AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Short Circuit: ಕಬ್ಬಿಣದ ಏಣಿಗೆ ವಿದ್ಯುತ್ ತಂತಿ ತಂಗುಲಿ ಯುವ ಕೃಷಿಕ ಸಾವು

ತೋಟದಲ್ಲಿ ಕಾಳು ಮೆಣಸು ಕೊಯ್ಲು ಮಾಡುವಾಗ ಕಬ್ಬಿಣದ ಏಣಿಗೆ ತಾಗಿದ ವಿದ್ಯುತ್ ತಂತಿಯಿಂದ ಯುವಕ ಬಲಿಯಾಗಿದ್ದಾನೆ.

Short Circuit: ಕಬ್ಬಿಣದ ಏಣಿಗೆ ವಿದ್ಯುತ್ ತಂತಿ ತಂಗುಲಿ ಯುವ ಕೃಷಿಕ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Dec 16, 2021 | 1:27 PM

Share

ಮಡಿಕೇರಿ: ವಿದ್ಯುತ್ ತಂತಿ ತಂಗುಲಿ ಯುವ ಕೃಷಿಕ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಿಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ನಾಮೆರ ದಿನೇಶ್ (22) ಮೃತಪಟ್ಟ ಯುವಕ. ತೋಟದಲ್ಲಿ ಕಾಳು ಮೆಣಸು ಕೊಯ್ಲು ಮಾಡುವಾಗ ಕಬ್ಬಿಣದ ಏಣಿಗೆ ತಾಗಿದ ವಿದ್ಯುತ್ ತಂತಿಯಿಂದ ಯುವಕ ಬಲಿಯಾಗಿದ್ದಾನೆ.

ಚಿಕ್ಕಬಳ್ಳಾಪುರದಲ್ಲಿ ಬೈಕ್ ಸವಾರನಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಮುಂಬದಿ ಬೈಕ್ ಸವಾರ ವಿಶ್ವನಾಥ್ ಆಚಾರಿ ಸ್ಥಿತಿ ಚಿಂತಾಜನಕವಾಗಿದೆ. ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ಘಟನೆ ನಡೆದಿದೆ. ಆರೋಪಿ ಬೈಕ್ ಸವಾರನಿಗೆ ಸಾರ್ವಜನಿಕರು ಛೀಮಾರಿ ಹಾಕಿದರು. ಗಾಯಾಳು ವಿಶ್ವನಾಥ್ ಆಚಾರಿಯನ್ನು ನಿಮ್ಮಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯರ ನಿರ್ಲಕ್ಷ್ಯ ಆರೋಪ ಆಸ್ಪತ್ರೆಯಲ್ಲಿ ರೋಗಿ ಸಾವು ಕೊಪ್ಪಳ ಜಿಲ್ಲೆ ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂತಹದೊಂದು ಆರೋಪ ಕೇಳಿ ಬಂದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಆಸ್ಪತ್ರೆಯಲ್ಲಿ ರೋಗಿ ಮೃತಪಟ್ಟ ಆರೋಪ ಕೇಳಿ ಬಂದಿದೆ. ಮರಿಯಪ್ಪ ಹಗೇದಾಳ ಮೃತ ರೋಗಿ. ಮೃತ ರೋಗಿಯ ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕುಕನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾವಗಡ: ಮನೆಯಲ್ಲಿದ್ದ ವೃದ್ದೆಯ ಮಾಂಗಲ್ಯ ಸರ ಕದ್ದು ಪರಾರಿ ಮನೆಯಲ್ಲಿ ಇದ್ದ ವೃದ್ದೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾಗರತ್ನಮ್ಮ ಹಾಗೂ ಪತಿ ನಾರಾಯಣಪ್ಪ ಮನೆಯಲ್ಲಿ ಇರುವುದನ್ನ ಗಮನಿಸಿದ ಕಳ್ಳರು ಏಕಾಏಕಿ ಮನೆಗೆ ನುಗ್ಗಿದ್ದಾರೆ. ಈ ವೇಳೆ ನಾಗರತ್ನಮ್ಮ ಕತ್ತಿನಲ್ಲಿದ್ದ 60 ಗ್ರಾಂ ಮಾಂಗಲ್ಯ ಸರವನ್ನ ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ