AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಯಾಣಿಯಲ್ಲಿ ನೀರು ಕಂಡು ಸೆಲ್ಫಿ ಕ್ಲಿಕ್ಕಿಸಲು ಹೋದ ಯುವಕ ನೀರುಪಾಲು; ಬರ್ತ್​ಡೇ ಪಾರ್ಟಿ ವೇಳೆ ದುರ್ಘಟನೆ

ನಿನ್ನೆ ಬರ್ತ್ ಡೇ ಪಾರ್ಟಿ ಮಾಡಲು 8 ಜನ ಯುವಕರು ಈ ಭಾಗಕ್ಕೆ ಬಂದಿದ್ದರು. ಈ‌ ವೇಳೆ ಕಲ್ಯಾಣಿಯಲ್ಲಿ ನೀರು ಕಂಡು ಸೆಲ್ಫಿ ತೆಗೆದುಕೊಳ್ಳಲು ಇಳಿದಿದ್ದರು. ಆ ವೇಳೆ, ಹೀಗೆ ದುರ್ಘಟನೆ ಸಂಭವಿಸಿದೆ.

ಕಲ್ಯಾಣಿಯಲ್ಲಿ ನೀರು ಕಂಡು ಸೆಲ್ಫಿ ಕ್ಲಿಕ್ಕಿಸಲು ಹೋದ ಯುವಕ ನೀರುಪಾಲು; ಬರ್ತ್​ಡೇ ಪಾರ್ಟಿ ವೇಳೆ ದುರ್ಘಟನೆ
TV9 Web
| Updated By: ganapathi bhat|

Updated on:Jul 19, 2021 | 6:27 PM

Share

ದೇವನಹಳ್ಳಿ: ಹದಿಹರೆಯದ ಯುವಕನೊಬ್ಬ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದ ದಾರುಣ ಘಟನೆ ಹೊಸಕೋಟೆ ತಾಲೂಕಿನ ಗ್ರಾಮದಲ್ಲಿ ನಡೆದಿದೆ. 19 ವರ್ಷದ ಯುವಕ ನರಸಿಂಹ ಎಂಬಾತ ನೀರಿಗೆ ಬಿದ್ದಿದ್ದು, ಇನ್ನೂ ಪತ್ತೆಯಾಗಿಲ್ಲ. ಯುವಕನ ದೇಹಕ್ಕಾಗಿ ಸತತ 48 ಗಂಟೆಗಳಿಂದ ಹುಡುಕಾಟ ನಡೆಯುತ್ತಿದೆ. ಹೆಚ್ಎಎಲ್ ಮೂಲದ ನರಸಿಂಹ ಎಂಬಾತ ನೀರಿಗೆ ಬಿದ್ದ ಯುವಕನಾಗಿದ್ದು, ಹೊಸಕೋಟೆ ತಾಲೂಕಿನ ಗಂಗಾಪುರ ಕಲ್ಯಾಣಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.

ನಿನ್ನೆ ಬರ್ತ್ ಡೇ ಪಾರ್ಟಿ ಮಾಡಲು 8 ಜನ ಯುವಕರು ಈ ಭಾಗಕ್ಕೆ ಬಂದಿದ್ದರು. ಈ‌ ವೇಳೆ ಕಲ್ಯಾಣಿಯಲ್ಲಿ ನೀರು ಕಂಡು ಸೆಲ್ಫಿ ತೆಗೆದುಕೊಳ್ಳಲು ಇಳಿದಿದ್ದರು. ಆ ವೇಳೆ, ಹೀಗೆ ದುರ್ಘಟನೆ ಸಂಭವಿಸಿದೆ. ನಿನ್ನೆಯಿಂದ ಸತತವಾಗಿ ಹುಡುಕಾಟ ನಡೆಯಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವಕನ ದೇಹ ಇನ್ನೂ ಸಿಕ್ಕಿಲ್ಲ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೆಲ್ಫಿ ಕ್ಲಿಕ್ಕಿಸಲು ಹೋಗಿ ಸಾವು ಸಂಭವಿಸಿದ ಘಟನೆಗಳು ಇತ್ತೀಚಿನ ವರ್ಷಗಳಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಬಿಟ್ಟವರ ಸಂಖ್ಯೆ ದೊಡ್ಡದಿದೆ. ಜಲಪಾತಗಳ ತುದಿಯಲ್ಲಿ, ಎತ್ತರದ ಪರ್ವತದ ಅಂಚಿನಲ್ಲಿ, ನದಿ ದಂಡೆಯಲ್ಲಿ, ಕಾಡು ಪ್ರಾಣಿಗಳ ಸನಿಹದಲ್ಲಿ ಹೀಗೆ ತೀರಾ ಅಪಾಯಕಾರಿ ಜಾಗದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಬೇಕೆಂಬ ಆಸೆಯೇ ಜೀವಕ್ಕೆ ಮಾರಕವಾಗಿದೆ. ಕೆಲವರ ಸೆಲ್ಫಿ ಹುಚ್ಚು ಹೇಗೆ ಅವರ ಪ್ರಾಣಕ್ಕೆ ಕಂಟಕವಾಗುತ್ತೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳುವ ಧೈರ್ಯ ಪ್ರದರ್ಶಿಸಲು ಹೋದ ಯುವತಿಯೊಬ್ಬಳು ಸೀದಾ ಸಾವಿನ ಮನೆ ಸೇರಿದ್ದಾಳೆ.

ದುರಂತ ಅಂತ್ಯ ಕಂಡ ಹಾಂಗ್​ಕಾಂಗ್​ನ ಇನ್ಸ್​ಸ್ಟಾ ಸೆಲೆಬ್ರಿಟಿಯ ಹೆಸರು ಸೋಫಿಯಾ ಚೆವುಂಗ್. ಬರೀ 32 ವರ್ಷದ ಇನ್ಸ್​ಸ್ಟಾ ಸೆಲೆಬ್ರಿಟಿಯ ಜೀವನ ಯಾತ್ರೆ ಸೆಲ್ಫಿಯಿಂದ ಅಂತ್ಯವಾಗಿದೆ. ಹಪಾಲ್ ಲೈ ಜಲಪಾತದ ತುದಿಯಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸಿದ್ದ ಸೋಫಿಯಾ, ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾಳೆ. ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ ಈ ಸುಂದರಿಯ ದುರಂತ ಅಂತ್ಯ ಇನ್ನಾದರೂ ಸೆಲ್ಫಿ ಪ್ರಿಯರಿಗೆ ಪಾಠವಾಗಬೇಕಿದೆ.

ಸಮುದ್ರದ ತಡೆಗೋಡೆ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವತಿಯೊಬ್ಬಳು ಆಯ ತಪ್ಪಿ ಸಮುದ್ರಕ್ಕೇ ಬಿದ್ದ ಘಟನೆಯೂ ಇತ್ತೀಚೆಗೆ ನಡೆದಿದೆ. ಅದೃಷ್ಟವಶಾತ್, ಅಲ್ಲೇ ಇದ್ದ ವ್ಯಕ್ತಿಯೊಬ್ಬ ಸಮಯಪ್ರಜ್ಞೆ ಮೆರೆದು ಸಮುದ್ರಕ್ಕೆ ಜಿಗಿದು ಆಕೆಯನ್ನು ರಕ್ಷಿಸಿದ ಪರಿಣಾಮ ದೊಡ್ಡ ಕಂಟಕದಿಂದ ಪಾರಾಗಿದ್ದಾಳೆ. ಸೆಲ್ಫಿ ಕ್ರೇಜ್​ನಿಂದ ಅಪಾಯ ಎದುರಾಗುತ್ತಿರುವ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದರೂ ಜನ ಇನ್ನೂ ಎಚ್ಚೆತ್ತುಕೊಳ್ಳದಿರುವುದು ದುರಂತವೇ ಸರಿ.

ಇದನ್ನೂ ಓದಿ: Monkey B Virus: ಚೀನಾದಲ್ಲಿ ಮಂಕಿ ಬಿ ವೈರಸ್​ಗೆ ಮೊದಲ ಸಾವು; ಕೊರೊನಾ ನಡುವೆಯೇ ಮತ್ತೊಂದು ವೈರಾಣು ಪ್ರತ್ಯಕ್ಷ, ನಿಯಂತ್ರಣ ಹೇಗೆ?

ಬೆಂಗಳೂರಿನಿಂದ ಹೊರಟ ಐರಾವತ ಬಸ್ ಅರಣ್ಯಕ್ಕೆ ನುಗ್ಗಿ, ಮರಕ್ಕೆ ಡಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ

Published On - 6:22 pm, Mon, 19 July 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!