371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದ್ರೆ ಪ್ರತ್ಯೇಕ ರಾಜ್ಯ: ಸ್ವಾಮೀಜಿ ಪರ ನಿಂತ ಯತ್ನಾಳ್

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಾರು ಕಲ್ಯಾಣ ಕರ್ನಾಟಕದ 371ಜೆ ವಿಶೇಷ ಸ್ಥಾನಮಾನಕ್ಕೆ ವಿರೋಧ ಮಾಡಬಾರದು ಎಂದಿದ್ದಾರೆ. ಆ ಮೂಲಕ ತಡೋಳ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಜಿ ಪರ ಬ್ಯಾಟಿಂಗ್ ಮಾಡಿದ್ದಾರೆ. ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕು ಎಂದು ಹೇಳಿದ್ದಾರೆ.

371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದ್ರೆ ಪ್ರತ್ಯೇಕ ರಾಜ್ಯ: ಸ್ವಾಮೀಜಿ ಪರ ನಿಂತ ಯತ್ನಾಳ್
371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದರೆ ಪ್ರತ್ಯೇಕ ರಾಜ್ಯ: ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಪರ ಯತ್ನಾಳ್ ಬ್ಯಾಟಿಂಗ್
Edited By:

Updated on: Jul 01, 2024 | 3:02 PM

ವಿಜಯಪುರ, ಜುಲೈ 01: ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಜನ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. 371ಜೆ ವಿಶೇಷ ಸ್ಥಾನಮಾನ ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ. ಅಲ್ಲಿರುವ ಜನರಿಗೆ 371ಜೆ ಅನುಕೂಲತೆಗಳು ಸಿಗಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal)​ ಹೇಳಿದ್ದಾರೆ. 371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದರೆ ಪ್ರತ್ಯೇಕ ರಾಜ್ಯ ಕೇಳುತ್ತೇವೆ ಎಂಬ ತಡೋಳ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಜಿ ಪರ  ಯತ್ನಾಳ್ ಬ್ಯಾಟಿಂಗ್ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ 371ಜೆಗೆ ಯಾರೂ ವಿರೋಧ ಮಾಡಬಾರದು. ನಿಜಾಮರು ತಮ್ಮ ಕಾಲದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹಿಂದೂ ದೇವಾಲಯಗಳನ್ನ ನಾಶ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಕಲಕೇರಿ, ಆಲಮೇಲವರೆಗೂ ನಿಜಾಂ ಬಂದಿದ್ದ. ಹೀಗಾಗಿ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೂನ್ 1 ರಂದು ಕಲ್ಯಾಣ ಕರ್ನಾಟಕ ವಿಶೇಷ ಸ್ಥಾನಮಾನ ರದ್ದತಿಗೆ ಆಗ್ರಹಿಸಿ ಹೋರಾಟ; ಕೆರಳಿದ ಜನ

ಕೊಪ್ಪಳದವರೆಗೆ ಮಾತ್ರ ಹೈದರಾಬಾದ್​ನ​ ನಿಜಾಂ ಹೋಗಿದ್ದ. ಬಳ್ಳಾರಿಯ ಕೆಲವೆಡೆ ಬಂದಿದ್ದಾನೆಂದು ಕಲ್ಯಾಣ ಕರ್ನಾಟಕಕ್ಕೆ ಸೇರಿಸಿದ್ದಾರೆ. ಅದೇ ರೀತಿ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕು ಎಂದಿದ್ದಾರೆ.

ಸಿಎಂ, ಡಿಸಿಎಂ ಯಾರನ್ನ ಮಾಡಬೇಕು ಅಂತ ವರಿಷ್ಠರು ನಿರ್ಧಾರ ಮಾಡ್ತಾರೆ

ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಚಂದ್ರಶೇಖರ ಶ್ರೀಗಳ ಹೇಳಿಕೆಗೆ​ ಪ್ರತಿಕ್ರಿಯಿಸಿದ್ದು, ಯಾವುದೇ ಪಕ್ಷದಲ್ಲಿ ಯಾರನ್ನ ಸಿಎಂ ಮಾಡಬೇಕು, ಯಾರನ್ನ ರಾಜ್ಯಾಧ್ಯಕ್ಷ ಮಾಡಬೇಕೆಂದು ವರಿಷ್ಠರು ಶಾಸಕರು, ಮುಖಂಡರು ನಿರ್ಧಾರ ಮಾಡುತ್ತಾರೆ. ಸ್ವಾಮೀಜಿಗಳ ಕೆಲಸ ಏನು?, ಧರ್ಮದ ಕೆಲಸ. ಶ್ರೀಗಳು ಧರ್ಮದಿಂದ ನಡೆಯಿರಿ ಅಂತಾ ಹೇಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನದ 371 ಜೆ ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ

ವಿರೋಧ ಪಕ್ಷದ ನಾಯಕನ ಬದಲಾವಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಷ ಏನು ನಿರ್ಧಾರ ಮಾಡುತ್ತೋ ಅದಕ್ಕೆ ನಾನು ಬದ್ಧ. ಸಮರ್ಥವಾಗಿ ಸರ್ಕಾರವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಬೇಕಿದೆ. ಅಮಿತ್ ಶಾಗೆ ಪತ್ರ ಬರೆದಿದ್ದೇನೆ, ಆ ರೀತಿ ಹೋರಾಟ ಮಾಡಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ನಲ್ಲಿ ಪಿಐಎಲ್ ಹಾಕುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಲೋಕಸಭಾ ಚುನಾವಣೆಗೆ ಮುನ್ನ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಮಾಜಿ ಸಂಸದ ಡಿಕೆ ಸುರೇಶ್​ ಹೇಳಿದ್ದರು. ಇದು ಸಕಾಷ್ಟು ಚರ್ಚೆಗೆ ಕೂಡ ಗ್ರಾಸವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:59 pm, Mon, 1 July 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us