ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ ವಿಷಯವೇ ಅಲ್ಲ, ಚರ್ಚೆ ಕೂಡ ಆಗಿಲ್ಲ: ಬಿವೈ ವಿಜಯೇಂದ್ರ

Updated on: Dec 19, 2024 | 7:35 PM

ವಿಧಾನಸಭಾ ಅಧಿವೇಶನದ ನಂತರ ವಕ್ಫ್ ವಿರುದ್ಧ ಎರಡನೇ ಹಂತದ ಹೋರಾಟ ಮುಂದುವರಿಸುವುದಾಗಿ ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆಗೆ ವಿಜಯೇಂದ್ರ, ಅವರು ಹೇಳಿದ್ದು ಗೊತ್ತಿಲ್ಲ, ಅವರು ಪ್ರತಿಭಟನೆ ಮಾಡೋದಾದರೆ ಮಾಡಲಿ, ಪಕ್ಷದ ಬಲವರ್ಧನೆ ತಮ್ಮ ಮುಂದಿರುವ ಆದ್ಯತೆಯಾಗಿದೆ, ವಕ್ಫ್ ವಿರುದ್ಧ ಹೋರಾಟವೂ ಮುಂದುವರಿಯುತ್ತದೆ, ಸದಾ ರೈತರ ಪರವಾಗಿ ನಿಲ್ಲುತ್ತೇವೆ ಎಂದರು.

ಬೆಂಗಳೂರು: ನಗರದಲ್ಲಿಂದು ತಮ್ಮ ತಂದೆ ಬಿಎಸ್ ಯಡಿಯೂರಪ್ಪನವರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಯಡಿಯೂರಪ್ಪನವರ ಹುಟ್ಟಯಹಬ್ಬವನ್ನು ಅದ್ದೂರಿಯಾಗಿ ಆಚರಿಸಬೇಕೆಂಬ ಪ್ರಸ್ತಾವನೆಯೇ ಇಲ್ಲ, ಅಧ್ಯಕ್ಷನಾಗಿ ತಾನು ಕೇವಲ ಪಕ್ಷದ ಸಂಘಟನೆಯ ಬಗ್ಗೆ ಮಾತ್ರ ಯೋಚಿಸುತ್ತಿರುವುದಾಗಿ ಹೇಳಿದರು. ರಾಷ್ಟ್ರೀಯ ನಾಯಕರು ಅನುಮೋದನೆ ನೀಡಿದರೆ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸಲಾಗುವುದೇ ಎಂದಿದ್ದಕ್ಕೆ ಅವರು, ಅದು ವಿಷಯವೇ ಅಲ್ಲ, ಅದರ ಬಗ್ಗೆ ಚರ್ಚೆಯೇ ಇಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದಿಢೀರ್​ ಮೋದಿ ಭೇಟಿಯಾದ ವಿಜಯೇಂದ್ರ: ವಿರೋಧಿಗಳಿಗೆ ಕೊಟ್ಟ ಸಂದೇಶವೇನು?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More