AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕು: ಮಂಗಳೂರಿನಲ್ಲಿ ಗರ್ಭಿಣಿ ವೈದ್ಯೆ ಬಲಿ; ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು

ಕೊರೊನಾ ಸೋಂಕಿಗೆ ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿಯಾಗಿದ್ದರೆ ಕೋಲಾರದ ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕು: ಮಂಗಳೂರಿನಲ್ಲಿ ಗರ್ಭಿಣಿ ವೈದ್ಯೆ ಬಲಿ; ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು
ಕೊರೊನಾ ಸೋಂಕು: ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿ
ಸಾಧು ಶ್ರೀನಾಥ್​
|

Updated on:Apr 28, 2021 | 2:51 PM

Share

ಮಂಗಳೂರು: ಕೊರೊನಾ ಸೋಂಕಿಗೆ ಮಂಗಳೂರಿನಲ್ಲಿ 27 ವರ್ಷದ ಗರ್ಭಿಣಿ ವೈದ್ಯೆ ಬಲಿಯಾಗಿದ್ದರೆ ಕೋಲಾರದ ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ. ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಕೇರಳದ ತಲಶೇರಿ ಮೂಲದ ಡಾ.ಮಹಾ ಬಷೀರ್ ಸಾವನ್ನಪ್ಪಿದ್ದಾರೆ. 6 ತಿಂಗಳ ಗರ್ಭಿಣಿಯಾಗಿದ್ದ ಡಾ.ಮಹಾ ಬಷೀರ್ ಕೊನೆಯುಸಿರೆಳೆದಿದ್ದಾರೆ. ವೈದ್ಯೆಯ ಎಲ್ಲ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್ ಆಗಿದೆ. ಮೃತ ವೈದ್ಯೆಯ ಹೆಸರು ಡಾ‌.ಮಹಾ ಬಷೀರ್. ಆಕೆಯ ಪತಿಯ ಹೆಸರು ಡಾ.ಶವಾಫೆರ್ ಮಹಮ್ಮದ್. ಕಣಚೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಮಹಾ ಬಷೀರ್, ಪತಿ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು.

ಡಾ.ಮಹಾ ಬಷೀರ್ ಮತ್ತು ಡಾ.ಶವಾಫೆರ್ ಮಹಮ್ಮದ್ ವೈದ್ಯ ಜೋಡಿ ಕಳೆದ 8 ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಡಾ. ಮಾಬಷೀರಾ 6 ತಿಂಗಳ ಗರ್ಭಿಣಿಯಾಗಿದ್ದರು. ಡಾ. ಮಾಬಷೀರಾ, ಸೋಂಕು ತಗುಲಿದ ಬಳಿಕ ಇಂಡಿಯಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು:

ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಕೊರೊನಾ ಸೋಂಕಿನಿಂದ ದಂಪತಿ ಮೃತಪಟ್ಟಿದ್ದಾರೆ. ಜೆಮಿನಿ ಫೋಟೋ ಸ್ಟುಡಿಯೋ ಮಾಲೀಕ ರಮೇಶ್(46) ಮತ್ತು ಅನುಸೂಯ(41) ದಂಪತಿ ಮಹಾಮಾರಿ ಕೊರೊನಾಗೆ ಅಸುನೀಗಿದವರು.

couple-in-mulbagal-died-due-to-coronavirus-sas

ಜೆಮಿನಿ ಫೋಟೋ ಸ್ಟುಡಿಯೋ ಮಾಲೀಕ ರಮೇಶ್ ಮತ್ತು ಅನುಸೂಯ ದಂಪತಿ ಮಹಾಮಾರಿ ಕೊರೊನಾಗೆ ಬಲಿ

3 ದಿನಗಳ ಹಿಂದೆ ದಂಪತಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಕೋಲಾರದ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ದಂಪತಿ ಆಸ್ಪತ್ರೆಯಲ್ಲೇ ಇಂದು ಮೃತಪಟ್ಟಿದ್ದಾರೆ.

(young doctor in mangalore and couple in mulbagal died due to coronavirus)

ಇದನ್ನೂ ಓದಿ: ಅಕ್ಕಿ ಕೇಳಿದವರಿಗೆ ಸತ್ತುಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ!

Published On - 2:44 pm, Wed, 28 April 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ