AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಳ್ಳಾಪುರ ಅಪಘಾತ: ಎರಡು ತಿಂಗಳ ಹಿಂದೆ ಮದುವೆಯಾದ ಯುವಕನೂ ಸಾವು, ಕುಟುಂಬಸ್ಥರ ಆಕ್ರಂದನ

ಉತ್ತರ ಕನ್ನಡದ ಯಲ್ಲಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ಮದುವೆಯಾದ ಯುವಕನೊಬ್ಬನೂ ಮೃತಪಟ್ಟಿರುವುದು ತಿಳಿದುಬಂದಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಈ ಮಧ್ಯೆ, ಕಿಮ್ಸ್ ಆಸ್ಪತ್ರೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದೆ ಎಂಬ ಆರೋಪ ಕೇಳಿಬಂದಿದ್ದು, ಆಡಳಿತವು ಆರೋಪವನ್ನು ತಳ್ಳಿಹಾಕಿದೆ.

ಗುಳ್ಳಾಪುರ ಅಪಘಾತ: ಎರಡು ತಿಂಗಳ ಹಿಂದೆ ಮದುವೆಯಾದ ಯುವಕನೂ ಸಾವು, ಕುಟುಂಬಸ್ಥರ ಆಕ್ರಂದನ
ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಶಿವಕುಮಾರ್ ಪತ್ತಾರ್
| Updated By: Ganapathi Sharma|

Updated on: Jan 22, 2025 | 11:22 AM

Share

ಹುಬ್ಬಳ್ಳಿ, ಹಾವೇರಿ, ಜನವರಿ 22: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆ ಸವಣೂರಿನ ಅಸ್ಲಂ ಬಾಬುಲಿ ಬೆಣ್ಣಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರ ಸಂಬಂಧಿ ದಾದಾಪೀರ ‘ಟಿವಿ9’ ಮುಂದೆ ನೋವು ತೋಡಿಕೊಂಡು ಕಣ್ಣೀರು ಹಾಕಿದ್ದಾರೆ.

ಘಟನೆ ಬಗ್ಗೆ ಸವಣೂರ ನಿವಾಸಿ ಇಮ್ರಾನ್ ‘ಟಿವಿ9’ ಜತೆ ಮಾತನಾಡಿ, ‘ನಮಗೆ ಇನ್ನು ಮುಂದೆ ಸಂತೆಗೆ ಹೋಗಬಾರದು ಅನಿಸುತ್ತಿದೆ. ನಮ್ಮ ಮನೆಲಿ ಸಂತೆ ಅಂದ್ರೆ ತಗೊಂಡು ಹೊಡೆಯುತ್ತಾರೆ’ ಎಂದಿದ್ದಾರೆ. ನಾವು ಕೂಡ ಪ್ರತಿ ವಾರ ಸಂತೆಗೆ ಹೋಗುತ್ತಿದ್ದೆವು. ಆದರೆ, ಇವತ್ತು ತರಕಾರಿ ಇರದ ಕಾರಣಕ್ಕೆ ಹೋಗಿಲ್ಲ. ಇಂಥ ದುರ್ಘಟನೆ ಸಂಭವಿಸಬಾರದಿತ್ತು ಎಂದಿದ್ದಾರೆ.

ಏತನ್ಮಧ್ಯೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಹಿಂದೇಟು ಹಾಕಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಕಿಮ್ಸ್ ನಿರ್ದೇಶಕ ಎಸ್ ಎಫ್ ಕಮ್ಮಾರ್ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಬೆಳಗಿನ ಜಾವ 6:30ಕ್ಕೆ ಯಲ್ಲಾಪುರ ಹತ್ತಿರ ಅವಘಡ ಸಂಭವಿಸಿದೆ. 26 ಕೂಲಿ ಕಾರ್ಮಿಕರು ಅಪಘಾತಕ್ಕಿಡಾಗಿದ್ದಾರೆ. ನಮ್ಮಲ್ಲಿ 11 ಜನ ಬಂದಿದ್ದರು, ಅದರಲ್ಲಿ ಒಬ್ಬ ಸ್ಥಳದಲ್ಲೇ ತೀರಿಹೋಗಿದ್ದರು. ಗಾಯಾಳುಗಳಿಗೆ ಬೇಕಾದ ಚಿಕಿತ್ಸೆ ಈಗಾಗಲೇ ನೀಡಲಾಗಿದೆ. ಡಾ.ರಾಜಶೇಖರ್ ನೇತೃತ್ವದ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಗಾಯಾಳುಗಳನ್ನ ಈಗ ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರದಿಂದ ಸೂಕ್ತ ಪರಿಹಾರ: ಸಿಎಂ ಭರವಸೆ

ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರು ಅಪಘಾತಗಳಲ್ಲಿ 14 ಜನ ಮೃತಪಟ್ಟಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ಟ್ವೀಟ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಮೃತರ ಕುಟುಂಬದವರಿಗೆ ಸರ್ಕಾರದಿಂದ ಪರಿಹಾರದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯಲ್ಲಾಪುರ: ಗುಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 10 ಜನ ಸಾವು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?