AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್​​ ಹೊಸ ಬಾಂಬ್​​

ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್​​ ಹೊಸ ಬಾಂಬ್​​

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Mar 19, 2026 | 4:49 PM

Share

ದಾವಣಗೆರೆ ಉಪಚುನಾವಣೆ ಕುರಿತು ಯತ್ನಾಳ್‌ ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಯಡಿಯೂರಪ್ಪ ಕುಟುಂಬ ಮತ್ತು ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಶಾಮನೂರು ಮಲ್ಲಿಕಾರ್ಜುನ್ ಪುತ್ರನಿಗೆ ಬಿಜೆಪಿ ಟಿಕೆಟ್ ಸಿಕ್ಕರೂ ಅಚ್ಚರಿಯಿಲ್ಲ ಎಂದು ಯತ್ನಾಳ್‌ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ, ಮಾರ್ಚ್​​ 19: ಬಾಗಲಕೋಟೆ ಸೇರಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ನಡುವೆ ವಿಜಯಪುರದಲ್ಲಿ ಮಾತನಾಡಿದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿಕೊಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯಡಿಯೂರಪ್ಪ ಕುಟುಂಬ ಹಾಗೂ ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಹಿಂದೆ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಮತ ಹಾಕುವಂತೆ ಶಾಮನೂರು ಶಿವಶಂಕರಪ್ಪ ಹೇಳಿದ್ದರೆ, ದಾವಣಗೆರೆಯಲ್ಲಿ ಯಡಿಯೂರಪ್ಪ ಶಾಮನೂರಿಗೆ ಮತ ಹಾಕಿ ಎಂದು ಹೇಳಿದ್ದರು . ಒಂದೊಮ್ಮೆ ದಾವಣಗೆರೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ,  ಹಾಲಿ ಬಿಜೆಪಿ ಅಭ್ಯರ್ಥಿಯಿಂದ ಟಿಕೆಟ್​​ ಹಿಂಪಡೆದು ಶಾಮನೂರು ಮಲ್ಲಿಕಾರ್ಜುನ್ ಅವರ ಪುತ್ರನಿಗೆ ನೀಡಿದರೂ ಆಶ್ಚರ್ಯವಿಲ್ಲ ಎಂದು ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 19, 2026 04:46 PM
Follow Us