AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕು: ಮಂಗಳೂರಿನಲ್ಲಿ ಗರ್ಭಿಣಿ ವೈದ್ಯೆ ಬಲಿ; ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು

ಕೊರೊನಾ ಸೋಂಕಿಗೆ ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿಯಾಗಿದ್ದರೆ ಕೋಲಾರದ ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕು: ಮಂಗಳೂರಿನಲ್ಲಿ ಗರ್ಭಿಣಿ ವೈದ್ಯೆ ಬಲಿ; ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು
ಕೊರೊನಾ ಸೋಂಕು: ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿ
ಸಾಧು ಶ್ರೀನಾಥ್​
|

Updated on:Apr 28, 2021 | 2:51 PM

Share

ಮಂಗಳೂರು: ಕೊರೊನಾ ಸೋಂಕಿಗೆ ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿಯಾಗಿದ್ದರೆ ಕೋಲಾರದ ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ. ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಕೇರಳದ ತಲಶೇರಿ ಮೂಲದ ಡಾ.ಮಹಾ ಬಷೀರ್ ಸಾವನ್ನಪ್ಪಿದ್ದಾರೆ. 6 ತಿಂಗಳ ಗರ್ಭಿಣಿಯಾಗಿದ್ದ ಡಾ.ಮಹಾ ಬಷೀರ್ ಕೊನೆಯುಸಿರೆಳೆದಿದ್ದಾರೆ. ವೈದ್ಯೆಯ ಎಲ್ಲ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್ ಆಗಿದೆ. ಮೃತ ವೈದ್ಯೆಯ ಹೆಸರು ಡಾ‌.ಮಹಾ ಬಷೀರ್. ಆಕೆಯ ಪತಿಯ ಹೆಸರು ಡಾ.ಶವಾಫೆರ್ ಮಹಮ್ಮದ್. ಕಣಚೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಮಹಾ ಬಷೀರ್, ಪತಿ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು.

ಡಾ.ಮಹಾ ಬಷೀರ್ ಮತ್ತು ಡಾ.ಶವಾಫೆರ್ ಮಹಮ್ಮದ್ ವೈದ್ಯ ಜೋಡಿ ಕಳೆದ 8 ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಡಾ. ಮಾಬಷೀರಾ 6 ತಿಂಗಳ ಗರ್ಭಿಣಿಯಾಗಿದ್ದರು. ಡಾ. ಮಾಬಷೀರಾ, ಸೋಂಕು ತಗುಲಿದ ಬಳಿಕ ಇಂಡಿಯಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು:

ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಕೊರೊನಾ ಸೋಂಕಿನಿಂದ ದಂಪತಿ ಮೃತಪಟ್ಟಿದ್ದಾರೆ. ಜೆಮಿನಿ ಫೋಟೋ ಸ್ಟುಡಿಯೋ ಮಾಲೀಕ ರಮೇಶ್(46) ಮತ್ತು ಅನುಸೂಯ(41) ದಂಪತಿ ಮಹಾಮಾರಿ ಕೊರೊನಾಗೆ ಅಸುನೀಗಿದವರು.

couple-in-mulbagal-died-due-to-coronavirus-sas

ಜೆಮಿನಿ ಫೋಟೋ ಸ್ಟುಡಿಯೋ ಮಾಲೀಕ ರಮೇಶ್ ಮತ್ತು ಅನುಸೂಯ ದಂಪತಿ ಮಹಾಮಾರಿ ಕೊರೊನಾಗೆ ಬಲಿ

3 ದಿನಗಳ ಹಿಂದೆ ದಂಪತಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಕೋಲಾರದ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ದಂಪತಿ ಆಸ್ಪತ್ರೆಯಲ್ಲೇ ಇಂದು ಮೃತಪಟ್ಟಿದ್ದಾರೆ.

(young doctor in mangalore and couple in mulbagal died due to coronavirus)

ಇದನ್ನೂ ಓದಿ: ಅಕ್ಕಿ ಕೇಳಿದವರಿಗೆ ಸತ್ತುಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ!

Published On - 2:44 pm, Wed, 28 April 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?