ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು ನಿಧನ

ಪ್ರಖ್ಯಾತ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು(67) ಗುರುವಾರ ಉಡುಪಿಯ ಹಡಿನಬಾಳು ಗ್ರಾಮದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.

ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು ನಿಧನ
ಶ್ರೀಪಾದ ಹೆಗಡೆ ಹಡಿನಬಾಳು
ಆಯೇಷಾ ಬಾನು

Updated on: Dec 04, 2020 | 6:43 AM

ಕಾರವಾರ: ಪ್ರಖ್ಯಾತ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು(67) ಗುರುವಾರ ಉಡುಪಿಯ ಹಡಿನಬಾಳು ಗ್ರಾಮದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀಪಾದ ಹೆಗಡೆ ಅವರು ಚೇತರಿಸಿಕೊಂಡಿದ್ದರು. ಆದರೆ ಪುನಃ ಅನಾರೋಗ್ಯ ಕಾಣಿಸಿಕೊಂಡ ಕಾರಣ ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಪಾದ ಅವರು ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ.

ಇವರು ರಾಜ್ಯದ ಎಲ್ಲಾ ಪ್ರಖ್ಯಾತ ಮೇಳಗಳಲ್ಲೂ ಅತಿಥಿ ಕಲಾವಿದರಾಗಿ ಪಾತ್ರ ಮಾಡುತ್ತಿದ್ದರು. ಇಡುಗುಂಜಿ ಮಹಾಗಣಪತಿ ಮೇಳದಲ್ಲಿ ಮೂಲಕಲಾವಿದರಾಗಿದ್ದರು. ಇಡಗುಂಜಿ ಮಹಾಗಣಪತಿ ಮೇಳದ 2 ತಲೆಮಾರಿನ ಕೊಂಡಿಯಗಿ ಕಾರ್ಯನಿರ್ವಹಿಸಿದ್ದರು.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us