AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಹಾವೇರಿಯ ಬಾಲಕಿ ಹೆಸರು ಸೇರ್ಪಡೆ

1 ರಿಂದ 20ರವರೆಗಿನ ಮಗ್ಗಿಗಳು, 1 ರಿಂದ 100ರವರೆಗಿನ ಸಮ ಮತ್ತು ಬೆಸ ಸಂಖ್ಯೆಗಳು, 100 ರಿಂದ 1ರ ವರೆಗಿನ ಬ್ಯಾಕ್‌ವರ್ಡ್ ನಂಬರ್, 50 ಅಪೋಸಿಟ್ ವರ್ಡ್ಸ್, ಗಣಿತದ ಚಿಹ್ನೆಗಳು, ಆಕಾರಗಳು ಇವೆಲ್ಲವುಗಳನ್ನು ತಪ್ಪದೆ ಹೇಳುವುದನ್ನು ಪರಿಶೀಲಿಸಿ ಬಾಲಕಿ ನಮ್ರತಾಳ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​​ಗೆ ದಾಖಲಿಸಲಾಗಿದೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಹಾವೇರಿಯ ಬಾಲಕಿ ಹೆಸರು ಸೇರ್ಪಡೆ
ನಮ್ರತಾ
TV9 Web
| Edited By: |

Updated on:Jun 28, 2021 | 10:32 AM

Share

ಹಾವೇರಿ : ಸಾಮಾನ್ಯವಾಗಿ ಬಾಲ್ಯದಲ್ಲಿ ಮಕ್ಕಳು ಮಾತನಾಡುವುದೇ ಮನೆಯವರಿಗೆ ಮಕ್ಕಳು ಮಾಡಿದ ದೊಡ್ಡ ಸಾಧನೆ. ಆದರೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಗುಂಡಗಟ್ಟಿ ಗ್ರಾಮದ ಎಂಟು ವರ್ಷದ ಬಾಲಕಿ ಚಿಕ್ಕ ವಯಸ್ಸಿನಲ್ಲೇ ದಾಖಲೆ ಸೃಷ್ಟಿ ಮಾಡಿದ್ದಾಳೆ. ಸಾಮಾನ್ಯ ಜ್ಞಾನ, ವಿಜ್ಞಾನ, ಗಣಿತ ಹೀಗೆ ಸಣ್ಣ ವಯಸ್ಸಿನಲ್ಲೇ ಸಾಕಷ್ಟು ವಿಷಯಗಳಲ್ಲಿ ಜ್ಞಾನ ಸಂಪಾದನೆ ಮಾಡಿದ್ದಾಳೆ. ಗುಂಡಗಟ್ಟಿ ಗ್ರಾಮದ ಕುಮಾರ ಮತ್ತು ಪೂರ್ಣಿಮಾ ಗುಡದಳ್ಳಿ ದಂಪತಿಯ ಮಗಳು ನಮ್ರತಾಳಿಗೆ ಈಗ 8 ವರ್ಷ 3 ತಿಂಗಳು ಆಗಿವೆ. ಆದರೆ ನಮ್ರತಾ ಗುಡದಳ್ಳಿಯ ಜ್ಞಾನ ಶಕ್ತಿಯಿಂದಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಹೆಸರು ಸೇರ್ಪಡೆಯಾಗಿದೆ.

ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದುತ್ತಿರುವ ನಮೃತಾ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​​ಗೆ ತನ್ನ ಹೆಸರನ್ನು ದಾಖಲಿಸಲು ಹಲವಾರು ವಿಷಯಗಳಲ್ಲಿ ಪ್ರಾವಿಣ್ಯತೆ ಪಡೆದಿದ್ದಾಳೆ. 28 ರಾಜ್ಯಗಳು ಮತ್ತು ಅವುಗಳ ರಾಜಧಾನಿಗಳು, 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಅವುಗಳ ರಾಜಧಾನಿಗಳು, ಭಾರತದ ರಾಷ್ಟ್ರಪತಿಗಳು, ಭಾರತದ ಪ್ರಧಾನ ಮಂತ್ರಿಗಳು, ಕರ್ನಾಟಕದ ಮುಖ್ಯಮಂತ್ರಿಗಳು, ಕರ್ನಾಟಕದ ಜಿಲ್ಲೆಗಳು ಮತ್ತು ಮಹಾನಗರ ಪಾಲಿಕೆಗಳು, ಖಂಡಗಳು, ಮಹಾಸಾಗರಗಳು, ಸೌರವ್ಯೂಹದ ಗ್ರಹಗಳು ಹೀಗೆ ಎಲ್ಲವನ್ನೂ ನಮ್ರತಾ ಪಟಾಪಟ್ ಎಂದು ಹೇಳುತ್ತಾಳೆ.

ಅಲ್ಲದೆ ಜ್ಞಾನಪೀಠ ಪ್ರಶಸ್ತಿ ವಿಜೇತರು, ಗಾದೆಮಾತುಗಳು, ಕರ್ನಾಟಕದ ರಾಜಮನೆತನಗಳು, ನದಿಗಳ ಹೆಸರುಗಳು, 100 ಸಾಮಾನ್ಯ ಜ್ಞಾನದ ಪ್ರಶೋತ್ತರಗಳು, 1 ರಿಂದ 20ರವರೆಗಿನ ಮಗ್ಗಿಗಳು, 1 ರಿಂದ 100ರವರೆಗಿನ ಸಮ ಮತ್ತು ಬೆಸ ಸಂಖ್ಯೆಗಳು, 100 ರಿಂದ 1ರ ವರೆಗಿನ ಬ್ಯಾಕ್‌ವರ್ಡ್ ನಂಬರ್, 50 ಅಪೋಸಿಟ್ ವರ್ಡ್ಸ್, ಗಣಿತದ ಚಿಹ್ನೆಗಳು, ಆಕಾರಗಳು ಇವೆಲ್ಲವುಗಳನ್ನು ತಪ್ಪದೆ ಹೇಳುವುದನ್ನು ಪರಿಶೀಲಿಸಿ ಬಾಲಕಿ ನಮ್ರತಾಳ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​​ಗೆ ದಾಖಲಿಸಲಾಗಿದೆ.

ನಮ್ರತಾ ಬಾಲ್ಯದಿಂದಲೂ ಸಾಕಷ್ಟು ಬುದ್ದಿವಂತಳು. ಓದುವುದು ಮತ್ತು ಬರೆಯುವುದು ಸೇರಿದಂತೆ ಎಲ್ಲದರಲ್ಲೂ ಮುಂದಿದ್ದಾಳೆ. ಅವಳ‌ ತಂದೆ ಮತ್ತು ತಾಯಿಯ ಮಾರ್ಗದರ್ಶನದಲ್ಲಿ ಸಾಮಾನ್ಯ ಜ್ಞಾನ, ಗಣಿತ, ವಿಜ್ಞಾನ, ಸಾಹಿತ್ಯ ಹೀಗೆ ಅನೇಕ ವಿಷಯಗಳನ್ನು ತಟ್​ ಎಂದು ಹೇಳುತ್ತಾಳೆ. ಆಕೆಯ ಪ್ರತಿಭೆಯನ್ನು ಗುರುತಿಸಿ ಆಕೆಯ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲಿಸಲಾಗಿದೆ. ಇದು ನಮ್ಮ ಕುಟುಂಬಕ್ಕೆ ಹಾಗೂ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ನಮೃತಾಳ ಸಂಬಂಧಿ ಈರಪ್ಪ ಬಣಕಾರ ತಿಳಿಸಿದ್ದಾರೆ.

ಇದನ್ನೂ ಓದಿ:

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮೂರೂವರೆ ವರ್ಷದ ಬಾಲಕನ ಹೆಸರು ದಾಖಲು

ಒಂದು ಕೆಜಿ ರಾಗಿಯಲ್ಲಿ ಎಷ್ಟು ಕಾಳುಗಳು ಇರುತ್ತವೆ? ಎಣಿಸಿ, ರೈತಶ್ರಮದ ಮಹತ್ವ ಸಾರಿದ್ದಕ್ಕೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಮಾನ್ಯತೆ

Published On - 10:20 am, Mon, 28 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?