AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಜತೆ ಹೋರಾಡಿ ಪ್ರಾಣ ಉಳಿಸಿಕೊಂಡ ಯುವಕ: ಮೊಸಳೆಯಿಂದ ವ್ಯಕ್ತಿ ಗ್ರೇಟ್ ಎಸ್ಕೇಪ್

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಏಕಾಏಕಿ ದಾಳಿ ಮಾಡಿದ ಚಿರತೆ ವಿರುದ್ಧ ಹೋರಾಡಿ ಪ್ರಾಣ ಉಳಿಸಿಕೊಂಡಿರುವಂತಹ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಶಿವಪುರ ಬಳಿ‌ ನದಿ ದಡಕ್ಕೆ ನೀರು ಕುಡಿಯಲು ಹೋಗಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ಮಾಡಿದ್ದು, ಅದೃಷ್ಟವಶಾತ್​ ಪಾರಾಗಿದ್ದಾರೆ.

ಚಿರತೆ ಜತೆ ಹೋರಾಡಿ ಪ್ರಾಣ ಉಳಿಸಿಕೊಂಡ ಯುವಕ: ಮೊಸಳೆಯಿಂದ ವ್ಯಕ್ತಿ ಗ್ರೇಟ್ ಎಸ್ಕೇಪ್
ಚಿರತೆ ಜತೆ ಹೋರಾಡಿ ಪ್ರಾಣ ಉಳಿಸಿಕೊಂಡ ಯುವಕ: ಮೊಸಳೆಯಿಂದ ವ್ಯಕ್ತಿ ಗ್ರೇಟ್ ಎಸ್ಕೇಪ್
ಮಂಜುನಾಥ ಕೆಬಿ
| Edited By: |

Updated on: Aug 12, 2024 | 6:39 PM

Share

ಹಾಸನ, ಆಗಸ್ಟ್​ 12: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ಚಿರತೆಯೊಂದಿಗೆ (Leopard) ಹೋರಾಡಿ ಯುವಕ (boy) ಪ್ರಾಣ ಉಳಿಸಿಕೊಂಡಿರುವಂತಹ ರೋಚಕ ಘಟನೆಯೊಂದು ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್​ ಚಿರತೆ ಜೊತೆ ಹೋರಾಡಿ ಬಚಾವ್​ ಆದ ಯುವಕ. ದಾಳಿಯಿಂದಾಗಿ ನವೀನ್​​​ ಕೈ, ಕಾಲಿಗೆ ಗಾಯಗಳಾಗಿವೆ. ಸದ್ಯ ಹೊಳೆನರಸೀಪುರ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

ಜಮೀನಿನಲ್ಲಿ ನವೀನ್ ಕೃಷಿ ಕೆಲಸ ಮಾಡುತ್ತಿದ್ದ. ಈ ವೇಳೆ ಏಕಾಏಕಿ ಆತನ ಮೇಲೆ ಚಿರತೆ ದಾಳಿ ಮಾಡಿದೆ.  ಕೈಯಲ್ಲಿ ಕುಡುಗೋಲು ಹಿಡಿದಿದ್ದರಿಂದ ಚಿರತೆ ವಿರುದ್ಧ ಸೆಣೆಸಾಡಿದ್ದಾನೆ. ಬಳಿಕ ಕಿರುಚಾಡುತ್ತಿದ್ದಂತೆ ಅಕ್ಕಪಕ್ಕದ ಜನರು ಧಾವಿಸಿದ್ದಾರೆ. ಜನರನ್ನ ನೋಡಿದ ಚಿರತೆ ಕಾಡಿನೊಳಗೆ ಓಡಿ ಹೋಗಿದೆ.

ಇದನ್ನೂ ಓದಿ: ಮಂಗಳೂರು: ಮನೆಯ ಹೊರಗಡೆ ಮಲಗಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ; ವಿಡಿಯೋ ಸೆರೆ

ಸದ್ಯ ನವೀನ್​ ದಾಖಲಾಗಿರುವ ಆಸ್ಪತ್ರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.  ಗೋಪನಹಳ್ಳಿ ಕೆರಗೋಡು ಭಾಗದಲ್ಲಿ ಚಿರತೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೂಡಲೇ ಬೋನು ಇಟ್ಟು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನದಿ ದಡಕ್ಕೆ ನೀರು ಕುಡಿಯಲು ಹೋದ ವ್ಯಕ್ತಿ ಮೇಲೆ ಮೊಸಳೆ ದಾಳಿ: ಬಲಗೈ ಕಟ್​

ಯಾದಗಿರಿ: ನದಿ ದಡಕ್ಕೆ ನೀರು ಕುಡಿಯಲು ಹೋಗಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ಮಾಡಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಬದುಕುಳಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಶಿವಪುರ ಬಳಿ‌ ನಡೆದಿದೆ. ಶಿವಪುರ ಗ್ರಾಮದ ನಿವಾಸಿ ಭೀಮಾಶಂಕರ ಮೊಸಳೆ ದಾಳಿಗೆ ಒಳಗಾದ ವ್ಯಕ್ತಿ. ಮೊಸಳೆ ದಾಳಿಯಿಂದ ಬಲಗೈ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ​ಖಂಡ್ರೆ ಖಡಕ್​ ಸೂಚನೆ, ಕಠಿಣ ಕ್ರಮದ ಎಚ್ಚರಿಕೆ

ಭೀಮಾಶಂಕರ ನದಿ ತೀರಕ್ಕೆ ದನ ಮೇಯಿಸಲು ಹೋಗಿದ್ದರು. ಈ ವೇಳೆ ನೀರು ಕುಡಿಯಲು ಹೋದಾಗ ದಾಳಿ ಮಾಡಿದೆ. ಗಾಯಗೊಂಡ ಭೀಮಾಶಂಕರಗೆ ರಾಯಚೂರಿನ ರಿಮ್ಸ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ