AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಹಾಸನದಲ್ಲಿ ಫಾರ್ಮ್‌ಹೌಸ್‌ಗೆ ರಸ್ತೆ ನಿರ್ಮಾಣ ವಿವಾದ, ನಟ ಯಶ್ ಹೇಳೀದ್ದೇನು?

Yash Land Dispute: ಯಾರೂ ಭಯ ಪಡುವ ಅಗತ್ಯವಿಲ್ಲ. ನನಗೂ ಇಲ್ಲಿ ಮಾಹಿತಿಯ ಕೊರತೆ ಇದೆ. ಯಶ್ ಇಂದ ಯಾವುದೇ ಮೋಸ ಆಗಲ್ಲ. ನನ್ನ ಮೇಲೆ ನಂಬಿಕೆ ಇರ್ಲಿ, ನನಗೆ ದುರಾಸೆ ಇಲ್ಲ ಎಂದು ಯಶ್ ಭರವಸೆ ನೀಡಿದ್ದಾರೆ.

Yash: ಹಾಸನದಲ್ಲಿ ಫಾರ್ಮ್‌ಹೌಸ್‌ಗೆ ರಸ್ತೆ ನಿರ್ಮಾಣ ವಿವಾದ, ನಟ ಯಶ್ ಹೇಳೀದ್ದೇನು?
ನಟ ಯಶ್
Follow us
ಆಯೇಷಾ ಬಾನು
| Updated By: Digi Tech Desk

Updated on:Mar 10, 2021 | 11:43 AM

ಹಾಸನ: ಫಾರ್ಮ್‌ಹೌಸ್‌ಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಯಶ್ ಫ್ಯಾಮಿಲಿ ಮತ್ತು ಗ್ರಾಮಸ್ಥರ ನಡುವೆ ವಿವಾದ ನಡೆದಿತ್ತು. ಹಾಸನ ತಾಲೂಕಿನ ದುದ್ದ ಹೋಬಳಿಯ ತಿಮ್ಮಾಪುರ ಗ್ರಾಮದಲ್ಲಿ ಮಂಗಳವಾರ ಯಶ್ ತಂದೆ ಅರುಣ್ ಕುಮಾರ್, ತಾಯಿ ಪುಷ್ಪ ಅವರ ಜೊತೆ ತಿಮ್ಮಾಪುರ ಗ್ರಾಮಸ್ಥರು ಗಲಾಟೆ ಮಾಡಿದ್ದರು. ಈ ಸಂಬಂಧ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಯಾರೂ ಭಯ ಪಡುವ ಅಗತ್ಯವಿಲ್ಲ. ನನಗೂ ಇಲ್ಲಿ ಮಾಹಿತಿಯ ಕೊರತೆ ಇದೆ. ಯಶ್ ಇಂದ ಯಾವುದೇ ಮೋಸ ಆಗಲ್ಲ. ನನ್ನ ಮೇಲೆ ನಂಬಿಕೆ ಇರ್ಲಿ, ನನಗೆ ದುರಾಸೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ಇನ್ನು ಮಾತು ಮುಂದುವರೆಸಿದ ಅವರು.. ತಾಯಿ ಊರಿನಲ್ಲಿ ಜಾಗ ಮಾಡಬೇಕೆಂಬ ಆಸೆಯಿತ್ತು. ಹೀಗಾಗಿ ನಾವು ಅಲ್ಲಿ ಜಾಗವನ್ನು ಖರೀದಿಸಿದ್ದೇವೆ. ಆ ಜಾಗದ ನಕ್ಷೆ ಎಲ್ಲ ತೆಗೆಸಿ ಪರಿಶೀಲಿಸಿದ್ದೇವೆ. ನನ್ನ ಜಾಗದಲ್ಲಿ ನಾನು ಕಾಂಪೌಂಡ್ ಹಾಕಿದ್ರೆ ಮಧ್ಯದಲ್ಲಿ ರಸ್ತೆ ಬಿಟ್ಟರೆ ಯಾರು ಬರುತ್ತಾರೆ, ಹೋಗ್ತಾರೆ ಗೊತ್ತಾಗಲ್ಲ. ನನ್ನ ಮಾತಿಗೆ ನಾನು ಈಗಲೂ ಬದ್ಧ. ಕಾನೂನು ಪ್ರಕಾರ ಎಷ್ಟಿದೆಯೋ ಅದನ್ನ ಮಾಡಲು ಸಾಧ್ಯ. ನಾನು ಸಣ್ಣದು ಮಾಡಿದ್ರೂ ದೊಡ್ಡದಾಗುತ್ತದೆ.

ನನಗೆ ನಿನ್ನೆ ಕೋಪ ಬಂದಿತ್ತು ಅದಕ್ಕೆ ಹಾಗೆ ಮಾತಾಡಿದೆ. ಅಲ್ಲಿ ವ್ಯವಸಾಯ ಮಾಡಬೇಕೆಂಬುದು ನನ್ನ ಉದ್ದೇಶ. ಅದಕ್ಕೂ ಮೊದಲು ಬಂದೋಬಸ್ತ್ ಮಾಡಿಕೊಳ್ಳಲು ಕಾಂಪೌಂಡ್ ಮಾಡಲಾಗುತ್ತಿದೆ. ಈ ಹಿಂದೆ ಕಾಂಪೌಂಡ್‌ ಒಳಗೆ ಗಂಧದ ಮರಗಳಿವೆ, ಕಳ್ಳತನವಾಗಿತ್ತು. ಕಾಡು ಪ್ರಾಣಿಗಳ ಭೇಟೆಗೆ ಕೆಲವರು ಬರುತ್ತಾರೆ. ಹೀಗಾಗಿ ಜಮೀನಿಗೆ ಕಾಂಪೌಂಡ್ ನಿರ್ಮಿಸುತ್ತಿದ್ದೇವೆ. ಹುಡುಗರನ್ನು ನಾನು ಕಂಟ್ರೋಲ್‌ನಲ್ಲಿ ಇಟ್ಟುಕೊಳ್ಳಲಾಗುತ್ತಾ. ಇನ್ನೊಬ್ಬರ ಜಾಗದಲ್ಲಿ ರಸ್ತೆ ಮಾಡಿಕೊಳ್ಳುವ ಆಸೆ ನನಗಿಲ್ಲ. ಅಲ್ಲಿಯ ಜನರು ಭಯ ಪಡುವ ಅಗತ್ಯವಿಲ್ಲ. ಅವರು ನನಗೆ ಮೊದಲು ರಸ್ತೆ ಬಿಟ್ಟುಕೊಟ್ಟಿರುವುದು ನಿಜ. ನಾನೊಬ್ಬ ನಟನಾಗಿರುವುದರಿಂದ ಸಣ್ಣದೂ ದೊಡ್ಡದಾಗುತ್ತೆ. ನನ್ನ ತಂದೆ ತಾಯಿಯೂ ಹಳ್ಳಿಯವರೇ ಎಂದು ಯಶ್ ತಿಳಿಸಿದ್ದಾರೆ.

ಇದನ್ನೂ ಓದಿ: ನಟ ಯಶ್ ಫಾರ್ಮ್‌ಹೌಸ್‌ಗೆ ರಸ್ತೆ ನಿರ್ಮಿಸುವ ವಿಚಾರ, ಗ್ರಾಮಸ್ಥರು ಹೇಳೋದೇನು? ಅಸಲಿ ಸತ್ಯ ಇಲ್ಲಿದೆ

Published On - 11:43 am, Wed, 10 March 21

ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು