AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದ್ರೆ ಪ್ರತ್ಯೇಕ ರಾಜ್ಯ: ಸ್ವಾಮೀಜಿ ಪರ ನಿಂತ ಯತ್ನಾಳ್

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಾರು ಕಲ್ಯಾಣ ಕರ್ನಾಟಕದ 371ಜೆ ವಿಶೇಷ ಸ್ಥಾನಮಾನಕ್ಕೆ ವಿರೋಧ ಮಾಡಬಾರದು ಎಂದಿದ್ದಾರೆ. ಆ ಮೂಲಕ ತಡೋಳ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಜಿ ಪರ ಬ್ಯಾಟಿಂಗ್ ಮಾಡಿದ್ದಾರೆ. ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕು ಎಂದು ಹೇಳಿದ್ದಾರೆ.

371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದ್ರೆ ಪ್ರತ್ಯೇಕ ರಾಜ್ಯ: ಸ್ವಾಮೀಜಿ ಪರ ನಿಂತ ಯತ್ನಾಳ್
371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದರೆ ಪ್ರತ್ಯೇಕ ರಾಜ್ಯ: ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಪರ ಯತ್ನಾಳ್ ಬ್ಯಾಟಿಂಗ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Jul 01, 2024 | 3:02 PM

Share

ವಿಜಯಪುರ, ಜುಲೈ 01: ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಜನ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. 371ಜೆ ವಿಶೇಷ ಸ್ಥಾನಮಾನ ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ. ಅಲ್ಲಿರುವ ಜನರಿಗೆ 371ಜೆ ಅನುಕೂಲತೆಗಳು ಸಿಗಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal)​ ಹೇಳಿದ್ದಾರೆ. 371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದರೆ ಪ್ರತ್ಯೇಕ ರಾಜ್ಯ ಕೇಳುತ್ತೇವೆ ಎಂಬ ತಡೋಳ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಜಿ ಪರ  ಯತ್ನಾಳ್ ಬ್ಯಾಟಿಂಗ್ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ 371ಜೆಗೆ ಯಾರೂ ವಿರೋಧ ಮಾಡಬಾರದು. ನಿಜಾಮರು ತಮ್ಮ ಕಾಲದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹಿಂದೂ ದೇವಾಲಯಗಳನ್ನ ನಾಶ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಕಲಕೇರಿ, ಆಲಮೇಲವರೆಗೂ ನಿಜಾಂ ಬಂದಿದ್ದ. ಹೀಗಾಗಿ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೂನ್ 1 ರಂದು ಕಲ್ಯಾಣ ಕರ್ನಾಟಕ ವಿಶೇಷ ಸ್ಥಾನಮಾನ ರದ್ದತಿಗೆ ಆಗ್ರಹಿಸಿ ಹೋರಾಟ; ಕೆರಳಿದ ಜನ

ಕೊಪ್ಪಳದವರೆಗೆ ಮಾತ್ರ ಹೈದರಾಬಾದ್​ನ​ ನಿಜಾಂ ಹೋಗಿದ್ದ. ಬಳ್ಳಾರಿಯ ಕೆಲವೆಡೆ ಬಂದಿದ್ದಾನೆಂದು ಕಲ್ಯಾಣ ಕರ್ನಾಟಕಕ್ಕೆ ಸೇರಿಸಿದ್ದಾರೆ. ಅದೇ ರೀತಿ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕು ಎಂದಿದ್ದಾರೆ.

ಸಿಎಂ, ಡಿಸಿಎಂ ಯಾರನ್ನ ಮಾಡಬೇಕು ಅಂತ ವರಿಷ್ಠರು ನಿರ್ಧಾರ ಮಾಡ್ತಾರೆ

ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಚಂದ್ರಶೇಖರ ಶ್ರೀಗಳ ಹೇಳಿಕೆಗೆ​ ಪ್ರತಿಕ್ರಿಯಿಸಿದ್ದು, ಯಾವುದೇ ಪಕ್ಷದಲ್ಲಿ ಯಾರನ್ನ ಸಿಎಂ ಮಾಡಬೇಕು, ಯಾರನ್ನ ರಾಜ್ಯಾಧ್ಯಕ್ಷ ಮಾಡಬೇಕೆಂದು ವರಿಷ್ಠರು ಶಾಸಕರು, ಮುಖಂಡರು ನಿರ್ಧಾರ ಮಾಡುತ್ತಾರೆ. ಸ್ವಾಮೀಜಿಗಳ ಕೆಲಸ ಏನು?, ಧರ್ಮದ ಕೆಲಸ. ಶ್ರೀಗಳು ಧರ್ಮದಿಂದ ನಡೆಯಿರಿ ಅಂತಾ ಹೇಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನದ 371 ಜೆ ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ

ವಿರೋಧ ಪಕ್ಷದ ನಾಯಕನ ಬದಲಾವಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಷ ಏನು ನಿರ್ಧಾರ ಮಾಡುತ್ತೋ ಅದಕ್ಕೆ ನಾನು ಬದ್ಧ. ಸಮರ್ಥವಾಗಿ ಸರ್ಕಾರವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಬೇಕಿದೆ. ಅಮಿತ್ ಶಾಗೆ ಪತ್ರ ಬರೆದಿದ್ದೇನೆ, ಆ ರೀತಿ ಹೋರಾಟ ಮಾಡಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ನಲ್ಲಿ ಪಿಐಎಲ್ ಹಾಕುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಲೋಕಸಭಾ ಚುನಾವಣೆಗೆ ಮುನ್ನ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಮಾಜಿ ಸಂಸದ ಡಿಕೆ ಸುರೇಶ್​ ಹೇಳಿದ್ದರು. ಇದು ಸಕಾಷ್ಟು ಚರ್ಚೆಗೆ ಕೂಡ ಗ್ರಾಸವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:59 pm, Mon, 1 July 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್