ಕೊರೊನಾ ಸೋಂಕು: ಮಂಗಳೂರಿನಲ್ಲಿ ಗರ್ಭಿಣಿ ವೈದ್ಯೆ ಬಲಿ; ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು

ಕೊರೊನಾ ಸೋಂಕಿಗೆ ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿಯಾಗಿದ್ದರೆ ಕೋಲಾರದ ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕು: ಮಂಗಳೂರಿನಲ್ಲಿ ಗರ್ಭಿಣಿ ವೈದ್ಯೆ ಬಲಿ; ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು
ಕೊರೊನಾ ಸೋಂಕು: ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿ
Follow us
|

Updated on:Apr 28, 2021 | 2:51 PM

ಮಂಗಳೂರು: ಕೊರೊನಾ ಸೋಂಕಿಗೆ ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿಯಾಗಿದ್ದರೆ ಕೋಲಾರದ ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ. ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಕೇರಳದ ತಲಶೇರಿ ಮೂಲದ ಡಾ.ಮಹಾ ಬಷೀರ್ ಸಾವನ್ನಪ್ಪಿದ್ದಾರೆ. 6 ತಿಂಗಳ ಗರ್ಭಿಣಿಯಾಗಿದ್ದ ಡಾ.ಮಹಾ ಬಷೀರ್ ಕೊನೆಯುಸಿರೆಳೆದಿದ್ದಾರೆ. ವೈದ್ಯೆಯ ಎಲ್ಲ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್ ಆಗಿದೆ. ಮೃತ ವೈದ್ಯೆಯ ಹೆಸರು ಡಾ‌.ಮಹಾ ಬಷೀರ್. ಆಕೆಯ ಪತಿಯ ಹೆಸರು ಡಾ.ಶವಾಫೆರ್ ಮಹಮ್ಮದ್. ಕಣಚೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಮಹಾ ಬಷೀರ್, ಪತಿ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು.

ಡಾ.ಮಹಾ ಬಷೀರ್ ಮತ್ತು ಡಾ.ಶವಾಫೆರ್ ಮಹಮ್ಮದ್ ವೈದ್ಯ ಜೋಡಿ ಕಳೆದ 8 ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಡಾ. ಮಾಬಷೀರಾ 6 ತಿಂಗಳ ಗರ್ಭಿಣಿಯಾಗಿದ್ದರು. ಡಾ. ಮಾಬಷೀರಾ, ಸೋಂಕು ತಗುಲಿದ ಬಳಿಕ ಇಂಡಿಯಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು:

ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಕೊರೊನಾ ಸೋಂಕಿನಿಂದ ದಂಪತಿ ಮೃತಪಟ್ಟಿದ್ದಾರೆ. ಜೆಮಿನಿ ಫೋಟೋ ಸ್ಟುಡಿಯೋ ಮಾಲೀಕ ರಮೇಶ್(46) ಮತ್ತು ಅನುಸೂಯ(41) ದಂಪತಿ ಮಹಾಮಾರಿ ಕೊರೊನಾಗೆ ಅಸುನೀಗಿದವರು.

couple-in-mulbagal-died-due-to-coronavirus-sas

ಜೆಮಿನಿ ಫೋಟೋ ಸ್ಟುಡಿಯೋ ಮಾಲೀಕ ರಮೇಶ್ ಮತ್ತು ಅನುಸೂಯ ದಂಪತಿ ಮಹಾಮಾರಿ ಕೊರೊನಾಗೆ ಬಲಿ

3 ದಿನಗಳ ಹಿಂದೆ ದಂಪತಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಕೋಲಾರದ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ದಂಪತಿ ಆಸ್ಪತ್ರೆಯಲ್ಲೇ ಇಂದು ಮೃತಪಟ್ಟಿದ್ದಾರೆ.

(young doctor in mangalore and couple in mulbagal died due to coronavirus)

ಇದನ್ನೂ ಓದಿ: ಅಕ್ಕಿ ಕೇಳಿದವರಿಗೆ ಸತ್ತುಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ!

Published On - 2:44 pm, Wed, 28 April 21

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ