AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಜತೆ ಹೋರಾಡಿ ಪ್ರಾಣ ಉಳಿಸಿಕೊಂಡ ಯುವಕ: ಮೊಸಳೆಯಿಂದ ವ್ಯಕ್ತಿ ಗ್ರೇಟ್ ಎಸ್ಕೇಪ್

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಏಕಾಏಕಿ ದಾಳಿ ಮಾಡಿದ ಚಿರತೆ ವಿರುದ್ಧ ಹೋರಾಡಿ ಪ್ರಾಣ ಉಳಿಸಿಕೊಂಡಿರುವಂತಹ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಶಿವಪುರ ಬಳಿ‌ ನದಿ ದಡಕ್ಕೆ ನೀರು ಕುಡಿಯಲು ಹೋಗಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ಮಾಡಿದ್ದು, ಅದೃಷ್ಟವಶಾತ್​ ಪಾರಾಗಿದ್ದಾರೆ.

ಚಿರತೆ ಜತೆ ಹೋರಾಡಿ ಪ್ರಾಣ ಉಳಿಸಿಕೊಂಡ ಯುವಕ: ಮೊಸಳೆಯಿಂದ ವ್ಯಕ್ತಿ ಗ್ರೇಟ್ ಎಸ್ಕೇಪ್
ಚಿರತೆ ಜತೆ ಹೋರಾಡಿ ಪ್ರಾಣ ಉಳಿಸಿಕೊಂಡ ಯುವಕ: ಮೊಸಳೆಯಿಂದ ವ್ಯಕ್ತಿ ಗ್ರೇಟ್ ಎಸ್ಕೇಪ್
ಮಂಜುನಾಥ ಕೆಬಿ
| Edited By: |

Updated on: Aug 12, 2024 | 6:39 PM

Share

ಹಾಸನ, ಆಗಸ್ಟ್​ 12: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ಚಿರತೆಯೊಂದಿಗೆ (Leopard) ಹೋರಾಡಿ ಯುವಕ (boy) ಪ್ರಾಣ ಉಳಿಸಿಕೊಂಡಿರುವಂತಹ ರೋಚಕ ಘಟನೆಯೊಂದು ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್​ ಚಿರತೆ ಜೊತೆ ಹೋರಾಡಿ ಬಚಾವ್​ ಆದ ಯುವಕ. ದಾಳಿಯಿಂದಾಗಿ ನವೀನ್​​​ ಕೈ, ಕಾಲಿಗೆ ಗಾಯಗಳಾಗಿವೆ. ಸದ್ಯ ಹೊಳೆನರಸೀಪುರ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

ಜಮೀನಿನಲ್ಲಿ ನವೀನ್ ಕೃಷಿ ಕೆಲಸ ಮಾಡುತ್ತಿದ್ದ. ಈ ವೇಳೆ ಏಕಾಏಕಿ ಆತನ ಮೇಲೆ ಚಿರತೆ ದಾಳಿ ಮಾಡಿದೆ.  ಕೈಯಲ್ಲಿ ಕುಡುಗೋಲು ಹಿಡಿದಿದ್ದರಿಂದ ಚಿರತೆ ವಿರುದ್ಧ ಸೆಣೆಸಾಡಿದ್ದಾನೆ. ಬಳಿಕ ಕಿರುಚಾಡುತ್ತಿದ್ದಂತೆ ಅಕ್ಕಪಕ್ಕದ ಜನರು ಧಾವಿಸಿದ್ದಾರೆ. ಜನರನ್ನ ನೋಡಿದ ಚಿರತೆ ಕಾಡಿನೊಳಗೆ ಓಡಿ ಹೋಗಿದೆ.

ಇದನ್ನೂ ಓದಿ: ಮಂಗಳೂರು: ಮನೆಯ ಹೊರಗಡೆ ಮಲಗಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ; ವಿಡಿಯೋ ಸೆರೆ

ಸದ್ಯ ನವೀನ್​ ದಾಖಲಾಗಿರುವ ಆಸ್ಪತ್ರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.  ಗೋಪನಹಳ್ಳಿ ಕೆರಗೋಡು ಭಾಗದಲ್ಲಿ ಚಿರತೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೂಡಲೇ ಬೋನು ಇಟ್ಟು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನದಿ ದಡಕ್ಕೆ ನೀರು ಕುಡಿಯಲು ಹೋದ ವ್ಯಕ್ತಿ ಮೇಲೆ ಮೊಸಳೆ ದಾಳಿ: ಬಲಗೈ ಕಟ್​

ಯಾದಗಿರಿ: ನದಿ ದಡಕ್ಕೆ ನೀರು ಕುಡಿಯಲು ಹೋಗಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ಮಾಡಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಬದುಕುಳಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಶಿವಪುರ ಬಳಿ‌ ನಡೆದಿದೆ. ಶಿವಪುರ ಗ್ರಾಮದ ನಿವಾಸಿ ಭೀಮಾಶಂಕರ ಮೊಸಳೆ ದಾಳಿಗೆ ಒಳಗಾದ ವ್ಯಕ್ತಿ. ಮೊಸಳೆ ದಾಳಿಯಿಂದ ಬಲಗೈ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ​ಖಂಡ್ರೆ ಖಡಕ್​ ಸೂಚನೆ, ಕಠಿಣ ಕ್ರಮದ ಎಚ್ಚರಿಕೆ

ಭೀಮಾಶಂಕರ ನದಿ ತೀರಕ್ಕೆ ದನ ಮೇಯಿಸಲು ಹೋಗಿದ್ದರು. ಈ ವೇಳೆ ನೀರು ಕುಡಿಯಲು ಹೋದಾಗ ದಾಳಿ ಮಾಡಿದೆ. ಗಾಯಗೊಂಡ ಭೀಮಾಶಂಕರಗೆ ರಾಯಚೂರಿನ ರಿಮ್ಸ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Manjunath KB
Manjunath KB
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ