್ರಿಟನ್‌ ಮತ್ತು ಜರ್ಮನ್​ನಲ್ಲಿರುವವರಿಗೆ ತರಬೇತಿ

(Yakshagana Artist Fell Down while Performing Yakshagana in Stage at Mudbidri)

Published On - 7:13 pm, Tue, 10 August 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್