AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರದ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ರಾಜ್ಯಸಭೆ ಚುನಾವಣೆಯಲ್ಲಿ ಗೈರಾಗುವ ಮೂಲಕ ಕಾಂಗ್ರೆಸ್​ಗೆ ಲಾಭವಾಗುವಂತೆ ಮಾಡಿದ್ದ ಯಲ್ಲಾಪುರದ ಅಸಮಾಧಾನಿತ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಇದೀಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಬನವಾಸಿಯ ಕದಂಬೋತ್ಸವ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಈ ಬ್ಯಾನರ್ ಹಾಕಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರದ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್
ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರದ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್
ಸೂರಜ್​, ಮಹಾವೀರ್​ ಉತ್ತರೆ
| Updated By: Rakesh Nayak Manchi|

Updated on:Mar 05, 2024 | 6:24 PM

Share

ಕಾರವಾರ, ಮಾ.5: ರಾಜ್ಯಸಭೆ ಚುನಾವಣೆಯಲ್ಲಿ ಗೈರಾಗುವ ಮೂಲಕ ಕಾಂಗ್ರೆಸ್​ಗೆ ಲಾಭವಾಗುವಂತೆ ಮಾಡಿದ್ದ ಯಲ್ಲಾಪುರದ ಅಸಮಾಧಾನಿತ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಅವರು ಇದೀಗ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಬನವಾಸಿಯ ಕದಂಬೋತ್ಸವ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಈ ಬ್ಯಾನರ್ ಹಾಕಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್ ಅವರು ತಮ್ಮ ಬಿಜೆಪಿ ಅಭ್ಯರ್ಥಿಗೆ ಮತಹಾಕುವ ಬದಲಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಶಾಕ್ ಕೊಟ್ಟಿದ್ದರು. ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್, ಮತದಾನ ಮಾಡದೇ ಬಿಜೆಪಿಗೆ ಆಘಾತ ನೀಡಿದ್ದರು. ಈ ಇಬ್ಬರು ಶಾಸಕರು ಹಲವು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

Shivaram Hebbar

ಶಿವರಾಮ್ ಹೆಬ್ಬಾರ್​ ಯಾರ ಸಂಪರ್ಕಕ್ಕೂ ಸಿಗದೇ ಫೋನ್ ಸ್ವಿಚ್ ಆಫ್​ ಮಾಡಿಕೊಂಡು ಅಜ್ಞಾತ ಸ್ಥಳದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಅವರು ಮಾಧ್ಯಮಗಳ ಮೂಲಕ ಬಂದು ಮತದಾನ ಮಾಡುವಂತೆ ಹೆಬ್ಬಾರ್​ಗೆ ಮನವಿ ಮಾಡಿದ್ದರು. ಆದರೂ ಸಹ ಹೆಬ್ಬಾರ್​ ಮತದಾನಕ್ಕೆ ಗೈರಾಗುವ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಈ ಇಬ್ಬರು ನಾಯಕರ ವಿರುದ್ಧ ಬಿಜೆಪಿ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ: ನಾಲ್ಕು ದಶಕಗಳಿಂದ ರಾಜಕಾರಣದಲ್ಲಿರುವ ನನಗೆ ಯಾರ ಹೆದರಿಕೆಯೂ ಇಲ್ಲ: ಶಿವಾರಂ ಹೆಬ್ಬಾರ್, ಶಾಸಕ

ಈ ಬಗ್ಗೆ ಮಾತನಾಡಿದ ಶಿವರಾಮ್ ಹೆಬ್ಬಾರ್, ಬೆಳಗ್ಗೆ ಅನಾರೋಗ್ಯ ಕಾಡುತ್ತಿತ್ತು, ವೈದ್ಯರು ವಿಶ್ರಾಂತಿಯ ಸಲಹೆ ನೀಡಿದ್ದರು, ಹಾಗಾಗಿ ಮತದಾನ ಮಾಡಲು ಹೋಗಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಬೆಂಗಳೂರಲ್ಲೇ ಇದ್ದ್ದುಕೊಂಡು ಮತದಾನ ಮಾಡಲು ಹೋಗದಿರುವಂಥ ಪರಿಸ್ಥಿತಿಯೇನೂ ಇರಲಿಲ್ಲ, 4 ದಶಕಗಳಿಂದ ರಾಜಕಾರಣದಲ್ಲಿರುವ ತಾನು ಯಾರದ್ದೋ ಮರ್ಜಿಗೆ ಬಿದ್ದು ಹೆದರುವ ಜಾಯಮಾನದವನಲ್ಲ ಎಂದಿದ್ದರು. ಪಕ್ಷದ ಮೇಲಿನ ಅಸಮಾಧಾನಕ್ಕೇನಾದರೂ ಮತದಾನ ಬಹಿಷ್ಕರಿಸಿದಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಅವರು, ಅಸಮಾಧಾನ ಮತ್ತು ಮತದಾನ ಬಹಿಷ್ಕಾರದ ನಡುವೆ ಯಾವುದೇ ಸಂಬಂಧವಿಲ್ಲ ಎಂದಿದ್ದರು.

ಮಾತುಕತೆಯಂತೆ ನಡೆದುಕೊಂಡಿದ್ದ ಹೆಬ್ಬಾರ್, ಸೋಮಶೇಖರ್

ಜೆಡಿಎಸ್​ ಹಾಗೂ ಬಿಜೆಪಿ ಸೇರಿಕೊಂಡು ಐದನೇ ಅಭ್ಯರ್ಥಿ ಕಣಕ್ಕಳಿಸಿದ್ದರಿಂದ ರಾಜ್ಯಸಭಾ ಚುನಾವಣೆ ಮತಗಳ ಲೆಕ್ಕಾಚಾರ ಜೋರಾಗಿ ನಡೆದಿತ್ತು. ಅಡ್ಡ ಮತದಾನದ ಭೀತಿ ಕಾಂಗ್ರೆಸ್​ಗೆ ಕಾಡುತ್ತಿತ್ತು. ಅಂತಿಮವಾಗಿ ಆಡಳಿತರೂಢ ಕಾಂಗ್ರೆಸ್​, ಮೈತ್ರಿ ಪಕ್ಷಗಳಿಗೆ ಶಾಕ್ ಕೊಟ್ಟಿತ್ತು. ಅಂದು ಕೊಂಡಂತೆ ಕಾಂಗ್ರೆಸ್​, ಸೋಮಶೇಖರ್ ಅವರನ್ನು ಅಡ್ಡಮತದಾನ ಮಾಡಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು, ಶಿವರಾಮ್ ಹೆಬ್ಬಾರ್ ಅವರನ್ನು ಮತದಾನಕ್ಕೆ ಬರದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

ಮತದಾನಕ್ಕೂ ಹಿಂದಿನ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್​ ನಾಯಕರು, ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್​ ಜೊತೆ ಮಾತುಕತೆ ನಡೆಸಿದ್ದರು. ಒಬ್ಬರು ಅಡ್ಡಮತದಾನ ಮಾಡಬೇಕು, ಮತ್ತೊಬ್ಬರು ಮತದಾನಕ್ಕೆ ಗೈರಾಗಬೇಕೆಂದು ಟಾಸ್ಕ್​ ನೀಡಿದ್ದರು. ಮಾತುಕತೆಯಂತೆ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ನಡೆದುಕೊಂಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Tue, 5 March 24

ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ
ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ
ದುಪಟ್ಟಾವನ್ನೇ ಹರಿದು ಉತ್ತರಾಖಂಡದ ಸಿಎಂಗೆ ರಾಖಿ ಕಟ್ಟಿದ ಗುಜರಾತ್ ಮಹಿಳೆ
ದುಪಟ್ಟಾವನ್ನೇ ಹರಿದು ಉತ್ತರಾಖಂಡದ ಸಿಎಂಗೆ ರಾಖಿ ಕಟ್ಟಿದ ಗುಜರಾತ್ ಮಹಿಳೆ
ಮುಖ್ಯ ಚುನಾವಣಾಧಿಕಾರಿ ಮನವಿಗಳಿಗೆ ಸ್ಪಂದಿಸಿದ್ದಾರೆ: ಶಿವಕುಮಾರ್
ಮುಖ್ಯ ಚುನಾವಣಾಧಿಕಾರಿ ಮನವಿಗಳಿಗೆ ಸ್ಪಂದಿಸಿದ್ದಾರೆ: ಶಿವಕುಮಾರ್
ಪ್ರಜ್ವಲ್ ಪ್ರಕರಣ; ಕಾನೂನು ಹೋರಾಟ ಮುಂದುವರಿಸಲು ಕುಟುಂಬದ ನಿರ್ಣಯ: ಶಾಸಕ
ಪ್ರಜ್ವಲ್ ಪ್ರಕರಣ; ಕಾನೂನು ಹೋರಾಟ ಮುಂದುವರಿಸಲು ಕುಟುಂಬದ ನಿರ್ಣಯ: ಶಾಸಕ
ವಿಷ್ಣುವರ್ಧನ್ ಸಮಾಧಿ ನೆಲಸಮ; ಅಭಿಮಾನ್ ಸ್ಟುಡಿಯೋದಲ್ಲಿ ಪೊಲೀಸ್ ಭದ್ರತೆ
ವಿಷ್ಣುವರ್ಧನ್ ಸಮಾಧಿ ನೆಲಸಮ; ಅಭಿಮಾನ್ ಸ್ಟುಡಿಯೋದಲ್ಲಿ ಪೊಲೀಸ್ ಭದ್ರತೆ
ಮತಗಳ್ಳತನ ಆರೋಪ: ಟಿವಿ9 ರಿಯಾಲಿಟಿ ಚೆಕ್​ ನಲ್ಲಿ ಸತ್ಯ ಬಯಲು
ಮತಗಳ್ಳತನ ಆರೋಪ: ಟಿವಿ9 ರಿಯಾಲಿಟಿ ಚೆಕ್​ ನಲ್ಲಿ ಸತ್ಯ ಬಯಲು
ಠುಸ್ ಪಟಾಕಿ ಅನ್ನುವವರು ಅದನ್ನು ಕೈಯಲ್ಲಿ ಹಿಡಿದು ತೋರಿಸಲಿ: ಪ್ರಿಯಾಂಕ್
ಠುಸ್ ಪಟಾಕಿ ಅನ್ನುವವರು ಅದನ್ನು ಕೈಯಲ್ಲಿ ಹಿಡಿದು ತೋರಿಸಲಿ: ಪ್ರಿಯಾಂಕ್
ವಿಷ್ಣುವರ್ಧನ್ ಸಮಾಧಿ ನೆಲಸಮ, ಅಭಿಮಾನಿಗಳ ಆಕ್ರೋಶ: ವಿಡಿಯೋ
ವಿಷ್ಣುವರ್ಧನ್ ಸಮಾಧಿ ನೆಲಸಮ, ಅಭಿಮಾನಿಗಳ ಆಕ್ರೋಶ: ವಿಡಿಯೋ
ಮಸೀದಿ ಮುಂದೆ ಗವಿ ಸಿದ್ದಪ್ಪನ ಹೆಣ ಬಿದ್ದಿದ್ದರೂ ಆಜಾನ್, ವಿಡಿಯೋ ವೈರಲ್
ಮಸೀದಿ ಮುಂದೆ ಗವಿ ಸಿದ್ದಪ್ಪನ ಹೆಣ ಬಿದ್ದಿದ್ದರೂ ಆಜಾನ್, ವಿಡಿಯೋ ವೈರಲ್
ರಾಹುಲ್ ಮಾಡಿರುವ ಆರೋಪಗಳಿಗೆ ಚುನಾವಣಾ ಆಯೋಗ ಉತ್ತರಿಸುತ್ತದೆ: ಸೂರಜ್
ರಾಹುಲ್ ಮಾಡಿರುವ ಆರೋಪಗಳಿಗೆ ಚುನಾವಣಾ ಆಯೋಗ ಉತ್ತರಿಸುತ್ತದೆ: ಸೂರಜ್