AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಹಾಸನದಲ್ಲಿ ಫಾರ್ಮ್‌ಹೌಸ್‌ಗೆ ರಸ್ತೆ ನಿರ್ಮಾಣ ವಿವಾದ, ನಟ ಯಶ್ ಹೇಳೀದ್ದೇನು?

Yash Land Dispute: ಯಾರೂ ಭಯ ಪಡುವ ಅಗತ್ಯವಿಲ್ಲ. ನನಗೂ ಇಲ್ಲಿ ಮಾಹಿತಿಯ ಕೊರತೆ ಇದೆ. ಯಶ್ ಇಂದ ಯಾವುದೇ ಮೋಸ ಆಗಲ್ಲ. ನನ್ನ ಮೇಲೆ ನಂಬಿಕೆ ಇರ್ಲಿ, ನನಗೆ ದುರಾಸೆ ಇಲ್ಲ ಎಂದು ಯಶ್ ಭರವಸೆ ನೀಡಿದ್ದಾರೆ.

Yash: ಹಾಸನದಲ್ಲಿ ಫಾರ್ಮ್‌ಹೌಸ್‌ಗೆ ರಸ್ತೆ ನಿರ್ಮಾಣ ವಿವಾದ, ನಟ ಯಶ್ ಹೇಳೀದ್ದೇನು?
ನಟ ಯಶ್
ಆಯೇಷಾ ಬಾನು
| Edited By: |

Updated on:Mar 10, 2021 | 11:43 AM

Share

ಹಾಸನ: ಫಾರ್ಮ್‌ಹೌಸ್‌ಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಯಶ್ ಫ್ಯಾಮಿಲಿ ಮತ್ತು ಗ್ರಾಮಸ್ಥರ ನಡುವೆ ವಿವಾದ ನಡೆದಿತ್ತು. ಹಾಸನ ತಾಲೂಕಿನ ದುದ್ದ ಹೋಬಳಿಯ ತಿಮ್ಮಾಪುರ ಗ್ರಾಮದಲ್ಲಿ ಮಂಗಳವಾರ ಯಶ್ ತಂದೆ ಅರುಣ್ ಕುಮಾರ್, ತಾಯಿ ಪುಷ್ಪ ಅವರ ಜೊತೆ ತಿಮ್ಮಾಪುರ ಗ್ರಾಮಸ್ಥರು ಗಲಾಟೆ ಮಾಡಿದ್ದರು. ಈ ಸಂಬಂಧ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಯಾರೂ ಭಯ ಪಡುವ ಅಗತ್ಯವಿಲ್ಲ. ನನಗೂ ಇಲ್ಲಿ ಮಾಹಿತಿಯ ಕೊರತೆ ಇದೆ. ಯಶ್ ಇಂದ ಯಾವುದೇ ಮೋಸ ಆಗಲ್ಲ. ನನ್ನ ಮೇಲೆ ನಂಬಿಕೆ ಇರ್ಲಿ, ನನಗೆ ದುರಾಸೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ಇನ್ನು ಮಾತು ಮುಂದುವರೆಸಿದ ಅವರು.. ತಾಯಿ ಊರಿನಲ್ಲಿ ಜಾಗ ಮಾಡಬೇಕೆಂಬ ಆಸೆಯಿತ್ತು. ಹೀಗಾಗಿ ನಾವು ಅಲ್ಲಿ ಜಾಗವನ್ನು ಖರೀದಿಸಿದ್ದೇವೆ. ಆ ಜಾಗದ ನಕ್ಷೆ ಎಲ್ಲ ತೆಗೆಸಿ ಪರಿಶೀಲಿಸಿದ್ದೇವೆ. ನನ್ನ ಜಾಗದಲ್ಲಿ ನಾನು ಕಾಂಪೌಂಡ್ ಹಾಕಿದ್ರೆ ಮಧ್ಯದಲ್ಲಿ ರಸ್ತೆ ಬಿಟ್ಟರೆ ಯಾರು ಬರುತ್ತಾರೆ, ಹೋಗ್ತಾರೆ ಗೊತ್ತಾಗಲ್ಲ. ನನ್ನ ಮಾತಿಗೆ ನಾನು ಈಗಲೂ ಬದ್ಧ. ಕಾನೂನು ಪ್ರಕಾರ ಎಷ್ಟಿದೆಯೋ ಅದನ್ನ ಮಾಡಲು ಸಾಧ್ಯ. ನಾನು ಸಣ್ಣದು ಮಾಡಿದ್ರೂ ದೊಡ್ಡದಾಗುತ್ತದೆ.

ನನಗೆ ನಿನ್ನೆ ಕೋಪ ಬಂದಿತ್ತು ಅದಕ್ಕೆ ಹಾಗೆ ಮಾತಾಡಿದೆ. ಅಲ್ಲಿ ವ್ಯವಸಾಯ ಮಾಡಬೇಕೆಂಬುದು ನನ್ನ ಉದ್ದೇಶ. ಅದಕ್ಕೂ ಮೊದಲು ಬಂದೋಬಸ್ತ್ ಮಾಡಿಕೊಳ್ಳಲು ಕಾಂಪೌಂಡ್ ಮಾಡಲಾಗುತ್ತಿದೆ. ಈ ಹಿಂದೆ ಕಾಂಪೌಂಡ್‌ ಒಳಗೆ ಗಂಧದ ಮರಗಳಿವೆ, ಕಳ್ಳತನವಾಗಿತ್ತು. ಕಾಡು ಪ್ರಾಣಿಗಳ ಭೇಟೆಗೆ ಕೆಲವರು ಬರುತ್ತಾರೆ. ಹೀಗಾಗಿ ಜಮೀನಿಗೆ ಕಾಂಪೌಂಡ್ ನಿರ್ಮಿಸುತ್ತಿದ್ದೇವೆ. ಹುಡುಗರನ್ನು ನಾನು ಕಂಟ್ರೋಲ್‌ನಲ್ಲಿ ಇಟ್ಟುಕೊಳ್ಳಲಾಗುತ್ತಾ. ಇನ್ನೊಬ್ಬರ ಜಾಗದಲ್ಲಿ ರಸ್ತೆ ಮಾಡಿಕೊಳ್ಳುವ ಆಸೆ ನನಗಿಲ್ಲ. ಅಲ್ಲಿಯ ಜನರು ಭಯ ಪಡುವ ಅಗತ್ಯವಿಲ್ಲ. ಅವರು ನನಗೆ ಮೊದಲು ರಸ್ತೆ ಬಿಟ್ಟುಕೊಟ್ಟಿರುವುದು ನಿಜ. ನಾನೊಬ್ಬ ನಟನಾಗಿರುವುದರಿಂದ ಸಣ್ಣದೂ ದೊಡ್ಡದಾಗುತ್ತೆ. ನನ್ನ ತಂದೆ ತಾಯಿಯೂ ಹಳ್ಳಿಯವರೇ ಎಂದು ಯಶ್ ತಿಳಿಸಿದ್ದಾರೆ.

ಇದನ್ನೂ ಓದಿ: ನಟ ಯಶ್ ಫಾರ್ಮ್‌ಹೌಸ್‌ಗೆ ರಸ್ತೆ ನಿರ್ಮಿಸುವ ವಿಚಾರ, ಗ್ರಾಮಸ್ಥರು ಹೇಳೋದೇನು? ಅಸಲಿ ಸತ್ಯ ಇಲ್ಲಿದೆ

Published On - 11:43 am, Wed, 10 March 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!