AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ದಾವಣಗೆರೆ ಯುವಕ; ನಗರಕ್ಕೆ ಸ್ಯಾನಿಟೈಜರ್ ಸಿಂಪಡಣೆ

ನಾನು ಮತ್ತು ನನ್ನ ಸ್ನೇಹಿತರು ಸೇರಿ ಈ ನಿರ್ಣಯ ಕೈಗೊಂಡಿದ್ದು, ಅರಸ್ ಹಾಗೂ ಜಾಲಿ ನಗರಕ್ಕೆ ಸ್ಯಾನಿಟೈಜ್​ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದೇನೆ ಎಂದು ಶ್ರೀಕಾಂತ ನೀಲಗುಂದ ತಿಳಿಸಿದ್ದಾರೆ.

ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ದಾವಣಗೆರೆ ಯುವಕ; ನಗರಕ್ಕೆ ಸ್ಯಾನಿಟೈಜರ್ ಸಿಂಪಡಣೆ
ನಗರಕ್ಕೆ ಸ್ಯಾನಿಟೈಜರ್ ಸಿಂಪಡಣೆ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ
TV9 Web
| Edited By: |

Updated on:Jun 04, 2021 | 1:42 PM

Share

ದಾವಣಗೆರೆ: ಸಾಮಾನ್ಯವಾಗಿ ಹುಟ್ಟುಹಬ್ಬವನ್ನು ದುಂದು ವೆಚ್ಚ ಮಾಡಿ, ಅತ್ಯಂತ ವಿಜೃಂಭಣೆಯಿಂದ ಕೆಕ್​ ಕತ್ತರಿಸಿ ಆಚರಣೆ ಮಾಡುತ್ತಾರೆ. ಆದರೆ ದಾವಣಗೆರೆಯ ಯುವಕನೊಬ್ಬ ತನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾನೆ. ಅನಗತ್ಯವಾಗಿ ಹಣ ವ್ಯಯಿಸುವ ಬದಲು ಊರಿಗೆ ನೆರವಾಗುವ ಯೋಜನೆಗೆ ಮುಂದಾಗಿದ್ದು, ಸೋಂಕು ಹೆಚ್ಚಾಗಿರುವ ನಗರಗಳಿಗೆ ಸ್ಯಾನಿಟೈಜರ್ ಮಾಡುವ ಮೂಲಕ ಜನ್ಮ ದಿನವನ್ನು ಆಚರಣೆ ಮಾಡಿಕೊಂಡಿದ್ದಾ‌ನೆ.

ದಾವಣಗೆರೆ ನಗರದ ದೇವರಾಜ್‌ ಅರಸ್ ಬಡಾವಣೆಯ ಶ್ರೀಕಾಂತ್ ನೀಲಗುಂದ ಎನ್ನುವ ಯುವಕ ತನ್ನ ಹುಟ್ಟುಹಬ್ಬದ ಪ್ರಯುಕ್ತ ಜನರಿಗೆ ಅದರಲ್ಲೂ ಈ ಕೊರೊನಾ ಸಂಕಷ್ಟ ಕಾಲದಲ್ಲಿ ಏನಾದರು ಒಂದು ಉಪಯೋಗವಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ನಿರ್ಧರಿಸಿ, ಟೆಂಪೋ ಒಂದರಲ್ಲಿ ಟ್ಯಾಂಕ್ ಇರಿಸಿ ದೇವರಾಜ್ ಅರಸ್ ಬಡಾವಣೆ, ಜಾಲಿನಗರ ಸೇರಿದಂತೆ ಹಲವು ಕಡೆಗಳಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡಲು ಮುಂದಾಗಿದ್ದಾನೆ.

ಎರಡು ದಿನಗಳ ಕಾಲ ನಿರಂತರವಾಗಿ ಎರಡು ನಗರಗಳಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡುತ್ತೇವೆ, ಹುಟ್ಟು ಹಬ್ಬದಂದು ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಈ ರೀತಿಯಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ ಈ ನಿರ್ಣಯ ಕೈಗೊಂಡಿದ್ದು, ಅರಸ್ ಹಾಗೂ ಜಾಲಿ ನಗರಕ್ಕೆ ಸ್ಯಾನಿಟೈಜ್​ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದೇನೆ ಎಂದು ಶ್ರೀಕಾಂತ ನೀಲಗುಂದ ತಿಳಿಸಿದ್ದಾರೆ.

ಪ್ರತಿ ವರ್ಷ ಜನ್ಮದಿನವನ್ನು ವಿಶೇಷ ರೀತಿಯಲ್ಲಿ ಆಚರಿಸುತ್ತೇನೆ. ಕಳೆದ ವರ್ಷ ಸಂಕಷ್ಟದಲ್ಲಿದ್ದ ಜನರಿಗೆ ನನ್ನ ಕೈಲಾದಷ್ಟು ಸಹಾಯ ಮಾಡಿದ್ದು, ಕುಟುಂಬಗಳಿಗೆ ಆಹಾರ ಕಿಟ್ ಕೊಟ್ಟಿದೆ. ಈ ಸಲ ನಮ್ಮ ಪ್ರದೇಶವನ್ನೇ ಸ್ಯಾನಿಟೈಜ್ ಮಾಡುವುದು ಮತ್ತು ಸ್ವಚ್ಛಗೊಳಿಸುವ ಕಾರ್ಯನಿರ್ವಹಿಸಿದ್ದು, ಕೊರೊನಾ ಸೋಂಕು ಹರಡುವಿಕೆಗೆ ತಡೆವೊಡ್ಡಲು ಪ್ರಯತ್ನಿಸಿದ್ದೇವೆ ಎಂದು ಶ್ರೀಕಾಂತ ನೀಲಗುಂದ ಹೇಳಿದ್ದಾರೆ.

ಇದನ್ನೂ ಓದಿ:

ವಿಭಿನ್ನವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಾಗರದ ಯುವಕ; ಜನುಮದಿನಕ್ಕೂ ಮೊದಲು ಸ್ವಚ್ಛತಾ ಕಾರ್ಯ

ಲಾಕ್​ಡೌನ್ ಸಂಕಷ್ಟ; ಕೊ​ಪ್ಪಳದ 100 ಕುಟುಂಬಗಳ ನೆರವಿಗೆ ನಿಂತ ಇಂಗ್ಲೆಂಡ್ ದೇಶದ ಸಹೋದರರು

Published On - 1:42 pm, Fri, 4 June 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು